ಮೋಹನ್‌ಲಾಲ್ - ರಜಿನಿಕಾಂತ್ 
ಸಿನಿಮಾ ಸುದ್ದಿ

ನೆಲ್ಸನ್ ನಿರ್ದೇಶನದ ರಜಿನಿಕಾಂತ್ ಅಭಿನಯದ 'ಜೈಲರ್' ಚಿತ್ರತಂಡಕ್ಕೆ ಮೋಹನ್ ಲಾಲ್ ಸೇರ್ಪಡೆ

ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ಲಾಲ್ 'ಜೈಲರ್‌'ನ ಭಾಗವಾಗಿದ್ದಾರೆ ಎಂಬ ಊಹಾಪೋಹಗಳು ಏಳುತ್ತಲೇ, ಚಿತ್ರತಂಡ ಬಹು ರಾಷ್ಟ್ರೀಯ ಪ್ರಶಸ್ತಿ ವಿಜೇತರ ತೆರೆಮರೆಯ ಸ್ಟಿಲ್ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದಲ್ಲಿ ಅವರ ಉಪಸ್ಥಿತಿಯನ್ನು ದೃಢಪಡಿಸಿದೆ.

ಜೈಲರ್ ಸಿನಿಮಾದ ಪಾತ್ರವರ್ಗ ದಿನದಿಂದ ದಿನಕ್ಕೆ ದೊಡ್ಡದಾಗುತ್ತಲೇ ಸಾಗುತ್ತಿದೆ. ನೆಲ್ಸನ್ ನಿರ್ದೇಶನದ, ರಜಿನಿಕಾಂತ್ ಅಭಿನಯದ ಜೈಲರ್ ಸಿನಿಮಾದಲ್ಲಿ ಈಗಾಗಲೇ ಕನ್ನಡದ ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್, ರಮ್ಯಾ ಕೃಷ್ಣನ್, ವಸಂತ್ ರವಿ ಮತ್ತು ಯೋಗಿ ಬಾಬು ಅವರಂತಹ ದೊಡ್ಡ ಪಾತ್ರವರ್ಗವನ್ನು ಹೊಂದಿದೆ.

ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ಲಾಲ್ 'ಜೈಲರ್‌'ನ ಭಾಗವಾಗಿದ್ದಾರೆ ಎಂಬ ಊಹಾಪೋಹಗಳು ಏಳುತ್ತಲೇ, ಚಿತ್ರತಂಡ ಬಹು ರಾಷ್ಟ್ರೀಯ ಪ್ರಶಸ್ತಿ ವಿಜೇತರ ತೆರೆಮರೆಯ ಸ್ಟಿಲ್ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದಲ್ಲಿ ಅವರ ಉಪಸ್ಥಿತಿಯನ್ನು ದೃಢಪಡಿಸಿದೆ.

ಹೈದರಾಬಾದ್‌ನಲ್ಲಿ ರಜಿನಿಕಾಂತ್ ಅವರು ಜೈಲರ್ ಚಿತ್ರೀಕರಣದಲ್ಲಿ ಭಾಗವಹಿಸಿದ್ದು, ಮೋಹನ್‌ಲಾಲ್ ಕೂಡ ನಗರದಲ್ಲಿ ಚಿತ್ರದ ಚಿತ್ರೀಕರಣದಲ್ಲಿ ತೊಡಗಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಜೈಲರ್ ಮಲಯಾಳಂ, ತಮಿಳು ಮತ್ತು ಕನ್ನಡ ಇಂಡಸ್ಟ್ರಿಯ ಮೂವರು ಪ್ರಮುಖ ನಟರನ್ನು ಒಳಗೊಂಡಿರಲಿದೆ.

ಉನ್ನೈ ಪೋಲ್ ಒರುವನ್ ಚಿತ್ರದಲ್ಲಿ ಮೋಹನ್ ಲಾಲ್ ಅವರು ಕಮಲ್ ಹಾಸನ್ ಜೊತೆ ಕೆಲಸ ಮಾಡಿದ್ದರೂ, ರಜಿನಿಕಾಂತ್ ಜೊತೆಗಿನ ಅವರ ಮೊದಲ ಸಿನಿಮಾ ಜೈಲರ್ ಆಗಿರಲಿದೆ. ರಜಿನಿಕಾಂತ್ ಈ ಹಿಂದೆ ಮಣಿರತ್ನಂ ಅವರ ದಳಪತಿಯಲ್ಲಿ ಮತ್ತೋರ್ವ ಮಲಯಾಳಂ ಸೂಪರ್‌ಸ್ಟಾರ್ ಮುಮ್ಮುಟ್ಟಿ ಅವರೊಂದಿಗೆ ಕೆಲಸ ಮಾಡಿದ್ದಾರೆ.

ಸನ್ ಪಿಕ್ಚರ್ಸ್ ಬೆಂಬಲಿತ ಜೈಲರ್ ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜಿಸಲಿದ್ದಾರೆ. ಇತ್ತೀಚೆಗೆ, ತಯಾರಕರು ಜೈಲರ್‌ನ ಟೀಸರ್ ಅನ್ನು ಬಿಡುಗಡೆ ಮಾಡಿದ್ದು, ರಜಿನಿಕಾಂತ್ ಅವರನ್ನು ಮುತ್ತುವೇಲ್ ಪಾಂಡಿಯನ್ ಎಂದು ಪರಿಚಯಿಸಲಾಗಿದೆ. ಈ ವರ್ಷದ ಬೇಸಿಗೆಯಲ್ಲಿ ಜೈಲರ್ ಹೊರಬರುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT