ಕರಟಕ-ದಮನಕ ಸಿನಿಮಾ ಪೋಸ್ಟರ್ 
ಸಿನಿಮಾ ಸುದ್ದಿ

ಯೋಗರಾಜ ಭಟ್ಟರು ಹೆಣೆದ ಕುತಂತ್ರಿ ನರಿಗಳ ಕಥೆ: ಕರಟಕ-ದಮನಕ ಸಿನಿಮಾ ಪೋಸ್ಟರ್‌ ಔಟ್‌!

ಪಂಚತಂತ್ರ ಕಥೆಯ ಕರಟಕ ಮತ್ತು ದಮನಕಗಳ ಪಾತ್ರಗಳಿಂದ ಸ್ಫೂರ್ತಿ ಪಡೆದ ಈ ಚಲನಚಿತ್ರವು ಆಕ್ಷನ್-ಪ್ಯಾಕ್ಡ್ ಎಂಟರ್ಟೈನರ್ ಎಂದು ಬಿಂಬಿಸಲಾಗಿದೆ. ಚಿತ್ರದ ಫಸ್ಟ್ ಲುಕ್ ಕೂಡ ರಿಲೀಸ್ ಆಗಿದೆ. ಕರಟಕ ದಮನಕ ಎಂದರೆ ‘ಒಂದಾನೊಂದು ಕಾಲದಲ್ಲಿ ಎರಡು ಕುತಂತ್ರಿ ನರಿಗಳಿದ್ದವು.

ಬೆಂಗಳೂರು: ಹ್ಯಾಟ್ರಿಕ್‌ ಹೀರೊ ಶಿವರಾಜ್‌ ಕುಮಾರ್‌ ಇದೇ ಮೊದಲ ಬಾರಿಗೆ ಇಂಡಿಯನ್ ಮೈಕೆಲ್ ಜಾಕ್ಸನ್ ಪ್ರಭುದೇವ ಜತೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಇನ್ನೂ ವಿಶೇಷ ಅಂದರೆ ಈ ಸಿನಿಮಾಗೆ ಯೋಗರಾಜ್ ಭಟ್ ಅವರ ನಿರ್ದೇಶನವಿದೆ.

ಸಿನಿಮಾದ ಟೈಟಲ್‌ ಕೂಡ ರಿವೀಲ್‌ ಆಗಿದ್ದು, ‘K ಕರಟಕ D ದಮನಕ’ ಎಂದು ವಿಭಿನ್ನ ಶೀರ್ಷಿಕೆ ಇಟ್ಟಿದ್ದಾರೆ. ಹಾಗಾದ್ರೆ ‘K ಕರಟಕ D ದಮನಕ’ ಸಿನಿಮಾದ ಅರ್ಥ ಏನು? ಈ ಬಗ್ಗೆ ಪೋಸ್ಟ್‌ ಮೂಲಕ ಯೋಗರಾಜ್‌ ಭಟ್‌ ರಿವೀಲ್‌ ಮಾಡಿದ್ದಾರೆ.

ಪಂಚತಂತ್ರ ಕಥೆಯ ಕರಟಕ ಮತ್ತು ದಮನಕಗಳ ಪಾತ್ರಗಳಿಂದ ಸ್ಫೂರ್ತಿ ಪಡೆದ ಈ ಚಲನಚಿತ್ರವು ಆಕ್ಷನ್-ಪ್ಯಾಕ್ಡ್ ಎಂಟರ್ಟೈನರ್ ಎಂದು ಬಿಂಬಿಸಲಾಗಿದೆ. ಚಿತ್ರದ ಫಸ್ಟ್ ಲುಕ್ ಕೂಡ ರಿಲೀಸ್ ಆಗಿದೆ. ಕರಟಕ ದಮನಕ ಎಂದರೆ ‘ಒಂದಾನೊಂದು ಕಾಲದಲ್ಲಿ ಎರಡು ಕುತಂತ್ರಿ ನರಿಗಳಿದ್ದವು. ಒಂದರ ಹೆಸರು ಕರಟಕ ಇನ್ನೊಂದರ ಹೆಸರು ದಮನಕ.

ಈ ಎರಡೂ ನರಿಗಳು ಕಾಡು ಮತ್ತು ನಾಡಿನ ತಲೆ ಕೆಡಿಸಿ ಇತಿಹಾಸವಾದವು. ಈ ಕುತಂತ್ರಿ ನರಿಗಳು ಇಂದು ಇಲ್ಲಿ ಮಾನವ ರೂಪ ತಾಳಿವೆ. ಎಚ್ಚರಿಕೆ’ ಎಂದು ಫೋಸ್ಟ್ ಮಾಡಿದ್ದಾರೆ. ಹಲವು ದಿನಗಳಿಂದ ಈ ಸಿನಿಮಾದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯುತ್ತಿದ್ದು, ರಾಕ್ ಲೈನ್ ವೆಂಕಟೇಶ್ ಕೂಡ ಈ ಚಿತ್ರಕ್ಕಾಗಿ ಬಣ್ಣ ಹಚ್ಚಿದ್ದಾರೆ. ಅವರು ಈ ಸಿನಿಮಾದಲ್ಲಿ ಪೊಲೀಸ್ ಆಫೀಸರ್ ಪಾತ್ರ ನಿರ್ವಹಿಸುತ್ತಿದ್ದಾರೆ.

ಹಲವು ದಿನಗಳಿಂದ ಈ ಸಿನಿಮಾದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯುತ್ತಿದ್ದು, ರಾಕ್ ಲೈನ್ ವೆಂಕಟೇಶ್ ಕೂಡ ಈ ಚಿತ್ರಕ್ಕಾಗಿ ಬಣ್ಣ ಹಚ್ಚಿದ್ದಾರೆ. ಅವರು ಈ ಸಿನಿಮಾದಲ್ಲಿ ಪೊಲೀಸ್ ಆಫೀಸರ್ ಪಾತ್ರ ನಿರ್ವಹಿಸುತ್ತಿದ್ದಾರೆ.

ಬೆಂಗಳೂರು ಹೊರವಲಯ, ಕೋಲಾರ, ಗೌರಿಬಿದನೂರು, ಉತ್ತರ ಕರ್ನಾಟಕದ ಹೊರವಲಯ ಸೇರಿದಂತೆ ವಿವಿಧೆಡೆ ಈಗಾಗಲೇ  ಚಿತ್ರೀಕರಣ ನಡೆದಿದೆ. ಪ್ರಸ್ತುತ, ಅಂತಿಮ ಹಂತದ ಚಿತ್ರೀಕರಣದಲ್ಲಿದೆ. ರಾಕ್‌ಲೈನ್ ಎಂಟರ್‌ಟೈನ್‌ಮೆಂಟ್‌ ಲಾಂಛನದಲ್ಲಿ ರಾಕ್‌ಲೈನ್ ವೆಂಕಟೇಶ್ ನಿರ್ಮಾಣ ಮಾಡುತ್ತಿರುವ ಈ ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ, ಸಂತೋಷ್ ರೈ ಪಾತಾಜೆ ಛಾಯಾಗ್ರಹಣವಿದೆ. ಜೊತೆಗೆ ಪ್ರಿಯಾ ಆನಂದ್ ಮತ್ತು ನಿಶ್ವಿಕಾ ನಾಯ್ಡು ನಾಯಕಿಯರಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT