ಶಿವರಾಜ್‌ಕುಮಾರ್ - ಉಪೇಂದ್ರ 
ಸಿನಿಮಾ ಸುದ್ದಿ

ಕಬ್ಜ ಸಿನಿಮಾದ ಆಡಿಯೋ ಬಿಡುಗಡೆ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ನಟ ಶಿವರಾಜಕುಮಾರ್

ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಅತಿಥಿಯಾಗಿ ಆಗಮಿಸಲಿದ್ದು, ನಾಯಕ ಉಪೇಂದ್ರ, ನಾಯಕಿ ಶ್ರೀಯಾ ಶರಣ್, ದುನಿಯಾ ವಿಜಯ್, ಧನಂಜಯ್ ಸೇರಿದಂತೆ ಹಲವರು ಆಗಮಿಸಲಿದ್ದಾರೆ. 

ಮಾರ್ಚ್ 17 ರಂದು ಬಿಡುಗಡೆಯಾಗುವ ಕಬ್ಜ ಚಿತ್ರ ಎಲ್ಲೆಡೆ ಭಾರಿ ನಿರೀಕ್ಷೆ ಹುಟ್ಟುಹಾಕಿದೆ. ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಕ್ರಮವಾಗಿ ಟೈಟಲ್ ಟ್ರ್ಯಾಕ್ ಮತ್ತು ನಮಾಮಿ ನಮಾಮಿ ಹಾಡನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಇದೀಗ ಆರ್ ಚಂದ್ರು ಅವರು ಫೆಬ್ರುವರಿ 26 ರಂದು ಅವರ ಹುಟ್ಟೂರಾದ ಶಿಡ್ಲಘಟ್ಟದಲ್ಲಿ ನಡೆಯಲಿರುವ ಅದ್ಧೂರಿ ಕಾರ್ಯಕ್ರಮದಲ್ಲಿ ಹಾಡನ್ನು ಅಧಿಕೃತವಾಗಿ ಬಿಡುಗಡೆ ಮಾಡಲಿದ್ದಾರೆ.

ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಅತಿಥಿಯಾಗಿ ಆಗಮಿಸಲಿದ್ದು, ನಾಯಕ ಉಪೇಂದ್ರ, ನಾಯಕಿ ಶ್ರೀಯಾ ಶರಣ್, ದುನಿಯಾ ವಿಜಯ್, ಧನಂಜಯ್ ಸೇರಿದಂತೆ ಹಲವರು ಆಗಮಿಸಲಿದ್ದಾರೆ. ತೆಲುಗು ನಟ ನಿತಿನ್ ಅವರ ನಿರ್ಮಾಣ ಸಂಸ್ಥೆಯು ತೆಲುಗಿನಲ್ಲಿ ಕಬ್ಜ ಸಿನಿಮಾದ ವಿತರಣಾ ಹಕ್ಕುಗಳನ್ನು ಪಡೆದುಕೊಂಡಿದೆ. ಹೀಗಾಗಿ, ಈ ನಟನು ಭಾಗವಹಿಸುವ ಪ್ರಮುಖರಲ್ಲಿ ಒಬ್ಬರಾಗಿದ್ದಾರೆ ಮತ್ತು ಸಂಗೀತ ನಿರ್ದೇಶಕ ಗುರುಕಿರಣ್ ಮ್ಯೂಸಿಕಲ್ ನೈಟ್‌ಗಳನ್ನು ನಡೆಸಲಿದ್ದಾರೆ.

ಜಾನಿ ಮಾಸ್ಟರ್ ಅವರ ನೃತ್ಯ ಸಂಯೋಜನೆಯಲ್ಲಿ ಉಪೇಂದ್ರಾ ಮತ್ತು ತಾನ್ಯಾ ಹೋಪ್ ಒಳಗೊಂಡ ವಿಶೇಷ ಹಾಡೊಂದನ್ನು ಬಹಿರಂಗಪಡಿಸಲು ಚಿತ್ರತಂಡ ಯೋಜಿಸಿದೆ. ನಂತರ, ಮಾರ್ಚ್ 2 ರಂದು ಟ್ರೈಲರ್ ಬಿಡುಗಡೆಗಾಗಿ ತಂಡವು ಮುಂಬೈಗೆ ತೆರಳಲಿದೆ ಮತ್ತು ಬೆಂಗಳೂರು, ಹೈದರಾಬಾದ್, ಚೆನ್ನೈ ಮತ್ತು ಮುಂಬೈನಲ್ಲಿ ಒಂದು ಸುತ್ತಿನ ಪ್ರೀ-ರಿಲೀಸ್ ಕಾರ್ಯಕ್ರಮಗಳನ್ನು ನಡೆಸುವ ನಿರೀಕ್ಷೆಯಿದೆ.

1940-80 ರಲ್ಲಿ ನಡೆದ ಗ್ಯಾಂಗ್‌ಸ್ಟರ್ ಕಥೆಯಲ್ಲಿ, ಉಪೇಂದ್ರ ಅವರು ಭೂಗತ ಲೋಕದ ಡಾನ್‌ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಟ ಸುದೀಪ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಆರ್ ಚಂದ್ರು ಅವರ ಸಿದ್ಧೇಶ್ವರ ಎಂಟರ್‌ಪ್ರೈಸಸ್ ಬ್ಯಾನರ್‌ನಲ್ಲಿ, ಅಲಂಕಾರ್ ಪಾಂಡಿಯನ್ ಸಹಯೋಗದಲ್ಲಿ ಎಂಟಿಬಿ ನಾಗರಾಜ್ ಪ್ರಸ್ತುತಪಡಿಸಿದ ಕಬ್ಜ ಬಹು ಭಾಷೆಗಳಲ್ಲಿ ಬಿಡುಗಡೆಗೆ ಸಿದ್ಧವಾಗಿದೆ. ಚಿತ್ರದಲ್ಲಿ ಅನೂಪ್ ರೇವಣ್ಣ, ಪ್ರಮೋದ್ ಶೆಟ್ಟಿ, ಮುರಳಿ ಶರ್ಮಾ, ಜಗಪತಿ ಬಾಬು, ಡ್ಯಾನಿಶ್ ಅಖ್ತರ್ ಸೈಫಿ, ಪ್ರದೀಪ್ ರಾವತ್, ಕಬೀರ್ ದುಹಾನ್ ಸಿಂಗ್ ಜಯಪ್ರಕಾಶ್ ಮತ್ತು ಕೋಟಾ ಶ್ರೀನಿವಾಸ್ ರಾವ್ ಪ್ರಮುಖ ಪಾತ್ರಗಳಲ್ಲಿದ್ದಾರೆ.

ರವಿ ಬಸ್ರೂರ್ ಅವರ ಸಂಗೀತದೊಂದಿಗೆ, ಕಬ್ಜ ಸಿನಿಮಾಗೆ ಛಾಯಾಗ್ರಹಣ ಮತ್ತು ಸಂಕಲನವನ್ನು ಕ್ರಮವಾಗಿ ಎಜೆ ಶೆಟ್ಟಿ ಮತ್ತು ಮಹೇಶ್ ರೆಡ್ಡಿ ನಿರ್ವಹಿಸಿದ್ದಾರೆ. ಸಾಹಸ ನೃತ್ಯ ಸಂಯೋಜನೆಯನ್ನು ರವಿವರ್ಮ, ವಿಜಯ್ ಮತ್ತು ವಿಕ್ರಮ್ ಮೋರ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT