ವೃಷಭ ಚಿತ್ರದ ನಾಯಕ ಮೋಹನ್ ಲಾಲ್, ನಂದಕಿಶೋರ್ ಮತ್ತಿತರರು 
ಸಿನಿಮಾ ಸುದ್ದಿ

ನಂದ ಕಿಶೋರ್ ನಿರ್ದೇಶನದ 'ವೃಷಭ' ಮಾಸಾಂತ್ಯಕ್ಕೆ ಚಿತ್ರೀಕರಣ ಆರಂಭ, ಬಹುಭಾಷಾ ತಾರೆಯರ ಸಮಾಗಮ!

ರನ್ನ, ಮುಕುಂದ ಮುರಾರಿ ಚಿತ್ರದ ನಿರ್ದೇಶಕ ನಂದ ಕಿಶೋರ್ ತಮ್ಮ ಮುಂದಿನ ಮಹತ್ವಾಕಾಂಕ್ಷೆಯ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಈ ಚಿತ್ರ ಸ್ಟಾರ್-ಸ್ಟಡ್ ಎಂಟರ್ಟೈನರ್ ಆಗುವ ಲಕ್ಷಣಗಳು ಗೋಚರಿಸುತ್ತಿವೆ.

ರನ್ನ, ಮುಕುಂದ ಮುರಾರಿ ಚಿತ್ರದ ನಿರ್ದೇಶಕ ನಂದ ಕಿಶೋರ್ ತಮ್ಮ ಮುಂದಿನ ಮಹತ್ವಾಕಾಂಕ್ಷೆಯ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಈ ಚಿತ್ರ ಸ್ಟಾರ್-ಸ್ಟಡ್ ಎಂಟರ್ಟೈನರ್ ಆಗುವ ಲಕ್ಷಣಗಳು ಗೋಚರಿಸುತ್ತಿವೆ.ಮೆಗಾಸ್ಟಾರ್ ಮೋಹನ್ ಲಾಲ್ ನಾಯಕರಾಗಿರುವ ಬಹು ನಿರೀಕ್ಷಿತ  ಈ ಚಿತ್ರವನ್ನು ಕನೆಕ್ಟ್ ಮೀಡಿಯಾ ಮತ್ತು ಎವಿಎಸ್ ಸ್ಟುಡಿಯೋಸ್ ಸಹಯೋಗದೊಂದಿಗೆ ಬಾಲಾಜಿ ಟೆಲಿಫಿಲ್ಮ್ಸ್‌ನ ಏಕ್ತಾ ಕಪೂರ್ ನಿರ್ಮಿಸುತ್ತಿದ್ದಾರೆ. 

ವೃಷಭ ಶಿವ ಅಥವಾ ನಂದಿಗೆ ಸಮಾನಾರ್ಥಕವಾಗಿದ್ದು, ತಂದೆ-ಮಗನ ಸಂಬಂಧದ ಜಟಿಲತೆಗಳ ಸುತ್ತ ಕಥೆ ಸಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಮೋಹನ್ ಲಾಲ್ ಜೊತೆಗೆ  ತೆಲುಗು ನಟ ರೋಷನ್ ಮೇಕಾ, ಮೆಗಾಸ್ಟಾರ್ ಮೋಹನ್ ಲಾಲ ಸಂಜಯ್ ಕಪೂರ್ ಅವರ ಪುತ್ರಿ ಶನಯಾ ಕಪೂರ್ ಕಾಣಿಸಿಕೊಳ್ಳಲಿದ್ದಾರೆ. ಕೆಜಿಎಫ್ ಖ್ಯಾತಿಯ ಗರುಡ ರಾಮ್ ಮತ್ತು ನಟ ರವಿಶಂಕರ್ ಕೂಡ ನಟಿಸುತ್ತಿದ್ದಾರೆ. 

ಚಿತ್ರಕ್ಕೆ ದೇವಿ ಶ್ರೀ ಪ್ರಸಾದ್ ಅವರ ಸಂಗೀತ ಮತ್ತು ಕ್ರಿಶ್ ಮತ್ತು ಕುಚ್ ಕುಚ್ ಹೋತಾ ಹೈ ಖ್ಯಾತಿಯ ಸಂತೋಷ್ ತುಂಡಿಲ್ ಅವರ ಛಾಯಾಗ್ರಹಣವಿದೆ. ಚಿತ್ರಕ್ಕೆ ಮೋಹನ್ ಬಿ ಕೆರೆ ಕಲಾ ನಿರ್ದೇಶನವಿದ್ದು, ಕೆ ಎಂ ಪ್ರಕಾಶ್ ಸಂಕಲನವಿದೆ.

ಸಿನಿ ಎಕ್ಸ್ ಪ್ರೆಸ್ ಸಂದರ್ಶನದಲ್ಲಿ ಮಾತನಾಡಿದ ನಂದ ಕಿಶೋರ್, ಕಳೆದ ಐದು ವರ್ಷಗಳಿಂದ ವೃಷಭದಲ್ಲಿ ಕೆಲಸ ಮಾಡುತ್ತಿರುವ ಬಗ್ಗೆ ತಮ್ಮ ಉತ್ಸಾಹವನ್ನು ವ್ಯಕ್ತಪಡಿಸಿದರು. ಮೋಹನ್‌ಲಾಲ್ ಮತ್ತಿತರ ಪ್ರತಿಭಾವಂತರೊಂದಿಗೆ ಚಿತ್ರ ಮಾಡಬೇಕೆಂಬ ಕನಸು ನನಸಾಗಿದೆ ಎಂದು ಹೇಳಿದರು. ಚಿತ್ರ ತಯಾರಿಯ ಅಂತಿಮ ಹಂತ ಪ್ರವೇಶಿಸುತ್ತಿದ್ದಂತೆ, ಈ ದೊಡ್ಡ-ಬಜೆಟ್ ಮಲ್ಟಿಸ್ಟಾರರ್ ಚಿತ್ರದಲ್ಲಿ ಮತಷ್ಟು ಮಂದಿ ಅಭಿನಯಿಸುವ ಸಾಧ್ಯತೆಯಿದೆ. ಈ ತಿಂಗಳ ಅಂತ್ಯದ ವೇಳೆಗೆ ಚಿತ್ರೀಕರಣ ಆರಂಭಿಸಲು ನಿರ್ದೇಶಕರು ಯೋಜಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

SCROLL FOR NEXT