ಮಿಲನಾ ಮತ್ತು ಕೃಷ್ಣ 
ಸಿನಿಮಾ ಸುದ್ದಿ

ಕೌಸಲ್ಯ ಸುಪ್ರಜಾ ರಾಮ: ಡಾರ್ಲಿಂಗ್ ಕೃಷ್ಣಗೆ ಮಿಲನಾ ನಾಗರಾಜ್ ನಾಯಕಿ?

ವಿಶಿಷ್ಟ ರೀತಿಯ ಕಥೆಗಳ ಮೂಲಕ ಹೆಸರುವಾಸಿಯಾಗಿರುವ ನಿರ್ದೇಶಕ ಶಶಾಂಕ್‌ ‘ಕೌಸಲ್ಯಾ ಸುಪ್ರಜಾ ರಾಮ’ ಎಂಬ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಲವ್ ಮಾಕ್ಟೇಲ್  ಖ್ಯಾತಿಯ ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸುತ್ತಿದ್ದಾರೆ.

ವಿಶಿಷ್ಟ ರೀತಿಯ ಕಥೆಗಳ ಮೂಲಕ ಹೆಸರುವಾಸಿಯಾಗಿರುವ ನಿರ್ದೇಶಕ ಶಶಾಂಕ್‌ ‘ಕೌಸಲ್ಯಾ ಸುಪ್ರಜಾ ರಾಮ’ ಎಂಬ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಲವ್ ಮಾಕ್ಟೇಲ್ ಖ್ಯಾತಿಯ ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸುತ್ತಿದ್ದಾರೆ.

ಬೃಂದಾ ಆಚಾರ್ಯ ನಾಯಕಿಯಾಗಿ ನಟಿಸಿದರೆ, ನಟಿ ಮಿಲನಾ ನಾಗರಾಜ್ ಪತಿ ಕೃಷ್ಣ ಅವರೊಂದಿಗೆ ಸಕ್ರಿಯವಾಗಿ ಪ್ರಚಾರ ಮಾಡುತ್ತಿದ್ದಾರೆ. ಟ್ರೆಂಡಿಂಗ್‌ನಲ್ಲಿರುವ ಶಿವಾನಿ ಹಾಡಿನೊಂದಿಗೆ ರೀಲ್‌ಗಳನ್ನು ರಚಿಸುವುದರಿಂದ ಹಿಡಿದು, ಬಿಡುಗಡೆಯ ದಿನಾಂಕವನ್ನು ಘೋಷಿಸುವವರೆಗೆ, ಅವರು ಚಿತ್ರಕ್ಕಾಗಿ ಸಾಕಷ್ಟು ಕೆಲಸ  ಮಾಡುತ್ತಿದ್ದಾರೆ. ಇದು ಕೌಸಲ್ಯ ಸುಪ್ರಜಾ ರಾಮದಲ್ಲಿ ಕೃಷ್ಣನೊಂದಿಗೆ ತೆರೆಯ ಮೇಲೆ ಮತ್ತೆ ಒಂದಾಗುವುದರ ಬಗ್ಗೆ ಊಹಾಪೋಹಗಳನ್ನು ಹುಟ್ಟುಹಾಕಿದೆ.

ಡಾರ್ಲಿಂಗ್ ಕೃಷ್ಣ, ಬೃಂದಾ ಆಚಾರ್ಯ

ಶಶಾಂಕ್‌ ಆರಂಭದಲ್ಲಿಯೇ ನಮ್ಮ ಚಿತ್ರದಲ್ಲಿ ಇಬ್ಬರು ನಾಯಕಿಯರು ಎಂದು ಹೇಳಿದ್ದರು. ಆ ಇನ್ನೊಬ್ಬ ನಾಯಕಿ ಮಿಲನಾ ಇರಬಹದು ಎಂಬ ಅನುಮಾನಗಳಿವೆ. ನಿರ್ಮಾಪಕರು ಈ ಮಾಹಿತಿಯನ್ನು ಮುಚ್ಚಿಟ್ಟಿದ್ದರೂ, ಜುಲೈ 14 ರಂದು ಸುದೀಪ್ ಗೌರವಾನ್ವಿತ ಅತಿಥಿಯಾಗಿ ಚಿತ್ರದ ಟ್ರೈಲರ್ ಅನಾವರಣಗೊಳಿಸಲು ಯೋಜಿಸಿರುವ ನಿರ್ದೇಶಕ ಶಶಾಂಕ್, ಚಿತ್ರದಲ್ಲಿ ಮಿಲನಾ ಬಗ್ಗೆ ಮಾಹಿತಿ ನೀಡುವ ಸಾಧ್ಯತೆಯಿದೆ. ಒಂದು ವೇಳೆ ಕೃಷ್ಣ ಜೊತೆ ಮಿಲನಾ ನಟಿಸಿದರೇ ಇದು ಬೆಳ್ಳಿತೆರೆಯಲ್ಲಿ ಈ ಆಫ್-ಸ್ಕ್ರೀನ್ ಜೋಡಿಯ ಆರನೇ ಸಿನಿಮಾವಾಗಿದೆ.

ಈ ಹಿಂದೆ ನಮ್ ದುನಿಯಾ ನಮ್ ಸ್ಟೈಲ್, ಚಾರ್ಲಿ ಮತ್ತು ಲವ್ ಮಾಕ್‌ಟೇಲ್ ಸಿನಿಮಾಗಳಲ್ಲಿ ನಟಿಸಿದ್ದರು. ನಂತರ ಲವ್ ಬರ್ಡ್ಸ್‌ ನಲ್ಲಿ ಜೊತೆಯಾಗಿದ್ದರು. ಈಗ ಅವರ ಕೌಸಲ್ಯ ಸುಪ್ರಜಾ ರಾಮಾ ಸಿನಿಮಾದೊಂದಿಗೆ ಮುಂದುವರಿಯುತ್ತಿದೆ. ಮಿಸ್ಟರ್ ಬ್ಯಾಚುಲರ್ ಮತ್ತು ಲವ್ ಬರ್ಡ್ಸ್ ನಂತರ ಕೃಷ್ಣ ಅವರ ಕೌಸಲ್ಯ ಸುಪ್ರಜಾ ರಾಮ ಅವರ ವರ್ಷದ ಮೂರನೇ ಸಿನಿಮಾವಾಗಿದೆ.

ಪ್ರೇಮಂ ಪೂಜ್ಯಂ ಮತ್ತು ಜೂಲಿಯೆಟ್‌ನಲ್ಲಿನ ಪಾತ್ರಗಳಿಗೆ ಹೆಸರುವಾಸಿಯಾದ ಬೃಂದಾ ಆಚಾರ್ಯ ಅವರೊಂದಿಗೆ ಮೊದಲ ಬಾರಿ ಕೃಷ್ಣ ಜೋಡಿಯಾಗಲಿದ್ದಾರೆ. ಚಿತ್ರದಲ್ಲಿ ನಾಗಭೂಷಣ, ರಂಗಾಯಣ ರಘು, ಸುಧಾ ಬೆಳವಾಡಿ, ಮತ್ತು ಅಚ್ಯುತ್ ಕುಮಾರ್ ಸೇರಿದಂತೆ  ಹಲವು ಮಂದಿ ನಟಿಸಿದ್ದಾರೆ.

ಕೌರವ ಪ್ರೊಡಕ್ಷನ್ ಹೌಸ್ ಮತ್ತು ಶಶಾಂಕ್ ಸಿನಿಮಾಸ್ ಜಂಟಿಯಾಗಿ ಕೌಸಲ್ಯ ಸುಪ್ರಜಾ ರಾಮ ನಿರ್ಮಿಸಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದು, ಸುಗ್ನನ್ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT