ಮೋಹನ್‌ಲಾಲ್ - ರಜಿನಿಕಾಂತ್ 
ಸಿನಿಮಾ ಸುದ್ದಿ

ನೆಲ್ಸನ್ ನಿರ್ದೇಶನದ ರಜಿನಿಕಾಂತ್ ಅಭಿನಯದ 'ಜೈಲರ್' ಚಿತ್ರತಂಡಕ್ಕೆ ಮೋಹನ್ ಲಾಲ್ ಸೇರ್ಪಡೆ

ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ಲಾಲ್ 'ಜೈಲರ್‌'ನ ಭಾಗವಾಗಿದ್ದಾರೆ ಎಂಬ ಊಹಾಪೋಹಗಳು ಏಳುತ್ತಲೇ, ಚಿತ್ರತಂಡ ಬಹು ರಾಷ್ಟ್ರೀಯ ಪ್ರಶಸ್ತಿ ವಿಜೇತರ ತೆರೆಮರೆಯ ಸ್ಟಿಲ್ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದಲ್ಲಿ ಅವರ ಉಪಸ್ಥಿತಿಯನ್ನು ದೃಢಪಡಿಸಿದೆ.

ಜೈಲರ್ ಸಿನಿಮಾದ ಪಾತ್ರವರ್ಗ ದಿನದಿಂದ ದಿನಕ್ಕೆ ದೊಡ್ಡದಾಗುತ್ತಲೇ ಸಾಗುತ್ತಿದೆ. ನೆಲ್ಸನ್ ನಿರ್ದೇಶನದ, ರಜಿನಿಕಾಂತ್ ಅಭಿನಯದ ಜೈಲರ್ ಸಿನಿಮಾದಲ್ಲಿ ಈಗಾಗಲೇ ಕನ್ನಡದ ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್, ರಮ್ಯಾ ಕೃಷ್ಣನ್, ವಸಂತ್ ರವಿ ಮತ್ತು ಯೋಗಿ ಬಾಬು ಅವರಂತಹ ದೊಡ್ಡ ಪಾತ್ರವರ್ಗವನ್ನು ಹೊಂದಿದೆ.

ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ಲಾಲ್ 'ಜೈಲರ್‌'ನ ಭಾಗವಾಗಿದ್ದಾರೆ ಎಂಬ ಊಹಾಪೋಹಗಳು ಏಳುತ್ತಲೇ, ಚಿತ್ರತಂಡ ಬಹು ರಾಷ್ಟ್ರೀಯ ಪ್ರಶಸ್ತಿ ವಿಜೇತರ ತೆರೆಮರೆಯ ಸ್ಟಿಲ್ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದಲ್ಲಿ ಅವರ ಉಪಸ್ಥಿತಿಯನ್ನು ದೃಢಪಡಿಸಿದೆ.

ಹೈದರಾಬಾದ್‌ನಲ್ಲಿ ರಜಿನಿಕಾಂತ್ ಅವರು ಜೈಲರ್ ಚಿತ್ರೀಕರಣದಲ್ಲಿ ಭಾಗವಹಿಸಿದ್ದು, ಮೋಹನ್‌ಲಾಲ್ ಕೂಡ ನಗರದಲ್ಲಿ ಚಿತ್ರದ ಚಿತ್ರೀಕರಣದಲ್ಲಿ ತೊಡಗಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಜೈಲರ್ ಮಲಯಾಳಂ, ತಮಿಳು ಮತ್ತು ಕನ್ನಡ ಇಂಡಸ್ಟ್ರಿಯ ಮೂವರು ಪ್ರಮುಖ ನಟರನ್ನು ಒಳಗೊಂಡಿರಲಿದೆ.

ಉನ್ನೈ ಪೋಲ್ ಒರುವನ್ ಚಿತ್ರದಲ್ಲಿ ಮೋಹನ್ ಲಾಲ್ ಅವರು ಕಮಲ್ ಹಾಸನ್ ಜೊತೆ ಕೆಲಸ ಮಾಡಿದ್ದರೂ, ರಜಿನಿಕಾಂತ್ ಜೊತೆಗಿನ ಅವರ ಮೊದಲ ಸಿನಿಮಾ ಜೈಲರ್ ಆಗಿರಲಿದೆ. ರಜಿನಿಕಾಂತ್ ಈ ಹಿಂದೆ ಮಣಿರತ್ನಂ ಅವರ ದಳಪತಿಯಲ್ಲಿ ಮತ್ತೋರ್ವ ಮಲಯಾಳಂ ಸೂಪರ್‌ಸ್ಟಾರ್ ಮುಮ್ಮುಟ್ಟಿ ಅವರೊಂದಿಗೆ ಕೆಲಸ ಮಾಡಿದ್ದಾರೆ.

ಸನ್ ಪಿಕ್ಚರ್ಸ್ ಬೆಂಬಲಿತ ಜೈಲರ್ ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜಿಸಲಿದ್ದಾರೆ. ಇತ್ತೀಚೆಗೆ, ತಯಾರಕರು ಜೈಲರ್‌ನ ಟೀಸರ್ ಅನ್ನು ಬಿಡುಗಡೆ ಮಾಡಿದ್ದು, ರಜಿನಿಕಾಂತ್ ಅವರನ್ನು ಮುತ್ತುವೇಲ್ ಪಾಂಡಿಯನ್ ಎಂದು ಪರಿಚಯಿಸಲಾಗಿದೆ. ಈ ವರ್ಷದ ಬೇಸಿಗೆಯಲ್ಲಿ ಜೈಲರ್ ಹೊರಬರುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT