ಗೋಲ್ಡನ್ ಸ್ಟಾರ್ ಗಣೇಶ್. 
ಸಿನಿಮಾ ಸುದ್ದಿ

ಪ್ಯಾನ್-ಇಂಡಿಯಾ ಸಿನಿಮಾ ಮಾಡಲು ಗೋಲ್ಡನ್ ಸ್ಟಾರ್ ಗಣೇಶ್ ಮುಂದು!

ನಿರ್ದೇಶಕ ಶ್ರೀನಿವಾಸ್ ರಾಜು ಅವರ ರೊಮ್ಯಾಂಟಿಕ್ ಕಾಮಿಡಿ ಕೃಷ್ಣಂ ಪ್ರಣಯ ಸಖಿ ಸಿನಿಮಾ ಸೇರಿದಂತೆ ಹಲವು ಸಿನಿಮಾಗಳಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಅವರು ಬ್ಯುಸಿಯಾಗಿದ್ದು, ಇದರ ನಡುವಲ್ಲೇ ಪ್ಯಾನ್-ಇಂಡಿಯಾ ಸಿನಿಮಾ ಮಾಡಲು ಮುಂದಾಗಿದ್ದಾರೆ.

ನಿರ್ದೇಶಕ ಶ್ರೀನಿವಾಸ್ ರಾಜು ಅವರ ರೊಮ್ಯಾಂಟಿಕ್ ಕಾಮಿಡಿ ಕೃಷ್ಣಂ ಪ್ರಣಯ ಸಖಿ ಸಿನಿಮಾ ಸೇರಿದಂತೆ ಹಲವು ಸಿನಿಮಾಗಳಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಅವರು ಬ್ಯುಸಿಯಾಗಿದ್ದು, ಇದರ ನಡುವಲ್ಲೇ ಪ್ಯಾನ್-ಇಂಡಿಯಾ ಸಿನಿಮಾ ಮಾಡಲು ಮುಂದಾಗಿದ್ದಾರೆ.
    
ಕನ್ನಡದ ಖ್ಯಾತ ನಿರ್ಮಾಪಕ ವಿಖ್ಯಾತ್​ ಅವರು, ಈ ಸಿನಿಮಾಗೆ ಬಂಡವಾಳ ಹೂಡಲಿದ್ದು, ‘ವಿಖ್ಯಾತ್​ ಚಿತ್ರ’ ಬ್ಯಾನರ್​ ಮೂಲಕ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಚಿತ್ರ ಮೂಡಿಬರಲಿದೆ.

ಇದು ಗೋಲ್ಡನ್ ಗಣಿಯ 42 ನೇ ಸಿನಿಮಾವಾಗಲಿದೆ. ಪ್ಯಾನ್ ಇಂಡಿಯಾ ಸಿನಿಮಾ ಅನೌನ್ಸ್ ಮಾಡುವ ಸಲುವಾಗಿ ಚಿತ್ರದ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಗಣೇಶ್ ಶೋ ಮ್ಯಾನ್ ರೀತಿ ಕಾಣಿಸಿಕೊಂಡಿದ್ದಾರೆ. ಆದರೆ, ಚಿತ್ರದ ಟೈಟಲ್ ಇನ್ನೂ ಬಹಿರಂಗಗೊಂಡಿಲ್ಲ.

ಚಿತ್ರವು ಬಹುಭಾಷೆಗಳಲ್ಲಿ ಬಿಡುಗಡೆಯಾಗುವುದರಿಂದ ಬಹುಭಾಷೆಯ ಸಮಗ್ರ ತಾರಾಗಣವನ್ನು ಚಿತ್ರದಲ್ಲಿ ಸೇರ್ಪಡೆಗೊಳ್ಳುವಂತೆ ಮಾಡಲು ಚಿತ್ರತಂಡ ಸಿದ್ಧತೆಗಳನ್ನು ನಡೆಸುತ್ತಿದೆ. ಈಗಾಗಲೇ ನಿರ್ದೇಶಕರು ಸಿದ್ಧತೆಗಳನ್ನು ಆರಂಭಿಸಿದ್ದು, ಶೀಘ್ರದಲ್ಲೇ ತಾರಾಗಣ ಮತ್ತು ತಾಂತ್ರಿಕ ಸಿಬ್ಬಂದಿಗಳ ಕುರಿತು ಮಾಹಿತಿಗಳು ಅನಾವರಣಗೊಳ್ಳಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT