ವೆನ್ಯಾ ರೈ 
ಸಿನಿಮಾ ಸುದ್ದಿ

'ಎಲ್ಲೋ ಜೋಗಪ್ಪ ನಿನ್ನರಮನೆ' ಸಿನಿಮಾಗೆ ನಟಿ ವೆನ್ಯಾ ರೈ ನಾಯಕಿ

ನಿರ್ದೇಶಕ ಹಯವದನ ಅವರು ತಮ್ಮ ಮುಂಬರುವ ನಿರ್ದೇಶನದ ಎಲ್ಲೋ ಜೋಗಪ್ಪ ನಿನ್ನರಮನೆ ಸಿನಿಮಾಗೆ ನಾಯಕಿಯಾಗಿ ವೆನ್ಯಾ ರೈ ಅವರನ್ನು ಅಂತಿಮಗೊಳಿಸಿದ್ದಾರೆ. ಸಿನಿಮಾದಲ್ಲಿ ಕಂಬ್ಳಿಹುಳ ಖ್ಯಾತಿಯ ಅಂಜನ್ ನಾಗೇಂದ್ರ ನಾಯಕನಾಗಿ ನಟಿಸಿದ್ದಾರೆ. 

ನಿರ್ದೇಶಕ ಹಯವದನ ಅವರು ತಮ್ಮ ಮುಂಬರುವ ನಿರ್ದೇಶನದ ಎಲ್ಲೋ ಜೋಗಪ್ಪ ನಿನ್ನರಮನೆ ಸಿನಿಮಾಗೆ ನಾಯಕಿಯಾಗಿ ವೆನ್ಯಾ ರೈ ಅವರನ್ನು ಅಂತಿಮಗೊಳಿಸಿದ್ದಾರೆ. ಸಿನಿಮಾದಲ್ಲಿ ಕಂಬ್ಳಿಹುಳ ಖ್ಯಾತಿಯ ಅಂಜನ್ ನಾಗೇಂದ್ರ ನಾಯಕನಾಗಿ ನಟಿಸಿದ್ದಾರೆ.

ಸ್ಯಾಂಡಲ್‌ವುಡ್‌ನ ಯುವ ಪ್ರತಿಭೆ ತನ್ನ ಓದು ಮತ್ತು ಸಿನಿಮಾದ ಮೇಲಿನ ಉತ್ಸಾಹದ ನಡುವೆ ಹಗ್ಗಜಗ್ಗಾಟ ನಡೆಸುತ್ತಿದ್ದಾರೆ. ಅವರು ಸದ್ಯ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ಈಗಾಗಲೇ 'ಭಾವಪೂರ್ಣ' ಸಿನಿಮಾ ಮೂಲಕ ಸ್ಯಾಂಡಲ್‌ವುಡ್ ಪ್ರವೇಶಕ್ಕೆ ಸಜ್ಜಾಗಿದ್ದು, ಎಲ್ಲೋ ಜೋಗಪ್ಪ ನಿನ್ನರಮನೆ ಎರಡನೇ ಚಿತ್ರವಾಗಿದೆ. 

ಸಿನಿಮಾ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ಪುತ್ತೂರಿನ ವೆನ್ಯಾ ರೈ, ನಿರ್ದೇಶಕ ಹಯವದನ ಅವರು ಎಡಿಟ್ ಡೆಸ್ಕ್‌ನಲ್ಲಿ 'ಭಾವಪೂರ್ಣ' ಸಿನಿಮಾದಲ್ಲಿನ ತಮ್ಮ ನಟನೆಯನ್ನು ವೀಕ್ಷಿಸಿದರು ಮತ್ತು ಅವರನ್ನೇ ತಮ್ಮ ಸಿನಿಮಾದಲ್ಲಿ ನಟಿಸಲು ನಿರ್ಧರಿಸಿದರು. ಮಾರ್ಚ್‌ನಲ್ಲಿ ಶೂಟಿಂಗ್ ಆರಂಭಿಸಲು ಸಜ್ಜಾಗಿದ್ದಾರೆ. ನಟಿಯಾಗುವ ತನ್ನ ಆಕಾಂಕ್ಷೆಗಳ ಬಗ್ಗೆ ಮಾತನಾಡುತ್ತಾ, ಅದು ಕುಟುಂಬದಲ್ಲಿಯೇ ಇದೆ ಎಂದು ಅವರು ಹೇಳುತ್ತಾರೆ.

ನನ್ನ ತಂದೆ ಚೇತನ್ ರೈ ಮಣಿ ಅವರು ತುಳು ಮತ್ತು ಕನ್ನಡ ಚಲನಚಿತ್ರಗಳು ಮತ್ತು ಒಂದೆರಡು ಟೆಲಿ ಧಾರಾವಾಹಿಗಳಲ್ಲಿ ಕೆಲಸ ಮಾಡಿದ್ದಾರೆ. ನನ್ನ ತಂದೆ ನಾಟಕ ಕಲಾವಿದರಾಗಿದ್ದು, ನಟಿಯಾಗಲು ನನಗೆ ಸ್ಫೂರ್ತಿಯಾಗಿದೆ ಎಂದು ವೆನ್ಯಾ ಹೇಳುತ್ತಾರೆ.
ಎಲ್ಲೋ ಜೋಗಪ್ಪ ನಿನ್ನರಮನೆ ಟ್ರಾವೆಲ್ ಮೂವಿಯಾಗಲಿದ್ದು, ಇದು ತಂದೆ ಮತ್ತು ಮಗನ ಕಥೆಯನ್ನು ಹೇಳುತ್ತದೆ.

ಪಂಡೋರಸ್ ಬಾಕ್ಸ್ ಪ್ರೊಡಕ್ಷನ್ ಮತ್ತು ಕೃಷ್ಣಛಾಯಾ ಚಿತ್ತಾಲ್ ಬ್ಯಾನರ್‌ನಡಿಯಲ್ಲಿ ಪವನ್ ಸಿಮಿಕೇರಿ ಸಹಯೋಗದೊಂದಿಗೆ ಹಯವದನ ನಿರ್ಮಾಪಕರಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಈ ಚಿತ್ರಕ್ಕೆ ಶಿವಪ್ರಸಾದ್ ಸಂಗೀತ, ರವಿಚಂದ್ರನ್ ಸಂಕಲನ ಮತ್ತು ನಟರಾಜ್ ಮದ್ದಳ್ಳ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT