ನಟ ದರ್ಶನ್ 
ಸಿನಿಮಾ ಸುದ್ದಿ

ಕ್ರಾಂತಿ ಟ್ರೈಲರ್ ಬಿಡುಗಡೆ: ಮಾಸ್ ಮತ್ತು ಕ್ಲಾಸ್ ಮಿಶ್ರಣದ ಭರವಸೆ ನೀಡಿದ ದರ್ಶನ್ ಅಭಿನಯದ ಸಿನಿಮಾ

ಮೈಸೂರು, ಹೊಸಪೇಟೆ, ಹುಬ್ಬಳ್ಳಿ ನಂತರ ದರ್ಶನ್ ಜೊತೆಗಿನ ಕ್ರಾಂತಿ ಸಂಭ್ರಮ ಬೆಂಗಳೂರಿನಲ್ಲಿ ಶನಿವಾರವೂ ಮುಂದುವರಿದಿದೆ. ಚಿತ್ರದ ಬಹು ನಿರೀಕ್ಷಿತ ಟ್ರೈಲರ್ ಅನ್ನು ಚಿತ್ರತಂಡ, ಸಿಬ್ಬಂದಿ ಮತ್ತು ದರ್ಶನ್ ಅಭಿಮಾನಿಗಳ ಸಮ್ಮುಖದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಬಿಡುಗಡೆಮಾಡಲಾಯಿತು.

ಮೈಸೂರು, ಹೊಸಪೇಟೆ, ಹುಬ್ಬಳ್ಳಿ ನಂತರ ದರ್ಶನ್ ಜೊತೆಗಿನ ಕ್ರಾಂತಿ ಸಂಭ್ರಮ ಬೆಂಗಳೂರಿನಲ್ಲಿ ಶನಿವಾರವೂ ಮುಂದುವರಿದಿದೆ. ಚಿತ್ರದ ಬಹು ನಿರೀಕ್ಷಿತ ಟ್ರೈಲರ್ ಅನ್ನು ಚಿತ್ರತಂಡ, ಸಿಬ್ಬಂದಿ ಮತ್ತು ದರ್ಶನ್ ಅಭಿಮಾನಿಗಳ ಸಮ್ಮುಖದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಬಿಡುಗಡೆಮಾಡಲಾಯಿತು.

ಟ್ರೈಲರ್ ಅನ್ನು ರಾಜ್ಯಾದ್ಯಂತ 130ಕ್ಕೂ ಹೆಚ್ಚು ಪರದೆಗಳಲ್ಲಿ ಏಕಕಾಲದಲ್ಲಿ ಬಿಡುಗಡೆ ಮಾಡಲಾಯಿತು. ಶಿಕ್ಷಣ ವ್ಯವಸ್ಥೆ ಮತ್ತು ವಿಶೇಷವಾಗಿ ಸರ್ಕಾರಿ ಶಾಲೆಗಳ ಸದ್ಯದ ಪರಿಸ್ಥಿತಿ ಬಗ್ಗೆ ಮಾತನಾಡುವ ಕ್ರಾಂತಿ ಎಂಬ ಶೀರ್ಷಿಕೆಯ ಪಾತ್ರದಲ್ಲಿ ದರ್ಶನ್ ಅವರನ್ನು ತೋರಿಸಲಾಗಿದೆ. ಚಿತ್ರದಲ್ಲಿ ದರ್ಶನ್ ವಿದೇಶದಲ್ಲಿ ನೆಲೆಸಿರುವ ಮತ್ತು ಭಾರತಕ್ಕೆ ಬರುವ ಉದ್ಯಮಿಯಾಗಿ ಕಾಣಿಸಿಕೊಂಡಿದ್ದಾರೆ. ಟ್ರೇಲರ್‌ನಲ್ಲಿ ರವಿಚಂದ್ರನ್, ಉಮಾಶ್ರೀ ಮತ್ತು ಮುಖ್ಯಮಂತ್ರಿ ಚಂದ್ರು ಅವರ ಪಾತ್ರಗಳನ್ನು ತೋರಿಸಲಾಗಿದೆ.

ಮಾಸ್ ಮತ್ತು ಕ್ಲಾಸ್ ಅಂಶಗಳಿಂದ ತುಂಬಿರುವ ಟ್ರೈಲರ್ ಚಿತ್ರಕ್ಕೆ ಸರಿಯಾದ ಟೋನ್ ಅನ್ನು ಹೊಂದಿಸಿದೆ. ಚಿತ್ರ ಜನವರಿ 26 ರಂದು ತೆರೆಗೆ ಬರಲಿದೆ.

ನಾಯಕಿ ರಚಿತಾ ರಾಮ್, ನಿಮಿಕಾ ರತ್ನಾಕರ್, ಸಂಯುಕ್ತ ಹೊರನಾಡ್ ಮತ್ತು ವೈನಿಧಿ ಜಗದೀಶ್, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಸೇರಿದಂತೆ ಇಡೀ ಚಿತ್ರತಂಡವು ಟ್ರೇಲರ್ ಲಾಂಚ್‌ ಕಾರ್ಯಕ್ರಮದಲ್ಲಿ ಭಾಗವಹಿಸಿತ್ತು.

ಸಮಾರಂಭದಲ್ಲಿ ನಟಿ, ರಾಜಕಾರಣಿ ಸುಮಲತಾ ಅಂಬರೀಶ್ ಅವರು ಉಪಸ್ಥಿತರಿದ್ದರು. 'ನಾನು ಚಿತ್ರರಂಗದಲ್ಲಿ 44 ವರ್ಷಗಳನ್ನು ಪೂರೈಸುತ್ತಿದ್ದೇನೆ. ಕ್ರಾಂತಿಯಲ್ಲಿ ನನ್ನದು ಚಿಕ್ಕ, ಆದರೆ ಮಹತ್ವದ ಪಾತ್ರ ಎಂದರು. ಮುಂಬರುವ ವರ್ಷದಲ್ಲಿ ಚಿತ್ರರಂಗಕ್ಕೆ ಪ್ರವೇಶಿಸಿ 60 ವರ್ಷ ಪೂರೈಸಲಿರುವ ಮತ್ತೋರ್ವ ಹಿರಿಯ ನಟಿ ಗಿರಿಜಾ ಲೋಕೇಶ್, 'ಸಕ್ಸಸ್ ಪಾರ್ಟಿಗೆ ಸಜ್ಜಾಗುತ್ತಿದ್ದು, ಜನಪ್ರಿಯ 'ಪುಷ್ಪಾವತಿ' ಹಾಡಿಗೆ ಕುಣಿಯಲು ಕಾಯುತ್ತಿದ್ದೇನೆ ಎಂದಿದ್ದಾರೆ.

ಸಂಗೀತ ನಿರ್ದೇಶಕ ವಿ ಹರಿಕೃಷ್ಣ ಅವರ ನಿರ್ದೇಶನದಲ್ಲಿ ಮತ್ತು ಶೈಲಜಾ ನಾಗ್ ಮತ್ತು ಬಿ ಸುರೇಶ ಅವರ ಮೀಡಿಯಾ ಹೌಸ್ ಸ್ಟುಡಿಯೋಸ್ ಅಡಿ ನಿರ್ಮಾಣಗೊಂಡಿರುವ ಕ್ರಾಂತಿ ಸಿನಿಮಾಗೆ ಕರುಣಾಕರ್ ಅವರ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT