ಯುವ ನಟ ಧನುಷ್ 
ಸಿನಿಮಾ ಸುದ್ದಿ

ಕನ್ನಡದ ಯುವ ನಟ ಧನುಷ್ ನಿಧನ, ಹುಟ್ಟೂರಿನಲ್ಲಿ ಅಂತ್ಯಸಂಸ್ಕಾರ

ಕನ್ನಡ ಚಿತ್ರರಂಗದ ಮತ್ತೋರ್ವ ಉದಯೋನ್ಮುಖ ನಟ ಧನುಷ್  ನಿಧನರಾಗಿದ್ದಾರೆ. ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅಭಿನಯದ ಲೀಡರ್, ಸಂಪಿಗೆ ಹಳ್ಳಿ, ಕೊಟ್ಲಲ್ಲಪ್ಪೋ ಕೈ, ಪ್ಯಾರ್ ಕಾ ಗೋಲು ಗುಂಬಜ್  ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಧನುಷ್ ಅನಾರೋಗ್ಯದಿಂದ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ. 

ಬೆಂಗಳೂರು: ಕನ್ನಡ ಚಿತ್ರರಂಗದ ಮತ್ತೋರ್ವ ಉದಯೋನ್ಮುಖ ನಟ ಧನುಷ್  ನಿಧನರಾಗಿದ್ದಾರೆ. ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅಭಿನಯದ ಲೀಡರ್, ಸಂಪಿಗೆ ಹಳ್ಳಿ, ಕೊಟ್ಲಲ್ಲಪ್ಪೋ ಕೈ, ಪ್ಯಾರ್ ಕಾ ಗೋಲು ಗುಂಬಜ್  ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಧನುಷ್ ಅನಾರೋಗ್ಯದಿಂದ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ. 

ಚಿತ್ರೀಕರಣಕ್ಕಾಗಿ ಲಡಾಖ್ ಗೆ ತೆರಳಿದ್ದ ಧನುಷ್,  ಅನಾರೋಗ್ಯಕ್ಕೆ ತುತ್ತಾಗಿದ್ದರು. ಅವರನ್ನು ಬೆಂಗಳೂರಿಗೆ ಕರೆತಂದು ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿ ಆಗದೇ ಸಾವನ್ನಪ್ಪಿದ್ದಾರೆ. ಮೂಲತ: ಬಾಗಲಕೋಟೆ ಜಿಲ್ಲೆಯ ಕೋಡಿಹಾಳ ಗ್ರಾಮದ  ಶ್ರೀಮುತ್ತುರಾಜ್  ಸಿನಿಮಾಗಾಗಿ ತಮ್ಮ ಹೆಸರನ್ನು ಧನುಷ್ ಎಂದು ಬದಲಾಯಿಸಿಕೊಂಡಿದ್ದರು ಎನ್ನಲಾಗಿದೆ.

ಮೃತ ಧನುಷ್ ಅವರ ಮೃತದೇಹವನ್ನು ಅವರ ಹುಟ್ಟೂರಿಗೆ  ಕೊಂಡೊಯ್ಯಲಾಗಿದ್ದು, ಇಂದು ಅಂತ್ಯಸಂಸ್ಕಾರ ಮಾಡಲಾಗಿದೆ ಎಂದು ವರದಿಯಾಗಿದೆ. ಅಗಲಿದ ನಟನಿಗೆ ಸಿನಿಮಾ ಕಲಾವಿದರು, ಸ್ನೇಹಿತರು ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 ವಿಶ್ವಕಪ್: ವಿವಿಧ ತಂಡಗಳಲ್ಲಿರುವ ಪಾಕ್ ಮೂಲದ ಆಟಗಾರರಿಗೆ ಭಾರತೀಯ ವೀಸಾ ನಿರಾಕರಣೆ; ಬಾಂಗ್ಲಾ ಕಥೆಯೇನು?

ನರೇಗಾ ಹೆಸರು ಬದಲಾವಣೆ: 'ಸೀತಾ-ರಾಮ ಅಥವಾ ದಶರಥ ರಾಮ ಅಲ್ಲ, ಅದು ಗೋಡ್ಸೆ ರಾಮ'; ಸಿದ್ದರಾಮಯ್ಯ

ಮನ್ರೇಗಾಕ್ಕಿಂತ ದೊಡ್ಡ ಉಪಯುಕ್ತ ಯೋಜನೆ ಬೇರೊಂದಿಲ್ಲ: ಹೋರಾಟಕ್ಕೆ ಆಸಕ್ತಿ ತೋರದವರನ್ನು ಕಿತ್ತೊಗೆಯುತ್ತೇನೆ; ಡಿ ಕೆ ಶಿವಕುಮಾರ್

ಲಕ್ಕುಂಡಿಯಲ್ಲಿ ನಿಧಿ ಒಪ್ಪಿಸಿದ ಕುಟುಂಬಕ್ಕೆ ಅಗತ್ಯ ನೆರವು: ಸಚಿವ ಎಚ್‌.ಕೆ. ಪಾಟೀಲ್

ಧರ್ಮಸ್ಥಳ 74 ಅಸಹಜ ಸಾವು: ಪ್ರತ್ಯೇಕ FIR ದಾಖಲಿಸುವಂತೆ ಹೈಕೋರ್ಟ್‌ಗೆ ಸೌಜನ್ಯ ತಾಯಿ ಮನವಿ

SCROLL FOR NEXT