ಹೃತಿಕಾ, ಪುನೀತ್ ರಾಜ್‌ಕುಮಾರ್, ಸುಘೋಷ್ 
ಸಿನಿಮಾ ಸುದ್ದಿ

'ಅಪರೂಪ' ಚಿತ್ರದಲ್ಲಿ ಪುನೀತ್ ರಾಜ್‌ಕುಮಾರ್ ಹಾಡಿರುವ 'ಯು ಆರ್ ಮೈ ಕರೀನಾ' ಮೋಡಿ ಮಾಡಿದೆ: ನಿರ್ದೇಶಕ ಮಹೇಶ್ ಬಾಬು

ಪ್ರೇಮಕಥೆಗಳತ್ತ ಒಲವು ಹೊಂದಿರುವ ಮತ್ತು ಹೊಸ ಪ್ರತಿಭೆಗಳನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸುವ ನಿರ್ದೇಶಕ ಮಹೇಶ್ ಬಾಬು ಸಾರಥಿ ಅವರ ಇತ್ತೀಚಿನ ಚಿತ್ರ ‘ಅಪರೂಪ’ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಚಿತ್ರ ಜುಲೈ 14 ರಂದು ಕರ್ನಾಟಕದಾದ್ಯಂತ ತೆರೆಕಾಣಲಿದೆ.

ಪ್ರೇಮಕಥೆಗಳತ್ತ ಒಲವು ಹೊಂದಿರುವ ಮತ್ತು ಹೊಸ ಪ್ರತಿಭೆಗಳನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸುವ ನಿರ್ದೇಶಕ ಮಹೇಶ್ ಬಾಬು ಸಾರಥಿ ಅವರ ಇತ್ತೀಚಿನ ಚಿತ್ರ ‘ಅಪರೂಪ’ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಚಿತ್ರ ಜುಲೈ 14 ರಂದು ಕರ್ನಾಟಕದಾದ್ಯಂತ ತೆರೆಕಾಣಲಿದೆ.

ಸೌಂಡ್‌ಟ್ರಾಕ್‌ ಅನ್ನು ಮಂಗಳವಾರ ಬಿಡುಗಡೆ ಮಾಡಲಾಗಿದ್ದು, ಒಂದು ನಿರ್ದಿಷ್ಟ ಹಾಡು ಇದೀಗ ಎಲ್ಲರ ಗಮನ ಸೆಳೆದಿದೆ. ಈ ಹಾಡನ್ನು ಪುನೀತ್ ರಾಜ್‌ಕುಮಾರ್ ಹಾಡಿದ್ದು, ಚಿತ್ರಕ್ಕೆ ವಿಶೇಷವಾದ ಆಕರ್ಷಣೆಯನ್ನು ನೀಡಿದೆ. 'ಯು ಆರ್ ಮೈ ಕರೀನಾ' ಎಂಬ ಶೀರ್ಷಿಕೆಯ ಈ ಟಪಾಂಗುಚ್ಚಿ ಹಾಡು ಪುನೀತ್ ರಾಜ್‌ಕುಮಾರ್ ಹಾಡಿರುವ ಕೊನೆಯ ಹಾಡಾಗಿದೆ. ಪ್ರಜ್ವಲ್ ಪೈ ಸಂಗೀತವಿರುವ ಈ ಚಿತ್ರಕ್ಕೆ ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದಾರೆ ಮತ್ತು ಸಂಗೀತಾ ರವೀಂದ್ರನಾಥ್ ಕೂಡ ಹಾಡಿದ್ದಾರೆ.

'ಅಪರೂಪ'ವನ್ನು ಸಮಕಾಲೀನ ಪ್ರೇಮಕಥೆ ಎನ್ನುವ ನಿರ್ದೇಶಕರು, ವಿಶಿಷ್ಟ ನಿರೂಪಣೆಯಿಂದಾಗಿ ಚಿತ್ರವು ಹಲವಾರು ಸವಾಲುಗಳನ್ನು ಒಡ್ಡಿದೆ ಎಂದು ಹಂಚಿಕೊಳ್ಳುತ್ತಾರೆ. ಈ ಹಿಂದೆ ನಿರ್ದೇಶಕರ 'ಅತಿರಥ' ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಮಂಡ್ಯದ ಸುಘೋಷ್ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದಾರೆ. ಈ ಚಿತ್ರದ ಮೂಲಕ ಖ್ಯಾತ ನಟಿ ಅಮಾನಿ ಅವರ ಸೊಸೆ ಹೃತಿಕಾ ಅವರು ಕನ್ನಡಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.

ಅಶೋಕ್, ಅರುಣಾ ಬಾಲರಾಜ್, ಅವಿನಾಶ್, ಕುರಿ ಪ್ರತಾಪ್, ದಿನೇಶ್ ಮಂಗಳೂರು, ವಿಜಯ್ ಚೆಂಡೂರ್, ಕಡ್ಡಿಪುಡಿ ಚಂದ್ರು ಮತ್ತು ಮೋಹನ್ ಜುನೇಜಾ ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಬೆಂಗಳೂರು, ಮೈಸೂರು, ಚಿಕ್ಕಮಗಳೂರು ಮತ್ತು ಕಾಶ್ಮೀರದಂತಹ ಸ್ಥಳಗಳಲ್ಲಿ ಛಾಯಾಗ್ರಾಹಕ ಸೂರ್ಯಕಾಂತ್ ಅವರು ಅಪರೂಪವನ್ನು ಚಿತ್ರೀಕರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 World Cup, IND vs Pak: ಇಶಾನ್ ಕಿಶಾನ್ ಬ್ಯಾಟಿಂಗ್ ಅಬ್ಬರ; ಸ್ಪಿನ್ ಮೋಡಿಗೆ ಪಾಕ್ ತತ್ತರ, ಭಾರತಕ್ಕೆ 61 ರನ್ ಗೆಲುವು!

T20 World Cup 2026: ಸೂಪರ್ 8 ಹಂತಕ್ಕೆ ಭಾರತ ಲಗ್ಗೆ; ದೇಶಾದ್ಯಂತ ಸಂಭ್ರಮಾಚರಣೆ, ಗಣ್ಯರ ಶುಭಾಶಯ!

T20 World Cup 2026: 27 ಬಾಲ್ ಗಳಲ್ಲಿ ಅರ್ಧಶತಕ ಹೊಡೆದು, ಭಾರತದ ಸ್ಕೋರ್ ಹೆಚ್ಚಿಸಿದ ಇಶಾನ್ ಕಿಶಾನ್!

RSS ದೆವ್ವವಿದ್ದಂತೆ, ಬಿಜೆಪಿ ದೆವ್ವದ ನೆರಳು: ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಚಿಕ್ಕಮಗಳೂರು: ತಾಯಿ ಬೈದಿದ್ದಕ್ಕೆ 7ನೇ ತರಗತಿ ಬಾಲಕಿ ಆತ್ಮಹತ್ಯೆ!

SCROLL FOR NEXT