ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

'ಆರ್ಕೆಸ್ಟ್ರಾ ಮೈಸೂರು'ನಲ್ಲಿ ಸಂಗೀತವೇ ನನ್ನ ಅತ್ಯುತ್ತಮ ಹೂಡಿಕೆ: ರಘು ದೀಕ್ಷಿತ್

ನಟ 'ಡಾಲಿ' ಧನಂಜಯ ಸ್ನೇಹಿತರೆಲ್ಲಾ ಸೇರಿ ಮಾಡಿರುವ ಸಿನಿಮಾ 'ಆರ್ಕೆಸ್ಟ್ರಾ ಮೈಸೂರು' ನಾಳೆ ರಾಜ್ಯಾದ್ಯಂತ ತೆರೆ ಕಾಣುತ್ತಿದ್ದು, ಸಂಗೀತ ಸಂಯೋಜಕ ರಘು ದೀಕ್ಷಿತ್ ಅವರಿಗೆ ಈ ಚಿತ್ರ ತುಂಬಾ ವಿಶೇಷವಾಗಿದೆ.

ನಟ 'ಡಾಲಿ' ಧನಂಜಯ ಸ್ನೇಹಿತರೆಲ್ಲಾ ಸೇರಿ ಮಾಡಿರುವ ಸಿನಿಮಾ 'ಆರ್ಕೆಸ್ಟ್ರಾ ಮೈಸೂರು' ನಾಳೆ ರಾಜ್ಯಾದ್ಯಂತ ತೆರೆ ಕಾಣುತ್ತಿದ್ದು, ಸಂಗೀತ ಸಂಯೋಜಕ ರಘು ದೀಕ್ಷಿತ್ ಅವರಿಗೆ ಈ ಚಿತ್ರ ತುಂಬಾ ವಿಶೇಷವಾಗಿದೆ.

ರಘು ದೀಕ್ಷಿತ್ ಅವರು ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾತ್ರವಲ್ಲದೆ ಸಿನಿಮಾಗೂ ಬೆಂಬಲ ನೀಡಿದ್ದಾರೆ. "ಈ ಚಿತ್ರಕ್ಕೆ ನಾನು ವಿಶಿಷ್ಟ ನಿರ್ಮಾಪಕ ಅಲ್ಲ. ಆ ಸಮಯದಲ್ಲಿ ಸಂಗೀತಗಾರನಿಗೆ ಬೇಕಾದ ಬಜೆಟ್ ಇರಲಿಲ್ಲ. ಆದರೆ, ಈ ಚಿತ್ರದ ವಿಷಯ ಆಕರ್ಷಕವಾಗಿರುವದರಿಂದ ನಾನು ಈ ಪ್ರಾಜೆಕ್ಟ್‌ನ ಭಾಗವಾಗಲು ಬಯಸಿದೆ ಎಂದು ರಘು ದೀಕ್ಷಿತ್ ಹೇಳಿದ್ದಾರೆ.

ಚಿತ್ರದ ಮತ್ತೋರ್ವ ನಿರ್ಮಾಪಕರಾಗಿರುವ ಅಶ್ವಿನ್ ವಿಜಯ್‌ಕುಮಾರ್ ಅವರು, ನಾನು ಚಿತ್ರಕ್ಕೆ ಸಂಗೀತ ನೀಡುತ್ತೇನೆ ಎಂದಾಗ ಅವರು, ಸಂಭಾವನೆ ಬದಲು ಚಿತ್ರದಲ್ಲಿ ಪಾಲು ನೀಡುತ್ತೇನೆ ಎಂದು ನನಗೆ ಆಫರ್ ನೀಡಿದರು. ಹೀಗಾಗಿ ಆರ್ಕೆಸ್ಟ್ರಾ ಮೈಸೂರು ಚಿತ್ರದಲ್ಲಿ ನನ್ನ ಸಂಗೀತವೇ ಬಂಡವಾಳವಾಗಿದ್ದು, ನನಗೆ ನಿರ್ಮಾಪಕರ ಹಣೆಪಟ್ಟಿ ಸಿಕ್ಕಿದೆ ಎಂದು ರಘು ದೀಕ್ಷಿತ್ ತಿಳಿಸಿದ್ದಾರೆ.

"ಮೈಸೂರಿಗಾಗಿ ಮತ್ತು ಮೈಸೂರಿಗರಿಂದ ಈ ಚಿತ್ರ ನಿರ್ಮಾಣವಾಗಿದೆ. ನನ್ನ ಹುಟ್ಟೂರಾದ ಮೈಸೂರಿನಲ್ಲಿ ಆರ್ಕೆಸ್ಟ್ರಾ ಸಂಸ್ಕೃತಿಯು ತುಂಬಾ ಜೀವಂತವಾಗಿದೆ. ಇದು ನಾನು ಬೆಳೆದು ಬಂದ ಸಂಸ್ಕೃತಿಯಾಗಿದೆ. ಹೀಗಾಗಿ ಈ ಚಿತ್ರದ ಭಾಗವಾಗಲು ನಾನು ಬಯಸಿದೆ ಎಂದು ದಿಕ್ಷೀತ್ ಹೇಳಿದ್ದಾರೆ.

ಸುನಿಲ್ ಮೈಸೂರು, ನಟ ಪೂರ್ಣಚಂದ್ರ ಸೇರಿದಂತೆ ಇಡೀ ತಂಡ ಮತ್ತು ಆರ್ಕೆಸ್ಟ್ರಾದ ಪ್ರತಿಯೊಂದು ಅಂಶ ಅಥವಾ ಜನರು ಇಲ್ಲಿದ್ದಾರೆ. ಚಿತ್ರದಲ್ಲಿ 15,000 ಮೈಸೂರಿಗರು ಭಾಗವಹಿಸಿದ್ದೆವು. ಇದೆಲ್ಲವೂ ನನಗೆ ವಿಶೇಷ. ಅಂತಹ ಸಂಗೀತ ಚಿತ್ರದ ಭಾಗವಾಗಲು ಅವಕಾಶ ಸಿಕ್ಕಿದ್ದಕ್ಕಾಗಿ ನಾನು ಹೆಮ್ಮೆಪಡುತ್ತೇನೆ ಮತ್ತು ಕೃತಜ್ಞನಾಗಿದ್ದೇನೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT