ಶ್ರೀನಗರ ಕಿಟ್ಟಿ 
ಸಿನಿಮಾ ಸುದ್ದಿ

ಟೆರರ್‌ ಚಿತ್ರದಲ್ಲಿ ಶ್ರೀನಗರ ಕಿಟ್ಟಿ: ಡೆಡ್ಲಿ ಸೋಮ ಆದಿತ್ಯ ಎದುರು ಘರ್ಜಿಸಲು ಸಜ್ಜು!

ಸಿನಿಮಾ ಎಂಬ ಬಣ್ಣದ ಪ್ರಪಂಚದಲ್ಲಿ ಹೀರೋ ಆಗಿ ಮಿಂಚಿದವರು ಖಳ ನಟನಾಗಿ ಕಾಣಿಸಿಕೊಳ್ಳಬೇಕು ಎನ್ನುವ ಆಸೆ ಕೆಲ ನಟರಲ್ಲಿ ಇರುತ್ತದೆ. ಈ ಸಾಲಿಗೆ ಶ್ರೀನಗರ ಕಿಟ್ಟಿ ಕೂಡ ಒಬ್ಬರು. ನಟನಾಗಿ ಸಿನಿಮಾ ಪ್ರೇಕ್ಷಕರ ಮನಸ್ಸು ಕದ್ದಿದ್ದ ಶ್ರೀನಗರ ಕಿಟ್ಟಿ, ಹೀರೋ ಪಾತ್ರಕ್ಕಿಂತ ವಿಲನ್ ಪಾತ್ರ ಹೆಚ್ಚು ಮಾಡ್ತಾ ಇದ್ದಾರೆ‌. ಅವತಾರ ಪುರುಷ, ಮಾದೇವಾ ಸಿನಿಮಾ ಬಳಿಕ ಟೆರರ್...

ಸಿನಿಮಾ ಎಂಬ ಬಣ್ಣದ ಪ್ರಪಂಚದಲ್ಲಿ ಹೀರೋ ಆಗಿ ಮಿಂಚಿದವರು ಖಳ ನಟನಾಗಿ ಕಾಣಿಸಿಕೊಳ್ಳಬೇಕು ಎನ್ನುವ ಆಸೆ ಕೆಲ ನಟರಲ್ಲಿ ಇರುತ್ತದೆ. ಈ ಸಾಲಿಗೆ ಶ್ರೀನಗರ ಕಿಟ್ಟಿ ಕೂಡ ಒಬ್ಬರು. ನಟನಾಗಿ ಸಿನಿಮಾ ಪ್ರೇಕ್ಷಕರ ಮನಸ್ಸು ಕದ್ದಿದ್ದ ಶ್ರೀನಗರ ಕಿಟ್ಟಿ, ಹೀರೋ ಪಾತ್ರಕ್ಕಿಂತ ವಿಲನ್ ಪಾತ್ರ ಹೆಚ್ಚು ಮಾಡ್ತಾ ಇದ್ದಾರೆ‌. ಅವತಾರ ಪುರುಷ, ಮಾದೇವಾ ಸಿನಿಮಾ ಬಳಿಕ ಟೆರರ್ ಚಿತ್ರದಲ್ಲಿ ಶ್ರೀನಗರ ಕಿಟ್ಟಿ ವಿಲನ್‌ ಆಗಿ ನಟಿಸುತ್ತಿದ್ದಾರೆ.

ರಂಜನ್ ಶಿವರಾಮಗೌಡ ನಿರ್ದೇಶನದ ಟೆರರ್ ಚಿತ್ರದಲ್ಲಿ ನಟ ಆದಿತ್ಯ ಎದುರು ಘರ್ಜಿಸಲು ಶ್ರೀನಗರ ಕಿಟ್ಟಿ ಸಜ್ಜಾಗಿದ್ದಾರೆ.

ಇತ್ತೀಚೆಗಷ್ಟೇ ಚಿತ್ರದ ಪೋಸ್ಟರ್‌ವೊಂದನ್ನು ಬಿಡುಗಡೆ ಮಾಡಲಾಗಿದ್ದು, ಪೋಸ್ಟರ್ ಮೂಲಕ ಈ ವಿಚಾರವನ್ನು ಚಿತ್ರತಂಡ ಹಂಚಿಕೊಂಡಿದೆ. ಚಿತ್ರದ ಚಿತ್ರೀಕರಣವು ಪ್ರಸ್ತುತ 3ನೇ ಹಂತದಲ್ಲಿದೆ.

ಮಾಫಿಯಾ ಕುರಿತ ಚಿತ್ರ ಇದಾಗಿದ್ದು, ಚಿತ್ರದಲ್ಲಿ ಆದಿತ್ಯಾ ಗ್ಯಾಂಗಸ್ಟರ್ ಆಗಿ ಕಾಣಿಸಿಕೊಂಡರೆ, ಆದಿತ್ಯ ಎದುರಾಳಿಯಾಗಿ ಶ್ರೀನಗರ ಕಿಟ್ಟಿ ಕಾಣಿಸಿಕೊಳ್ಳುತ್ತಿದ್ದಾರೆ.

ಚಿತ್ರದ ಮುಂದಿನ ಚಿತ್ರೀಕರಣಕ್ಕಾಗಿ ಅದಿತ್ಯ ಅವರು, ಮಾರ್ಷಲ್ ಆರ್ಟ್ಸ್ ತರಬೇತಿ ಪಡೆಯುತ್ತಿದ್ದಾರೆಂದು ನಿರ್ದೇಶಕರು ಮಾಹಿತಿ ನೀಡಿದ್ದಾರೆ.

ಚಿತ್ರದಲ್ಲಿ ಶರತ್ ಲೋಹಿತಾಶ್ವ, ಮಿಮಿಕ್ರಿ ದಯಾನಂದ್ ಮತ್ತು ಧರ್ಮ ಮುನಿ ನಟಿಸಿದ್ದಾರೆ. ಯುಪಿಪಿಐ ಎಂಟರ್‌ಟೈನರ್ಸ್ ಅಡಿಯಲ್ಲಿ ಸಿಲ್ಕ್ ಮಂಜು ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಚಿತ್ರಕ್ಕೆ ಹರ್ಷವರ್ಧನ್ ರಾಜ್ ಅವರ ಸಂಗೀತ ಮತ್ತು ನವೀನ್ ಕುಮಾರ್ ಅವರ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟ್ರಂಪ್ ಗೆ ತೀವ್ರ ಹಿನ್ನಡೆ: ಇರಾನ್ ವಿರುದ್ಧ ಯುದ್ಧ ವಿರೋಧಿಸಿ ಅಮೆರಿಕದ ಭಯೋತ್ಪಾದನಾ ನಿಗ್ರಹ ಮುಖ್ಯಸ್ಥ ರಾಜೀನಾಮೆ!

Iran War: 'ಮಾತುಕತೆ ಪ್ರಶ್ನೆಯೇ ಇಲ್ಲ.. ಅಮೆರಿಕ, ಇಸ್ರೇಲ್ ಶರಣಾಗಲೇಬೇಕು..': Mojtaba Khamenei ಎಚ್ಚರಿಕೆ

KD ಚಿತ್ರ ವಿವಾದ: 'ಅನುವಾದ ಮಾತ್ರ ನನ್ನದು.. ಹಾಡು ಪ್ರೇಮ್ ಅವರದ್ದು..' 'ಇದೊಂದರಿಂದ ಅವಮಾನವಾಗುತ್ತಿದೆ'..: ಗೀತ ರಚನೆಕಾರ ಶಾಕಿಂಗ್ ಹೇಳಿಕೆ

ಯಾರಾಗಲಿದ್ದಾರೆ ಭಾರತದ ಮುಂದಿನ CDS?: ಇಲ್ಲಿದೆ ಮಾಹಿತಿ

ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಕಾಮಕಾಂಡ?: ಸಂತ್ರಸ್ತೆಯ ಮಗಳ ಮೇಲೂ ಕಣ್ಣು, ಆಡಿಯೋ-ವಿಡಿಯೋ ವೈರಲ್..! ಅಮಾನತು

SCROLL FOR NEXT