ಆಚಾರ್ & ಕೋ' ಫೋಸ್ಟರ್ 
ಸಿನಿಮಾ ಸುದ್ದಿ

ಮಹಿಳೆಯರೇ ಸೇರಿ ಮಾಡಿರುವ 'ಆಚಾರ್ & ಕೋ' ರಿಲೀಸ್ ಡೇಟ್ ಫಿಕ್ಸ್

ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರ ಪಿಆರ್‌ಕೆ ಪ್ರೊಡಕ್ಷನ್ಸ್ ನಿರ್ಮಿಸಿರುವ ಆಚಾರ್ ಅಂಡ್ ಕೋ ಬಿಡುಗಡೆಗೆ ಸಜ್ಜಾಗಿದೆ. ಸಿಂಧು ಶ್ರೀನಿವಾಸ ಮೂರ್ತಿ ಅವರು ಬರಹಗಾರರಾಗಿ, ನಿರ್ದೇಶಕರಾಗಿ ಮತ್ತು ನಾಯಕಿಯಾಗಿರುವ ಈ ಚಿತ್ರ ಜುಲೈ 28 ರಂದು ಬಿಡುಗಡೆಯಾಗಲಿದೆ. ಈ ಮೂಲಕ ಹೃದಯ ಸ್ಪರ್ಶಿ ಕಥೆಯನ್ನು ಪ್ರೇಕ್ಷಕರೆದುರು ಚಿತ್ರತಂಡ ತರುತ್ತಿದೆ. 

ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರ ಪಿಆರ್‌ಕೆ ಪ್ರೊಡಕ್ಷನ್ಸ್ ನಿರ್ಮಿಸಿರುವ ಆಚಾರ್ ಅಂಡ್ ಕೋ ಬಿಡುಗಡೆಗೆ ಸಜ್ಜಾಗಿದೆ. ಸಿಂಧು ಶ್ರೀನಿವಾಸ ಮೂರ್ತಿ ಅವರು ಬರಹಗಾರರಾಗಿ, ನಿರ್ದೇಶಕರಾಗಿ ಮತ್ತು ನಾಯಕಿಯಾಗಿರುವ ಈ ಚಿತ್ರ ಜುಲೈ 28 ರಂದು ಬಿಡುಗಡೆಯಾಗಲಿದೆ. ಈ ಮೂಲಕ ಹೃದಯ ಸ್ಪರ್ಶಿ ಕಥೆಯನ್ನು ಪ್ರೇಕ್ಷಕರೆದುರು ಚಿತ್ರತಂಡ ತರುತ್ತಿದೆ. 

ಸಂಪೂರ್ಣವಾಗಿ ಮಹಿಳೆಯರೇ ಸೇರಿ ಮಾಡಿರುವ ಸಿನಿಮಾಕ್ಕೆ ಬಿಂಧುಮಾಲಿನಿ ನಾರಾಯಣಸ್ವಾಮಿ ಸಂಗೀತ ಸಂಯೋಜಿಸಿದ್ದಾರೆ. ಡ್ಯಾನಿಲ್ಲಾ ಕೊರೆಯಾ ಕ್ರಿಯೇಟಿವ್ ನಿರ್ಮಾಪಕರಾಗಿ ಕಾರ್ಯನಿರ್ವಹಿಸಿದ್ದು, ಇಂಚರ ಸುರೇಶ್ ವಸ್ತ್ರವಿನ್ಯಾಸ, ಹೇಮಾ ಸುವರ್ಣ ಧ್ವನಿ, ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶನ, ಅಭಿಮನ್ಯು ಸದಾನಂದನ್ ಅವರ ಛಾಯಾಗ್ರಹಣ ಚಿತ್ರಕ್ಕಿದೆ.

ರೆಟ್ರೋ ಶೈಲಿಯ ಈ ಸಿನಿಮಾದ ಕಥೆ 1960ರ ಕಾಲಘಟ್ಟದ ಬೆಂಗಳೂರಿನಲ್ಲಿ ಸಾಗುತ್ತದೆ. ಆಗಿನ ಕಾಲದ ಒಂದು ಕುಟುಂಬಕ್ಕೆ ಎದುರಾಗುವ ಸಂಪ್ರದಾಯ ವರ್ಸಸ್​ ಆಧುನಿಕತೆ ಎಂಬ ವಾತಾವರಣದ ಬಗ್ಗೆ ಈ ಸಿನಿಮಾದಲ್ಲಿ ವಿವರಿಸಲಾಗಿದೆ. ಸೂಕ್ತ ವಸ್ತ್ರ ವಿನ್ಯಾಸ ಮತ್ತು ಕಲಾ ನಿರ್ದೇಶನದ ಮೂಲಕ 60 ಮತ್ತು 70 ರ ದಶಕದ ಬೆಂಗಳೂರನ್ನು ತೆರೆ ಮೇಲೆ ಸಮರ್ಥವಾಗಿ ಮರುಸೃಷ್ಟಿ ಮಾಡಲಾಗಿದೆ.

ಹಾಸ್ಯಮಯ ಹಾಗೂ ಭಾವನಾತ್ಮಕತೆಯೊಂದಿಗೆ ಆಗಿನ ಕಾಲಘಟ್ಟಕ್ಕೆ ಪ್ರೇಕ್ಷಕರನ್ನು ಚಿತ್ರ ಕರೆದೊಯ್ಯಲಿದೆ. ಈ ಕುಟುಂಬದ ಕಥೆಯನ್ನು ನೋಡುತ್ತಾ ಪ್ರೇಕ್ಷಕರು ತಮ್ಮಗೆ ಗೊತ್ತಿಲ್ಲದಂತೆ ಅಂದಿನ ಕಾಲಕ್ಕೆ ರವಾನೆಯಾಗುತ್ತಾರೆ. ಆ ಕುಟುಂಬದ ಪಯಣದಲ್ಲಿ ತಾವೂ ಭಾಗಿಯಾಗುತ್ತಾರೆ ಎಂಬ ಭರವಸೆ ತಂಡಕ್ಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT