ಸಿನಿಮಾ ಸುದ್ದಿ

ಚೆಕ್​ಬೌನ್ಸ್ ಪ್ರಕರಣ: ನಟ, ನಿರ್ದೇಶಕ ಗುರು ಪ್ರಸಾದ್ ಬಂಧನ

Lingaraj Badiger

ಬೆಂಗಳೂರು: ಚೆಕ್​ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟ ಹಾಗೂ ನಿರ್ದೇಶಕ ಗುರು ಪ್ರಸಾದ್ ​ಅವರನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ.

ಶ್ರೀನಿವಾಸ್ ಎಂಬ ವ್ಯಕ್ತಿಗೆ ಗುರು ಪ್ರಸಾದ್ ಅವರು ನೀಡಿದ್ದ ಚೆಕ್ ಬೌನ್ಸ್ ಆಗಿದೆ. ಈ ಸಂಬಂಧ ಕೋರ್ಟ್ ಮುಂದೆ ವಿಚಾರಣೆಗೆ ಹಾಜರಾಗದ ಮಠ ಚಿತ್ರದ ನಿರ್ದೇಶಕರ ವಿರುದ್ಧ ಬಂಧನ ವಾರಂಟ್ ಜಾರಿಗೊಳಿಸಲಾಗಿತ್ತು.

ವಾರಂಟ್ ಪಡೆದ ಗಿರಿನಗರ ಪೊಲೀಸರು ಇಂದು ವಂಚನೆ ಹಾಗೂ ಮೋಸ ಮಾಡಿದ ಪ್ರಕರಣದ ಅಡಿಯಲ್ಲಿ ಗುರು ಪ್ರಸಾದ್ ಅವರನ್ನು ಬಂಧಿಸಿ ಬಂಧಿಸಿದ್ದು, ಕೋರ್ಟ್ ಮುಂದೆ ಹಾಜರು ಪಡಿಸಲಿದ್ದಾರೆ.

SCROLL FOR NEXT