ಸೋನಾಲ್ ಮಾಂಟೆರೊ ಮತ್ತು ತನುಷ್ ಶಿವಣ್ಣ 
ಸಿನಿಮಾ ಸುದ್ದಿ

ಮಿ. 'ನಟ್ವರ್‌ಲಾಲ್' ಆದ ಮಡಮಕ್ಕಿ, ನಂಜುಂಡಿ ಕಲ್ಯಾಣ ಖ್ಯಾತಿಯ ನಟ ತನುಷ್‌ ಶಿವಣ್ಣ

ಮಡಮಕ್ಕಿ ಮತ್ತು ನಂಜುಂಡಿ ಕಲ್ಯಾಣ ಚಿತ್ರದ ನಾಯಕ ತನುಷ್ ಶಿವಣ್ಣ ಇದೀಗ ಹೊಸ ಚಿತ್ರ ಮಿಸ್ಟರ್ ನಟ್ವರ್ ಲಾಲ್ ಸಿನಿಮಾದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಅಭಿನಯದ 1979ರ ಹಿಂದಿ ಹಿಟ್ ಚಲನಚಿತ್ರದ ಶೀರ್ಷಿಕೆಯನ್ನು ಹೊಂದಿರುವ ಈ ಚಿತ್ರವು ಕ್ರೈಮ್-ಆ್ಯಕ್ಷನ್ ಥ್ರಿಲ್ಲರ್ ಆಗಿದೆ.

ಮಡಮಕ್ಕಿ ಮತ್ತು ನಂಜುಂಡಿ ಕಲ್ಯಾಣ ಚಿತ್ರದ ನಾಯಕ ತನುಷ್ ಶಿವಣ್ಣ ಇದೀಗ ಹೊಸ ಚಿತ್ರ ಮಿಸ್ಟರ್ ನಟ್ವರ್‌ಲಾಲ್ ಸಿನಿಮಾದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಅಭಿನಯದ 1979ರ ಹಿಂದಿ ಹಿಟ್ ಚಲನಚಿತ್ರದ ಶೀರ್ಷಿಕೆಯನ್ನು ಹೊಂದಿರುವ ಈ ಚಿತ್ರವು ಕ್ರೈಮ್-ಆ್ಯಕ್ಷನ್ ಥ್ರಿಲ್ಲರ್ ಆಗಿದೆ.

ಪ್ರಸಿದ್ಧ ಕಾನ್‌ಕಿಂಗ್, ಮಿಥಿಲೇಶ್ ಕುಮಾರ್ ಶ್ರೀವಾಸ್ತವ (1912-2009) ಅವರನ್ನು ಆಧರಿಸಿದ ಚಿತ್ರವಾಗಿದೆ. ಇವರನ್ನು ನಟ್ವರ್ ಲಾಲ್ ಎಂಬ ಅಡ್ಡಹೆಸರಿನಿಂದ ಕರೆಯಲಾಗುತ್ತದೆ. ಚಿತ್ರವನ್ನು ವಿ ಲವ ನಿರ್ದೇಶಿಸಿದ್ದಾರೆ. ತನ್ನ ಹೈಪ್ರೊಫೈಲ್ ಕ್ರೈಮ್‌ಗಳಿಗೆ ಹೆಸರುವಾಸಿಯಾಗಿರುವ ಭಾರತೀಯ ವಂಚಕ, ತಾಜ್ ಮಹಲ್, ಕೆಂಪು ಕೋಟೆ, ರಾಷ್ಟ್ರಪತಿ ಭವನ ಮತ್ತು ಭಾರತದ ಸಂಸತ್ ಭವನವನ್ನು ಭಾರಿ ಬೆಲೆಗೆ ಮಾರಾಟ ಮಾಡಿದ್ದ.

'ನಟ್ವರ್‌ಲಾಲ್ ಅವರ ಜೀವನದ ಕೆಲವು ಘಟನೆಗಳನ್ನು ನಾವು ಚಿತ್ರದಲ್ಲಿ ಕ್ರೈಮ್ ಮತ್ತು ಆ್ಯಕ್ಷನ್ ಅಂಶಗಳೊಂದಿಗೆ ಸಂಯೋಜಿಸಿದ್ದೇವೆ' ಎಂದು ತನುಷ್ ಸಿನಿಮಾಸ್ ಬ್ಯಾನರ್‌ನಡಿಯಲ್ಲಿ ಚಿತ್ರವನ್ನು ನಿರ್ಮಿಸಿರುವ ನಟ ತನುಷ್ ಹೇಳುತ್ತಾರೆ.
ಚಿತ್ರತಂಡ ಈ ಚಿತ್ರದ ಮೊದಲ ಟೀಸರ್ ಅನ್ನು ಐದು ಭಾಷೆಗಳಲ್ಲಿ ಬಿಡುಗಡೆ ಮಾಡಿದೆ ಮತ್ತು ಫೆಬ್ರವರಿಯಲ್ಲಿ ಚಿತ್ರವನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ.

ತನುಷ್ ಶಿವಣ್ಣ ಜೊತೆ ನಾಯಕಿಯಾಗಿ ಸೋನಾಲ್ ಮಾಂಟೆರೊ ಕಾಣಿಸಿಕೊಳ್ಳುತ್ತಿದ್ದು, ಇವರ ಜೊತೆಗೆ ನಾಗಭೂಷಣ್, ರಾಜೇಶ್ ನಟರಂಗ, ಸುಜಯ್ ಶಾಸ್ತ್ರಿ, ಯಶ್ ಸೆಟ್ಟಿ, ಸುಧಿ, ಕೆಎಸ್ ಶ್ರೀಧರ್, ತ್ರಿವೇಣಿ ರಾವ್ ಮತ್ತು ಹಿರಿಯ ನಟಿ ಪದ್ಮಾ ವಾಸ್ಂತಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ನಟ್ವರ್‌ಲಾಲ್ ಸಿನಿಮಾದ ಕಥೆ ಮತ್ತು ಚಿತ್ರಕಥೆಯನ್ನು ಲವ ಬರೆದಿದ್ದಾರೆ. ವಿಕ್ರಾಂತ್ ರೋಣ ಸಿನಿಮಾ ಖ್ಯಾತಿಯ ಡಿಒಪಿ ವಿಲಿಯಂ ಡೇವಿಡ್ ಅವರ ಛಾಯಾಗ್ರಹಣ, ಧರ್ಮ ವಿಶ್ ಅವರ ಸಂಗೀತ ಮತ್ತು ಕೆ ಎಂ ಪ್ರಕಾಶ್ ಸಂಕಲನವಿದೆ. ನಿರ್ದೇಶಕ ಚೇತನ್ ಕುಮಾರ್ ಈ ಚಿತ್ರಕ್ಕೆ ಸಾಹಿತ್ಯ ಬರೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel