ಶ್ರೀನಗರ ಕಿಟ್ಟಿ 
ಸಿನಿಮಾ ಸುದ್ದಿ

ಟೆರರ್‌ ಚಿತ್ರದಲ್ಲಿ ಶ್ರೀನಗರ ಕಿಟ್ಟಿ: ಡೆಡ್ಲಿ ಸೋಮ ಆದಿತ್ಯ ಎದುರು ಘರ್ಜಿಸಲು ಸಜ್ಜು!

ಸಿನಿಮಾ ಎಂಬ ಬಣ್ಣದ ಪ್ರಪಂಚದಲ್ಲಿ ಹೀರೋ ಆಗಿ ಮಿಂಚಿದವರು ಖಳ ನಟನಾಗಿ ಕಾಣಿಸಿಕೊಳ್ಳಬೇಕು ಎನ್ನುವ ಆಸೆ ಕೆಲ ನಟರಲ್ಲಿ ಇರುತ್ತದೆ. ಈ ಸಾಲಿಗೆ ಶ್ರೀನಗರ ಕಿಟ್ಟಿ ಕೂಡ ಒಬ್ಬರು. ನಟನಾಗಿ ಸಿನಿಮಾ ಪ್ರೇಕ್ಷಕರ ಮನಸ್ಸು ಕದ್ದಿದ್ದ ಶ್ರೀನಗರ ಕಿಟ್ಟಿ, ಹೀರೋ ಪಾತ್ರಕ್ಕಿಂತ ವಿಲನ್ ಪಾತ್ರ ಹೆಚ್ಚು ಮಾಡ್ತಾ ಇದ್ದಾರೆ‌. ಅವತಾರ ಪುರುಷ, ಮಾದೇವಾ ಸಿನಿಮಾ ಬಳಿಕ ಟೆರರ್...

ಸಿನಿಮಾ ಎಂಬ ಬಣ್ಣದ ಪ್ರಪಂಚದಲ್ಲಿ ಹೀರೋ ಆಗಿ ಮಿಂಚಿದವರು ಖಳ ನಟನಾಗಿ ಕಾಣಿಸಿಕೊಳ್ಳಬೇಕು ಎನ್ನುವ ಆಸೆ ಕೆಲ ನಟರಲ್ಲಿ ಇರುತ್ತದೆ. ಈ ಸಾಲಿಗೆ ಶ್ರೀನಗರ ಕಿಟ್ಟಿ ಕೂಡ ಒಬ್ಬರು. ನಟನಾಗಿ ಸಿನಿಮಾ ಪ್ರೇಕ್ಷಕರ ಮನಸ್ಸು ಕದ್ದಿದ್ದ ಶ್ರೀನಗರ ಕಿಟ್ಟಿ, ಹೀರೋ ಪಾತ್ರಕ್ಕಿಂತ ವಿಲನ್ ಪಾತ್ರ ಹೆಚ್ಚು ಮಾಡ್ತಾ ಇದ್ದಾರೆ‌. ಅವತಾರ ಪುರುಷ, ಮಾದೇವಾ ಸಿನಿಮಾ ಬಳಿಕ ಟೆರರ್ ಚಿತ್ರದಲ್ಲಿ ಶ್ರೀನಗರ ಕಿಟ್ಟಿ ವಿಲನ್‌ ಆಗಿ ನಟಿಸುತ್ತಿದ್ದಾರೆ.

ರಂಜನ್ ಶಿವರಾಮಗೌಡ ನಿರ್ದೇಶನದ ಟೆರರ್ ಚಿತ್ರದಲ್ಲಿ ನಟ ಆದಿತ್ಯ ಎದುರು ಘರ್ಜಿಸಲು ಶ್ರೀನಗರ ಕಿಟ್ಟಿ ಸಜ್ಜಾಗಿದ್ದಾರೆ.

ಇತ್ತೀಚೆಗಷ್ಟೇ ಚಿತ್ರದ ಪೋಸ್ಟರ್‌ವೊಂದನ್ನು ಬಿಡುಗಡೆ ಮಾಡಲಾಗಿದ್ದು, ಪೋಸ್ಟರ್ ಮೂಲಕ ಈ ವಿಚಾರವನ್ನು ಚಿತ್ರತಂಡ ಹಂಚಿಕೊಂಡಿದೆ. ಚಿತ್ರದ ಚಿತ್ರೀಕರಣವು ಪ್ರಸ್ತುತ 3ನೇ ಹಂತದಲ್ಲಿದೆ.

ಮಾಫಿಯಾ ಕುರಿತ ಚಿತ್ರ ಇದಾಗಿದ್ದು, ಚಿತ್ರದಲ್ಲಿ ಆದಿತ್ಯಾ ಗ್ಯಾಂಗಸ್ಟರ್ ಆಗಿ ಕಾಣಿಸಿಕೊಂಡರೆ, ಆದಿತ್ಯ ಎದುರಾಳಿಯಾಗಿ ಶ್ರೀನಗರ ಕಿಟ್ಟಿ ಕಾಣಿಸಿಕೊಳ್ಳುತ್ತಿದ್ದಾರೆ.

ಚಿತ್ರದ ಮುಂದಿನ ಚಿತ್ರೀಕರಣಕ್ಕಾಗಿ ಅದಿತ್ಯ ಅವರು, ಮಾರ್ಷಲ್ ಆರ್ಟ್ಸ್ ತರಬೇತಿ ಪಡೆಯುತ್ತಿದ್ದಾರೆಂದು ನಿರ್ದೇಶಕರು ಮಾಹಿತಿ ನೀಡಿದ್ದಾರೆ.

ಚಿತ್ರದಲ್ಲಿ ಶರತ್ ಲೋಹಿತಾಶ್ವ, ಮಿಮಿಕ್ರಿ ದಯಾನಂದ್ ಮತ್ತು ಧರ್ಮ ಮುನಿ ನಟಿಸಿದ್ದಾರೆ. ಯುಪಿಪಿಐ ಎಂಟರ್‌ಟೈನರ್ಸ್ ಅಡಿಯಲ್ಲಿ ಸಿಲ್ಕ್ ಮಂಜು ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಚಿತ್ರಕ್ಕೆ ಹರ್ಷವರ್ಧನ್ ರಾಜ್ ಅವರ ಸಂಗೀತ ಮತ್ತು ನವೀನ್ ಕುಮಾರ್ ಅವರ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT