'ನಾಟು ನಾಟು' ಹಾಡಿನ ಸ್ಟಿಲ್ 
ಸಿನಿಮಾ ಸುದ್ದಿ

ಗೋಲ್ಡನ್ ಗ್ಲೋಬ್ ಪ್ರಶಸ್ತಿ ವಿಜೇತ 'ನಾಟು ನಾಟು' ಹಾಡಿಗೆ ಉಕ್ರೇನ್ ನಂಟು

2023ನೇ ಸಾಲಿನ ಪ್ರತಿಷ್ಠಿತ ಗೋಲ್ಡನ್ ಗ್ಲೋಬ್ ಪ್ರಶಸ್ತಿ ಪಡೆದಿರುವ ‘ಆರ್​ಆರ್​ಆರ್​’ ಸಿನಿಮಾದ 'ನಾಟು ನಾಟು' ಹಾಡು ಉಕ್ರೇನ್ ಜೊತೆ ನಂಟು ಹೊಂದಿದೆ. ಅಚ್ಚರಿ ಎಂದರೆ ಈ ಹಾಡಿನ ಶೂಟಿಂಗ್ ಆಗಿದ್ದು ಉಕ್ರೇನ್​ನಲ್ಲಿ.

ಬೆಂಗಳೂರು: 2023ನೇ ಸಾಲಿನ ಪ್ರತಿಷ್ಠಿತ ಗೋಲ್ಡನ್ ಗ್ಲೋಬ್ ಪ್ರಶಸ್ತಿ ಪಡೆದಿರುವ ‘ಆರ್​ಆರ್​ಆರ್​’ ಸಿನಿಮಾದ 'ನಾಟು ನಾಟು' ಹಾಡು ಉಕ್ರೇನ್ ಜೊತೆ ನಂಟು ಹೊಂದಿದೆ. ಅಚ್ಚರಿ ಎಂದರೆ ಈ ಹಾಡಿನ ಶೂಟಿಂಗ್ ಆಗಿದ್ದು ಉಕ್ರೇನ್​ನಲ್ಲಿ.

ಯುದ್ಧ ಶುರು ಆಗೋದಕ್ಕೂ ಮುನ್ನ ಕೀವ್‌ನಲ್ಲಿ ಉಕ್ರೇನ್ ಅಧ್ಯಕ್ಷ ವ್ಲಾಡಿಮಿರ್ ಝೆಲೆನ್ಸ್ಕಿ ಅವರ ಅಧಿಕೃತ ನಿವಾಸದ ಹೊರಗೆ ಆಗಸ್ಟ್ 2021 ರಲ್ಲಿ 'ನಾತು ನಾಟು' ಹಾಡು ಚಿತ್ರೀಕರಿಸಲಾಗಿದೆ. ಉಕ್ರೇನ್ ಮೇಲೆ ರಷ್ಯಾ ಯುದ್ಧ ಘೋಷಿಸುವ ಕೆಲವು ತಿಂಗಳುಗಳ ಮುನ್ನ ಈ ಹಾಡು ಚಿತ್ರೀಕರಿಸಲಾಗಿದೆ.

ತೆಲುಗಿನ 'ನಾಟು ನಾಟು' ಹಾಡಿಗೆ ಹಿರಿಯ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಸಂಗೀತ ನಿರ್ದೇಶನ ಮಾಡಿದ್ದು, ಕಾಲ ಭೈರವ ಮತ್ತು ರಾಹುಲ್ ಸಿಪ್ಲಿಗುಂಜ್ ಹಾಡಿದ್ದಾರೆ.

ಮಾರ್ಚ್ 2022 ರಲ್ಲಿ 'ಆರ್​ಆರ್​ಆರ್' ಚಿತ್ರದ ಪ್ರಚಾರದ ಸಮಯದಲ್ಲಿ, ಉಕ್ರೇನ್ ನಲ್ಲಿ ಹಾಡಿನ ಚಿತ್ರೀಕರಣವನ್ನು ನೆನೆಪಿಸಿಕೊಂಡ ಚಿತ್ರದ ನಿರ್ದೇಶಕ ಎಸ್‌ಎಸ್ ರಾಜಮೌಳಿ ಅವರು, ರಷ್ಯಾ-ಉಕ್ರೇನ್ ಯುದ್ಧದ ಬಗ್ಗೆ ದುಃಖ ವ್ಯಕ್ತಪಡಿಸಿದ್ದರು. "ನಾವು ಕೆಲವು ನಿರ್ಣಾಯಕ ದೃಶ್ಯಗಳನ್ನು ಚಿತ್ರೀಕರಿಸಲು ಅಲ್ಲಿಗೆ ಹೋಗಿದ್ದೆವು. ಈಗ ಅದು ಯುದ್ಧದ ರೂಪ ಪಡೆಯಬಹುದು ಎಂಬ ಅಂದಾಜು ಇರಲಿಲ್ಲ. ಈಗ ನಾನು ಹಿಂತಿರುಗಿ ನೋಡಿದಾಗ ಆ ಪರಿಸ್ಥಿತಿಯ ಗಂಭೀರತೆ ಅರ್ಥವಾಯಿತು" ಎಂದು ಹೇಳಿದ್ದರು.

ಉಕ್ರೇನ್​-ರಷ್ಯಾ ಯುದ್ಧ ಶುರುವಾದ ನಂತರ ಅಲ್ಲಿನ ವಾತಾವರಣ ತುಂಬ ಭೀಕರವಾಯಿತು. ಜನರು ಪ್ರಾಣ ಉಳಿಸಿಕೊಳ್ಳಲು ಸಖತ್​ ಕಷ್ಟಪಟ್ಟರು. ಉಕ್ರೇನ್​ನ ಬೃಹತ್​ ಕಟ್ಟಡಗಳ ಮೇಲೆ ಬಾಂಬ್​ ದಾಳಿ ಮಾಡಲಾಯಿತು. ನಗರಗಳು ನೆಲಸಮವಾದವು. ಅಂಥ ಪರಿಸ್ಥಿತಿ ನಿರ್ಮಾಣ ಆಗುವುದಕ್ಕೂ ಮುನ್ನ ‘ಆರ್​ಆರ್​ಆರ್​’ ಚಿತ್ರತಂಡ ಅಲ್ಲಿ ಶೂಟಿಂಗ್​ ಮಾಡಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT