ನಿಹಾರಿಕಾ ಮತ್ತು ಚೈತನ್ಯ 
ಸಿನಿಮಾ ಸುದ್ದಿ

'ಮೆಗಾ’ ಫ್ಯಾಮಿಲಿಯಲ್ಲಿ ಮತ್ತೊಂದು ವಿಚ್ಛೇದನ: ಅಧಿಕೃತವಾಗಿ ಘೋಷಿಸಿದ ನಿಹಾರಿಕಾ ಕೊಡಿನೇಲಾ!

ಚಿರಂಜೀವಿ ಕುಟುಂಬದ ಮಗಳು ನಿಹಾರಿಕಾ ಕೊನಿಡೆಲಾ ಹಾಗೂ ವೆಂಕಟ್ ಚೈತನ್ಯ ಜೊನ್ನಲಗಡ್ಡ ಅಧಿಕೃತವಾಗಿ ವಿಚ್ಛೇದನ ಪಡೆದಿದ್ದಾರೆ. ಕಳೆದ ತಿಂಗಳು ಇಬ್ಬರೂ ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದರು.

ಚಿರಂಜೀವಿ ಕುಟುಂಬದ ಮಗಳು ನಿಹಾರಿಕಾ ಕೊನಿಡೆಲಾ ಹಾಗೂ ವೆಂಕಟ್ ಚೈತನ್ಯ ಜೊನ್ನಲಗಡ್ಡ ಅಧಿಕೃತವಾಗಿ ವಿಚ್ಛೇದನ ಪಡೆದಿದ್ದಾರೆ. ಕಳೆದ ತಿಂಗಳು ಇಬ್ಬರೂ ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಪ್ರಕ್ರಿಯೆ ಮುಗಿದಿದ್ದು, ಇವರಿಗೆ ಡಿವೋರ್ಸ್ ಸಿಕ್ಕಿದೆ. ಇದು ಚಿರಂಜೀವಿ  ಕುಟುಂಬದ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ನಿಹಾರಿಕಾ ಕೊನಿಡೆಲಾ ಹಾಗೂ ಚೈತನ್ಯ ಜೆವಿ ಪರಸ್ಪರ ಪ್ರೀತಿಸಿ ಮದುವೆ ಆದವರು. ಹಲವು ವರ್ಷಗಳ ಕಾಲ ಪ್ರೀತಿಸುತ್ತಿದ್ದ ಇವರು 2020ರ ಡಿಸೆಂಬರ್​ನಲ್ಲಿ ಉದಯಪುರದಲ್ಲಿ ಅದ್ದೂರಿಯಾಗಿ ಮದುವೆಯಾಗಿದ್ದರು , ಆದರೆ ಮೂರು ವರ್ಷ ತುಂಬುವುದರೊಳಗೆ ನಿಹಾರಿಕಾ- ಚೈತನ್ಯ ಜೊನ್ನಲಗಡ್ಡ ದಾಂಪತ್ಯ ಬದುಕು ಅಂತ್ಯಗೊಂಡಿದ್ದು, ಈಗಾಗಲೇ ಇಬ್ಬರಿಗೂ ಕೌಟುಂಬಿಕ ನ್ಯಾಯಾಲಯವು ಡಿವೋರ್ಸ್‌ಗೆ ಮಂಜೂರು ನೀಡಿದೆ ಎನ್ನಲಾಗಿದೆ. ಆದರೆ ಈ ಡಿವೋರ್ಸ್‌ಗೆ ಕಾರಣವೇನು ಎಂಬುದು ಮಾತ್ರ ತಿಳಿದು ಬಂದಿಲ್ಲ.

ನಿಹಾರಿಕಾ ಮತ್ತು ಚೈತನ್ಯ ಪರಸ್ಪರ ಒಪ್ಪಿಗೆಯೊಂದಿಗೆ ನ್ಯಾಯಾಲಯದಲ್ಲಿ ಡಿವೋರ್ಸ್ಗೆ ಅರ್ಜಿ ಸಲ್ಲಿಸಿದ್ದರು. ನಿಹಾರಿಕಾ ಡಿವೋರ್ಸ್ ವಿಷಯವು ಸಾಕಷ್ಟು ಚರ್ಚೆ ಆಗಿತ್ತು. ನಿಹಾರಿಕಾ- ಚೈತನ್ಯ ಇನ್ಸ್ಟಾಗ್ರಾಂನಲ್ಲಿ ಒಬ್ಬರನ್ನೊಬ್ಬರು ಅನ್‌ಫಾಲೋ ಮಾಡಿದ್ದಾರೆ. ನಿಹಾರಿಕಾ ಅವರು ಮದುವೆಯ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಡಿಲೀಟ್ ಮಾಡಿದ್ರು. ಅತ್ತ ಚೈತನ್ಯ ಅವರ ಕೂಡ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ನಿಹಾರಿಕಾ ಜೊತೆಗಿದ್ದ ಎಲ್ಲ ಫೋಟೋಗಳನ್ನು ಡಿಲೀಟ್ ಮಾಡಿದ್ದರು. ಇದು ವಿಚ್ಛೇದನದ ಬಗ್ಗೆ ಮೊದಲ ಬಾರಿಗೆ ಅನುಮಾನವನ್ನು ಹುಟ್ಟುಹಾಕಿತ್ತು. ಇಬ್ಬರು ವಿಚ್ಛೇದನ ಪಡೆಯುತ್ತಿದ್ದಾರೆ ಎಂಬ ವದಂತಿಯು ಎಲ್ಲ ಕಡೆ ಹಬ್ಬಿಕೊಂಡಿತ್ತು. ಇದೀಗ ವದಂತಿ ನಿಜವಾಗಿದೆ.

ನಿಹಾರಿಕಾ ಅವರು ನಟನೆಯ ಜೊತೆಗೆ ತಮ್ಮದೇ ನಿರ್ಮಾಣ ಸಂಸ್ಥೆ ಆರಂಭಿಸಿದರು. ವೆಬ್ ಸೀರಿಸ್ ಹಾಗೂ ಸಿನಿಮಾಗಳನ್ನು ಅವರು ನಿರ್ಮಾಣ ಮಾಡಿದರು. ಪಿಂಕ್ ಎಲಿಫೆಂಟ್ ಪಿಕ್ಚರ್ಸ್ ಎಂದು ಈ ಬ್ಯಾನರ್​ಗೆ ಅವರು ಹೆಸರಿಟ್ಟಿದ್ದಾರೆ. ಹೈದರಾಬಾದ್​ನಲ್ಲಿ ಅವರು ಅದ್ದೂರಿ ಕಚೇರಿ ಕೂಡ ಆರಂಭಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT