ಆಚಾರ್ & ಕೋ' ಫೋಸ್ಟರ್ 
ಸಿನಿಮಾ ಸುದ್ದಿ

ಮಹಿಳೆಯರೇ ಸೇರಿ ಮಾಡಿರುವ 'ಆಚಾರ್ & ಕೋ' ರಿಲೀಸ್ ಡೇಟ್ ಫಿಕ್ಸ್

ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರ ಪಿಆರ್‌ಕೆ ಪ್ರೊಡಕ್ಷನ್ಸ್ ನಿರ್ಮಿಸಿರುವ ಆಚಾರ್ ಅಂಡ್ ಕೋ ಬಿಡುಗಡೆಗೆ ಸಜ್ಜಾಗಿದೆ. ಸಿಂಧು ಶ್ರೀನಿವಾಸ ಮೂರ್ತಿ ಅವರು ಬರಹಗಾರರಾಗಿ, ನಿರ್ದೇಶಕರಾಗಿ ಮತ್ತು ನಾಯಕಿಯಾಗಿರುವ ಈ ಚಿತ್ರ ಜುಲೈ 28 ರಂದು ಬಿಡುಗಡೆಯಾಗಲಿದೆ. ಈ ಮೂಲಕ ಹೃದಯ ಸ್ಪರ್ಶಿ ಕಥೆಯನ್ನು ಪ್ರೇಕ್ಷಕರೆದುರು ಚಿತ್ರತಂಡ ತರುತ್ತಿದೆ. 

ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರ ಪಿಆರ್‌ಕೆ ಪ್ರೊಡಕ್ಷನ್ಸ್ ನಿರ್ಮಿಸಿರುವ ಆಚಾರ್ ಅಂಡ್ ಕೋ ಬಿಡುಗಡೆಗೆ ಸಜ್ಜಾಗಿದೆ. ಸಿಂಧು ಶ್ರೀನಿವಾಸ ಮೂರ್ತಿ ಅವರು ಬರಹಗಾರರಾಗಿ, ನಿರ್ದೇಶಕರಾಗಿ ಮತ್ತು ನಾಯಕಿಯಾಗಿರುವ ಈ ಚಿತ್ರ ಜುಲೈ 28 ರಂದು ಬಿಡುಗಡೆಯಾಗಲಿದೆ. ಈ ಮೂಲಕ ಹೃದಯ ಸ್ಪರ್ಶಿ ಕಥೆಯನ್ನು ಪ್ರೇಕ್ಷಕರೆದುರು ಚಿತ್ರತಂಡ ತರುತ್ತಿದೆ. 

ಸಂಪೂರ್ಣವಾಗಿ ಮಹಿಳೆಯರೇ ಸೇರಿ ಮಾಡಿರುವ ಸಿನಿಮಾಕ್ಕೆ ಬಿಂಧುಮಾಲಿನಿ ನಾರಾಯಣಸ್ವಾಮಿ ಸಂಗೀತ ಸಂಯೋಜಿಸಿದ್ದಾರೆ. ಡ್ಯಾನಿಲ್ಲಾ ಕೊರೆಯಾ ಕ್ರಿಯೇಟಿವ್ ನಿರ್ಮಾಪಕರಾಗಿ ಕಾರ್ಯನಿರ್ವಹಿಸಿದ್ದು, ಇಂಚರ ಸುರೇಶ್ ವಸ್ತ್ರವಿನ್ಯಾಸ, ಹೇಮಾ ಸುವರ್ಣ ಧ್ವನಿ, ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶನ, ಅಭಿಮನ್ಯು ಸದಾನಂದನ್ ಅವರ ಛಾಯಾಗ್ರಹಣ ಚಿತ್ರಕ್ಕಿದೆ.

ರೆಟ್ರೋ ಶೈಲಿಯ ಈ ಸಿನಿಮಾದ ಕಥೆ 1960ರ ಕಾಲಘಟ್ಟದ ಬೆಂಗಳೂರಿನಲ್ಲಿ ಸಾಗುತ್ತದೆ. ಆಗಿನ ಕಾಲದ ಒಂದು ಕುಟುಂಬಕ್ಕೆ ಎದುರಾಗುವ ಸಂಪ್ರದಾಯ ವರ್ಸಸ್​ ಆಧುನಿಕತೆ ಎಂಬ ವಾತಾವರಣದ ಬಗ್ಗೆ ಈ ಸಿನಿಮಾದಲ್ಲಿ ವಿವರಿಸಲಾಗಿದೆ. ಸೂಕ್ತ ವಸ್ತ್ರ ವಿನ್ಯಾಸ ಮತ್ತು ಕಲಾ ನಿರ್ದೇಶನದ ಮೂಲಕ 60 ಮತ್ತು 70 ರ ದಶಕದ ಬೆಂಗಳೂರನ್ನು ತೆರೆ ಮೇಲೆ ಸಮರ್ಥವಾಗಿ ಮರುಸೃಷ್ಟಿ ಮಾಡಲಾಗಿದೆ.

ಹಾಸ್ಯಮಯ ಹಾಗೂ ಭಾವನಾತ್ಮಕತೆಯೊಂದಿಗೆ ಆಗಿನ ಕಾಲಘಟ್ಟಕ್ಕೆ ಪ್ರೇಕ್ಷಕರನ್ನು ಚಿತ್ರ ಕರೆದೊಯ್ಯಲಿದೆ. ಈ ಕುಟುಂಬದ ಕಥೆಯನ್ನು ನೋಡುತ್ತಾ ಪ್ರೇಕ್ಷಕರು ತಮ್ಮಗೆ ಗೊತ್ತಿಲ್ಲದಂತೆ ಅಂದಿನ ಕಾಲಕ್ಕೆ ರವಾನೆಯಾಗುತ್ತಾರೆ. ಆ ಕುಟುಂಬದ ಪಯಣದಲ್ಲಿ ತಾವೂ ಭಾಗಿಯಾಗುತ್ತಾರೆ ಎಂಬ ಭರವಸೆ ತಂಡಕ್ಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

VB-G RAM G ಜಾರಿ ಬದಲು ಸ್ವಂತ ಉದ್ಯೋಗ ಖಾತ್ರಿ ಯೋಜನೆಗೆ ಕರ್ನಾಟಕ ಮುಂದು: ಇಂದು ಘೋಷಣೆ?

ಬಳ್ಳಾರಿ ಬ್ಯಾನರ್ ಗಲಭೆ: ಶಾಸಕ ನಾರಾ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ FIR

ಬಳ್ಳಾರಿ ಗಲಾಟೆ: ಆರು ಸದಸ್ಯರ ಸತ್ಯಶೋಧನಾ ಸಮಿತಿ ರಚಿಸಿದ ಕಾಂಗ್ರೆಸ್

ನೈಸ್‌ ಯೋಜನೆ: ಡಿ.ಕೆ ಶಿವಕುಮಾರ್ ಆಕ್ಷೇಪ ಸ್ವಾಗತಾರ್ಹ; ಕ್ರಮ ಕೈಗೊಳ್ಳುತ್ತಾರೆಯೇ ಕಾದು ನೋಡೋಣ- ದೇವೇಗೌಡ

ಛತ್ತೀಸ್‌ಗಢ: ಭದ್ರತಾ ಪಡೆಗಳ 'ಎನ್‌ಕೌಂಟರ್‌' ನಲ್ಲಿ ಇಬ್ಬರು ನಕ್ಸಲೀಯರ ಹತ್ಯೆ!

SCROLL FOR NEXT