ಹೊಯ್ಸಳ ಸಿನಿಮಾದ ಪೋಸ್ಟರ್ಸ್ 
ಸಿನಿಮಾ ಸುದ್ದಿ

ಬಿಡುಗಡೆಗೂ ಮುನ್ನವೇ ದಾಖಲೆ ಬರೆದ ನಟ ಧನಂಜಯ್ ಅವರ 'ಹೊಯ್ಸಳ' ಚಿತ್ರ

ಧನಂಜಯ್ ಅವರ 25ನೇ ಚಿತ್ರ ಹೊಯ್ಸಳ ಸಿನಿಮಾಗೆ ವಿಶೇಷ ಎನ್ನುವಂತದ್ದೇ ನಡೆಯುತ್ತಿದೆ. ಮಾರ್ಚ್ 30 ರಂದು ಬಿಡುಗಡೆಯಾಗಲಿರುವ ಈ ಚಿತ್ರವು ತನ್ನ ಆಡಿಯೋ ಆಲ್ಬಂನೊಂದಿಗೆ ಸ್ವಲ್ಪ ಸದ್ದು ಮಾಡುತ್ತಿದೆ.

ಧನಂಜಯ್ ಅವರ 25ನೇ ಚಿತ್ರ ಹೊಯ್ಸಳ ಸಿನಿಮಾಗೆ ವಿಶೇಷ ಎನ್ನುವಂತದ್ದೇ ನಡೆಯುತ್ತಿದೆ. ಮಾರ್ಚ್ 30 ರಂದು ಬಿಡುಗಡೆಯಾಗಲಿರುವ ಈ ಚಿತ್ರವು ತನ್ನ ಆಡಿಯೋ ಆಲ್ಬಂನೊಂದಿಗೆ ಸ್ವಲ್ಪ ಸದ್ದು ಮಾಡುತ್ತಿದೆ.

ಆನಂದ್ ಆಡಿಯೋ ದಾಖಲೆ ಬೆಲೆಗೆ ಚಿತ್ರದ ಆಡಿಯೋ ರೈಟ್ಸ್ ಅನ್ನು ಪಡೆದುಕೊಂಡಿದೆ. ಇದು ಧನಂಜಯ್ ಅವರ ವೃತ್ತಿಜೀವನದ ಸಿನಿಮಾಗಳ ಪೈಕಿಯೇ ಅಧಿಕ ಬೆಲೆಗೆ ಮಾರಾಟವಾಗಿದೆ ಎಂದು ಹೇಳಲಾಗುತ್ತಿದೆ.

ಬರಹಗಾರ-ನಿರ್ದೇಶಕ ವಿನಯ್ ಎನ್ ಅವರ ಚೊಚ್ಚಲ ಚಿತ್ರವಾಗಿರುವ ಹೊಯ್ಸಳ ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರ ಸಂಗೀತವಿದೆ. ರತ್ನನ್ ಪ್ರಪಂಚ ನಂತರ ಕೆಆರ್‌ಜಿ ಸ್ಟುಡಿಯೋಸ್‌ನೊಂದಿಗೆ ನಟ ಧನಂಜಯ ಅವರ ಎರಡನೇ ಚಿತ್ರ ಇದಾಗಿದೆ. 

ನಟ ಮತ್ತು ಪ್ರೊಡಕ್ಷನ್ ಹೌಸ್ ಉತ್ತರಾಖಂಡ ಚಿತ್ರಕ್ಕಾಗಿ ನಿರ್ದೇಶಕ ರೋಹಿತ್ ಪದಕಿಯೊಂದಿಗೆ ಕೈಜೋಡಿಸುತ್ತಿದೆ. ಧನಂಜಯ್ ಅವರ ಕನ್ನಡ-ತೆಲುಗು ದ್ವಿಭಾಷಾ ಚಿತ್ರವಾದ ಜೀಬ್ರಾವನ್ನು ಪೂರ್ಣಗೊಳಿಸಿದ ನಂತರ ಉತ್ತರಕಾಂಡ ಸಿನಿಮಾದ ಚಿತ್ರೀಕರಣ ಆರಂಭವಾಗಲಿದೆ. ಚಿತ್ರದಲ್ಲಿ ಸತ್ಯದೇವ್ ಕೂಡ ನಟಿಸಿದ್ದಾರೆ.

ಈ ಮಧ್ಯೆ ಉತ್ತರ ಕರ್ನಾಟಕದಲ್ಲಿ ಸೆಟ್ಟೇರಿರುವ ಹೊಯ್ಸಳ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿವೆ.

ವಿಜಯ್ ಕಿರಗಂದೂರು ಅವರ ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ಜಂಟಿಯಾಗಿ ನಿರ್ಮಿಸಿದ್ದಾರೆ. ಹೊಯ್ಸಳ ಸಿನಿಮಾದಲ್ಲಿ ಧನಂಜಯ್ ಅವರೊಂದಿಗೆ ಅಮೃತಾ ಅಯ್ಯಂಗಾರ್ ನಟಿಸಿದ್ದಾರೆ. ಇವರಿಬ್ಬರು ಈ ಹಿಂದೆ ಸೂರಿ ಅವರ ಪಾಪ್‌ಕಾರ್ನ್ ಮಂಕಿ ಟೈಗರ್ ಮತ್ತು ಶಂಕರ್ ಗುರು ಅವರ ಬಡವ ರಾಸ್ಕಲ್ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.

ಹೊಯ್ಸಳ ಸಿನಿಮಾದ ಪ್ರಮುಖ ತಾರಾಗಣದಲ್ಲಿ ನವೀನ್ ಶಂಕರ್, ಅವಿನಾಶ್ ಬಿಎಸ್, ಮಯೂರಿ ನಟರಾಜ್ ಮತ್ತು ಪ್ರತಾಪ್ ನಾರಾಯಣ್ ಕೂಡ ನಟಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಕೇರಳದಲ್ಲಿ ಕಾನೂನು ಸುವ್ಯವಸ್ಥೆಗೆ ಬೆದರಿಕೆ: SDPI, ಜಮಾತ್, ಸಂಘಟನೆಗಳ ಪಾತ್ರ ಪ್ರಶ್ನಿಸಿದ ಅಮಿತ್ ಶಾ!

ಹೊಂದಿಕೊಳ್ಳಲು ಸಾಧ್ಯವಿಲ್ಲ ಎಂದು ಯಾರು ಹೇಳಿದ್ದು?': ಅಮೆರಿಕ ವ್ಯಾಪಾರ ಒಪ್ಪಂದದ ಅನಿಶ್ಚಿತತೆ ನಡುವೆಯೇ ಹೊಸ ಮಾರುಕಟ್ಟೆಗಳತ್ತ ಭಾರತ ಕಣ್ಣು!

SCROLL FOR NEXT