ಸಂಜು ಮತ್ತು ಗೀತಾ 2 ಪೋಸ್ಟರ್ 
ಸಿನಿಮಾ ಸುದ್ದಿ

ಸಂಜು ವೆಡ್ಸ್ ಗೀತಾ 2 ಸಿನಿಮಾ ಘೋಷಣೆ: ಶ್ರೀನಗರ ಕಿಟ್ಟಿ ಜೊತೆಗೆ ರಮ್ಯಾ? ನಿರ್ದೇಶಕ ನಾಗಶೇಖರ್ ಹೇಳಿದ್ದೇನು?

ಸ್ಯಾಂಡಲ್‌ವುಡ್‌ ನಟ ಶ್ರೀನಗರ ಕಿಟ್ಟಿ ಹುಟ್ಟುಹಬ್ಬದ ನಿಮಿತ್ತ ಸಂಜು ವೆಡ್ಸ್ ಗೀತಾ ಸಿನಿಮಾದ ಪಾರ್ಟ್ 2 ಅಧಿಕೃತ ಘೋಷಣೆ ಮಾಡಿದೆ ಚಿತ್ರತಂಡ.

ಸ್ಯಾಂಡಲ್‌ವುಡ್‌ ನಟ ಶ್ರೀನಗರ ಕಿಟ್ಟಿ ಹುಟ್ಟುಹಬ್ಬದ ನಿಮಿತ್ತ ಸಂಜು ವೆಡ್ಸ್ ಗೀತಾ ಸಿನಿಮಾದ ಪಾರ್ಟ್ 2 ಅಧಿಕೃತ ಘೋಷಣೆ ಮಾಡಿದೆ ಚಿತ್ರತಂಡ.

ಸಂಜು ವೆಡ್ಸ್ ಗೀತಾ ಸಿನಿಮಾದ ಪಾರ್ಟ್ 2 ಘೋಷಣೆಯಾಗುತ್ತಿದ್ದಂತೆ ಸಿನಿಮಾದಲ್ಲಿ ಮೋಹಕ ತಾರೆ ರಮ್ಯಾ ಇರಲಿದ್ದಾರಾ ಎಂಬ ಕುತೂಹಲ ಸಿನಿರಸಿಕರಲ್ಲಿ ಹೆಚ್ಚಾಗಿದೆ. ನವೆಂಬರ್‌ನಿಂದ ಸಂಜು ವೆಡ್ಸ್ ಗೀತಾ-2 ಶೂಟಿಂಗ್ ಶುರುವಾಗಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. 2024ರ ದಸರಾ ವೇಳೆಗೆ ರಿಲೀಸ್ ಮಾಡುವ ಗುರಿ ಹೊಂದಿದ್ದಾರೆ.

ಈ ಸಿನಿಮಾ ಮಾಡುವ ಆರಂಭದಲ್ಲಿ ಹಣದ ಅಭಾವವೂ ಇತ್ತು. ನಿರ್ಮಾಣದ ಹಿಂದೆ ಒಂದಲ್ಲ ಎರಡಲ್ಲ, ಹಲವು ರೋಚಕ ಕಥೆಗಳಿವೆ ಎಂದು ವೀಕೆಂಡ್‌ ವಿತ್‌ ರಮೇಶ್‌ ಶೋದಲ್ಲಿ ರಮ್ಯಾ ಹೇಳಿಕೊಂಡಿದ್ದರು. ಸಂಜು ವೆಡ್ಸ್ ಗೀತಾ ಚಿತ್ರ ಮತ್ತೆ ಆರಂಭ ಆಗಲು ರಮ್ಯಾ ಹಣ ಕೊಟ್ಟಿದ್ದರಂತೆ. ಬಳಿಕ ಈ ಸಿನಿಮಾ ಸೂಪರ್ ಡೂಪರ್ ಹಿಟ್ ಕೂಡ ಆಯಿತು.

ಸಂಜು ವೆಡ್ಸ್ ಗೀತ ಸಿನಿಮಾ ನಿರ್ದೇಶಿಸಿದ್ದ ನಾಗಶೇಖರ್ ಅವರೇ ಸಂಜು ವೆಡ್ಸ್ ಗೀತಾ 2 ಸಿನಿಮಾವನ್ನು ನಿರ್ದೇಶನ ಮಾಡುವ ಜೊತೆಗೆ ನಿರ್ಮಾಣವನ್ನೂ ಮಾಡುತ್ತಿದ್ದಾರೆ. ಸಂಜು ವೆಡ್ಸ್ ಗೀತಾ ಸಿನಿಮಾ 2011 ರಲ್ಲಿ ಬಿಡುಗಡೆ ಆಗಿತ್ತು. ಅದಾದ 12 ವರ್ಷಗಳ ಬಳಿಕ ಎರಡನೇ ಭಾಗ ಘೋಷಣೆ ಆಗಿದೆ.  ರಮ್ಯಾ ಪ್ರೆಸೆಂಟ್ ಎಂದು ಬರೆಯಲಾಗಿದೆ, ಅದರ ಜೊತೆಗೆ  'Lifeee is Beaautiiifullll' ಎಂಬ ಅಡಿಬರಹವಿದೆ.

ಶ್ರೀನಗರ ಕಿಟ್ಟಿ ಅಂತೂ ಸಿನಿಮಾದಲ್ಲಿ ಇರಲಿದ್ದಾರೆ ಅದು ಖಾತ್ರಿ. ಆದರೆ ಈ ಸಿನಿಮಾದಲ್ಲಿ ನಾಯಕಿಯಾಗಿ ರಮ್ಯಾ ಇರಲಿದ್ದಾರಾ ಎಂಬ ಪ್ರಶ್ನೆಗೆ ನಾಗಶೇಖರ್ ಉತ್ತರ ನೀಡಿದ್ದಾರೆ, ರಮ್ಯಾ ಅವರ ಜೊತೆ ಈ ಸಂಬಂಧ ಮಾತನಾಡಲಾಗಿದೆ, ಆದರೆ ಇನ್ನೂ ಅಂತಿಮವಾಗಿಲ್ಲ, ಚರ್ಚೆಯ ಹಂತದಲ್ಲಿದೆ ಎಂದು ತಿಳಿಸಿದ್ದಾರೆ.  ರಮ್ಯಾ ಅವರು ಕತೆಯನ್ನು ಒಪ್ಪಿಕೊಳ್ಳುವ ನಿರೀಕ್ಷೆ ಇದೆ. ಒಂದೊಮ್ಮೆ ಅವರು ಒಪ್ಪಿಕೊಳ್ಳದಿದ್ದರೆ ಅವರ ಶುಭಹಾರೈಕೆಯೊಂದಿಗೆ ನಾವು ಸಿನಿಮಾ ಪ್ರಾರಂಭಿಸುತ್ತೇವೆ. ರಮ್ಯಾ ಸದಾ ನಮಗೆ ಒಳ್ಳೆಯದನ್ನೇ ಬಯಸುತ್ತಾರೆ ಎಂದಿದ್ದಾರೆ ನಾಗಶೇಖರ್.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹದಲ್ಲಿ 8 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರದಲ್ಲಿ ಕಟ್ಟೆಚ್ಚರ!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

ದೇಶಾದ್ಯಂತ H1N1 ಪ್ರಕರಣಗಳ ಏರಿಕೆ: ಸೋಂಕಿನ ಲಕ್ಷಣಗಳು, ಸಾರ್ವಜನಿಕರು ಪಾಲಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು, IMA ಸಲಹೆ ಏನು?

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!