ಡೇವಿಡ್ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

'ಡೇವಿಡ್' ನಿರ್ದೇಶನ ಒಂದು ಅದ್ಭುತ ಅವಕಾಶ, ಆದರೆ ನಟನೆ ನನ್ನ ಪ್ರಮುಖ ಆದ್ಯತೆ: ಶ್ರೇಯಸ್

ನಟ ಹಾಗೂ ನಿರ್ದೇಶಕ ಶ್ರೇಯಸ್ ಚಿಂಗಾ ಅವರ ಮುಂದಿನ ಚಿತ್ರ ಡೇವಿಡ್‌ ಬಿಡುಗಡೆಗೆ ಸಜ್ಜಾಗುತ್ತಿದ್ದು, ಇದು ಅವರ ವೃತ್ತಿಜೀವನದ ಮಹತ್ವದ ಚಿತ್ರವಾಗಿದೆ.

ನಟ ಹಾಗೂ ನಿರ್ದೇಶಕ ಶ್ರೇಯಸ್ ಚಿಂಗಾ ಅವರ ಮುಂದಿನ ಚಿತ್ರ ಡೇವಿಡ್‌ ಬಿಡುಗಡೆಗೆ ಸಜ್ಜಾಗುತ್ತಿದ್ದು, ಇದು ಅವರ ವೃತ್ತಿಜೀವನದ ಮಹತ್ವದ ಚಿತ್ರವಾಗಿದೆ.

ನಾನು ಮೊದಲ ಬಾರಿಗೆ ನಿರ್ದೇಶನ ಮಾಡುವುದರ ಜೊತೆಗೆ ನಾಯಕನಾಗಿಯೂ ನಟಿಸಿದ್ದೇನೆ. ಈ ಚಿತ್ರ ರೊಮ್ಯಾಂಟಿಕ್ ಮರ್ಡರ್ ಮಿಸ್ಟರಿ ಹೊಂದಿದ್ದು, ನಾಲ್ಕು ಕಥೆಗಳ ಸುತ್ತ ಸುತ್ತುತ್ತದೆ. ನಾಯಕನು ತನ್ನ ಸಾಮರ್ಥ್ಯಕ್ಕೆ ಮೀರಿದ ಶಕ್ತಿಗಳ ವಿರುದ್ಧ ಬಲವಂತವಾಗಿ ತೊಡಗಿಸಿಕೊಳ್ಳುತ್ತಾನೆ. ಇದೇ ಈ ಚಿತ್ರದ ಕಥಾಹಂದರ' ಎಂದು ಶ್ರೇಯಸ್ ಚಿಂಗಾ ಹೇಳಿದ್ದಾರೆ.

ಜುಲೈ 21 ರಂದು ಚಿತ್ರ ಬಿಡುಗಡೆಗೆ ಮುಂಚಿತವಾಗಿ ಸಿನಿಮಾ ಎಕ್ಸ್ ಪ್ರೆಸ್ ಗೆ ನೀಡಿದ ಸಂದರ್ಶನದಲ್ಲಿ, ಡೇವಿಡ್ ಈಗಾಗಲೇ 2019 ರ ಕ್ಯಾನೆಸ್ ಚಲನಚಿತ್ರೋತ್ಸವದಲ್ಲಿ ಪ್ರದರ್ಶನ ಕಾಣುವ ಮೂಲಕ ಅಂತರರಾಷ್ಟ್ರೀಯ ವಿತರಕರ ಗಮನವನ್ನು ಸೆಳೆದಿದೆ ಎಂದು ಶ್ರೇಯಸ್ ತಿಳಿಸಿದ್ದಾರೆ.

"ನಾವು ಆರಂಭದಲ್ಲಿ ವಿಶ್ವದಾದ್ಯಂತ ಬಹು ಭಾಷೆಗಳಲ್ಲಿ ಚಿತ್ರವನ್ನು ಬಿಡುಗಡೆ ಮಾಡಲು ಒಪ್ಪಂದಕ್ಕೆ ಬಂದಿದ್ದರೂ, ದುರದೃಷ್ಟವಶಾತ್, ವಿವಿಧ ಕಾರಣಗಳಿಂದ ಅದು ಕಾರ್ಯರೂಪಕ್ಕೆ ಬರಲಿಲ್ಲ" ಎಂದು ಶ್ರೇಯಸ್ ಹೇಳಿದ್ದಾರೆ.

ಶ್ರೇಯಸ್ ಅವರು ಚಿತ್ರ ಜಗತ್ತಿಗೆ ಹೊಸಬರೇನಲ್ಲ. ಅವರ ತಂದೆ ಸೂರಿ, ಶಂಕರ್ ನಾಗ್ ಅವರ ಮಾಲ್ಗುಡಿ ಡೇಸ್‌ನಲ್ಲಿ ಕಲಾ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಜುವೆಲ್ ಇನ್ ದಿ ಕ್ರೌನ್, ಎ ಪ್ಯಾಸೇಜ್ ಟು ಇಂಡಿಯಾ ಮತ್ತು ಡ್ಯಾನ್ಸ್ ಲೈಕ್ ಎ ಮ್ಯಾನ್ ಸೇರಿದಂತೆ ಏಳು ಇಂಗ್ಲಿಷ್ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ರಂಗಭೂಮಿ ಕಲಾವಿದರಾಗಿ ತಮ್ಮ ವೃತ್ತಿಜೀವನ ಆರಂಭಿಸಿದ ಶ್ರೇಯಸ್ ಅವರು ಈಗ 14ನೇ ವರ್ಷದಲ್ಲೇ ನಿರ್ದೇಶನಕ್ಕೆ ಕೈಹಾಕಿದ್ದಾರೆ.

ಮೂಲ ನಿರ್ದೇಶಕ ಭಾರ್ಗವ್ ಅವರು ಮಧ್ಯದಲ್ಲೇ ಚಿತ್ರದಿಂದ ಹಿಂದೆ ಸರಿದ ನಂತರ ಡೇವಿಡ್‌ ಚಿತ್ರದ  ನಿರ್ದೇಶಕನ ಜವಾಬ್ದಾರಿಯನ್ನು ಶ್ರೇಯಸ್ ವಹಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT