ವಿಷ್ಣು ಸ್ಮಾರಕ ಅನಾವರಣ 
ಸಿನಿಮಾ ಸುದ್ದಿ

ವಿಷ್ಣು ಅಭಿಮಾನಿಗಳ ಕನಸು ನನಸು: ಮೈಸೂರಲ್ಲಿ 'ವಿಷ್ಣುವರ್ಧನ್ ಸ್ಮಾರಕ' ಅನಾವರಣ

ಖ್ಯಾತ ನಟ ಸಾಹಸಸಿಂಹ ವಿಷ್ಣುವರ್ಧನ್ ಅವರ ಅಭಿಮಾನಿಗಳ ದಶಕಗಳ ಕನಸು ಕೊನೆಗೂ ನನಸಾಗಿದ್ದು, ಮೈಸೂರಿನಲ್ಲಿ ಇಂದು ವಿಷ್ಣು ಸ್ಮಾರಕ ಅನಾವರಣವಾಗಿದೆ.

ಮೈಸೂರು: ಖ್ಯಾತ ನಟ ಸಾಹಸಸಿಂಹ ವಿಷ್ಣುವರ್ಧನ್ ಅವರ ಅಭಿಮಾನಿಗಳ ದಶಕಗಳ ಕನಸು ಕೊನೆಗೂ ನನಸಾಗಿದ್ದು, ಮೈಸೂರಿನಲ್ಲಿ ಇಂದು ವಿಷ್ಣು ಸ್ಮಾರಕ ಅನಾವರಣವಾಗಿದೆ.

ಚಲನಚಿತ್ರ ನಟ ವಿಷ್ಣುವರ್ಧನ್ ಅಭಿಮಾನಿಗಳ ಮುಗಿಲುಮುಟ್ಟುವ ಜಯಘೋಷದ ನಡುವೆ 'ಸಾಹಸಸಿಂಹ ವಿಷ್ಣುವರ್ಧನ್ ಸ್ಮಾರಕ'ವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಲೋಕಾರ್ಪಣೆ ಮಾಡಿದರು. ಮೈಸೂರಿನ ಮಾನಂದವಾಡಿ ರಸ್ತೆಯ ಹಾಲಾಳು ಗ್ರಾಮದ ಉದ್ಬೂರ್ ಗೇಟ್ ಬಳಿ ನಿರ್ಮಿಸಲಾದ ಸ್ಮಾರಕದಲ್ಲಿ 'ಆಪ್ತರಕ್ಷಕ' ಚಲನಚಿತ್ರದ ಪಾತ್ರದ ಮಾದರಿಯಲ್ಲಿ ನಿರ್ಮಿಸಲಾದ 7 ಅಡಿ ಎತ್ತರದ ಪ್ರತಿಮೆಯನ್ನೂ ಅವರು ಅನಾವರಣಗೊಳಿಸಿದರು. 

ಸ್ಮಾರಕ ಲೋಕಾರ್ಪಣೆ ವೇಳೆ ಸಂಸದ ಪ್ರತಾಪಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಕೋಟೆ ಎಂ.ಶಿವಣ್ಣ, ಮೇಯರ್ ಶಿವಕುಮಾರ್, ಮುಡಾ ಅಧ್ಯಕ್ಷ ಯಶಸ್ವಿ ಎಸ್. ಸೋಮಶೇಖರ್, ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಉಪ ಮೇಯರ್ ಡಾ.ಡಿ.ರೂಪಾ ಇದ್ದರು. 

ವೇದಿಕೆ ಮುಂಭಾಗದಲ್ಲಿ ನಟಿ ಭವ್ಯಾ, ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ರಮೇಶ್ ಭಟ್ ಹಾಗೂ ವಿಷ್ಣುವರ್ಧನ್ ಕುಟುಂಬದ ಸದಸ್ಯರು ಇದ್ದರು.

ಅಭಿಮಾನಿಗಳಿಗೆ ನಿರಾಸೆ: 
ಸಾವಿರಾರು ಸಂಖ್ಯೆಯಲ್ಲಿ ‌ನಾಡಿನ ಮೂಲೆಮೂಲೆಗಳಿಂದ ಆಗಮಿಸಿದ್ದ ಅಭಿಮಾನಿಗಳಿ‌ಗೆ ಸ್ಮಾರಕ ವೀಕ್ಷಣೆಗೆ ಅವಕಾಶ ಸಿಗದೆ‌ ನಿರಾಶರಾದರು. ಸ್ಥಳದಲ್ಲೇ ಕುಳಿತು ಆಕ್ರೋಶ ವ್ಯಕ್ತಪಡಿಸಿದರು.  ಸುರಕ್ಷತಾ ಸಿದ್ಧತೆಗಳು ಇಲ್ಲ. ಪೊಲೀಸರು ನಾಳೆ ಬರುವಂತೆ ಹೇಳಿದ್ದಾರೆ. ದಯವಿಟ್ಟು ಸಹಕರಿಸಿ ಎಂದು ನಟ ಅನಿರುದ್ಧ ಮನವೊಲಿಸಲು ಯತ್ನಿಸಿದರು‌. ಆದರೂ ಅಭಿಮಾನಿಗಳ ಒತ್ತಾಯ, ಆಕ್ರೋಶ ಕೇಳುತ್ತಲೇ ಇತ್ತು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT