ಕಿಚ್ಚ ಸುದೀಪ್ 
ಸಿನಿಮಾ ಸುದ್ದಿ

ಮಾನನಷ್ಟ ಮೊಕದ್ದಮೆ ಅರ್ಜಿ ವಿಚಾರಣೆ ಆಗಸ್ಟ್ 17ಕ್ಕೆ: ಬಾಯಿಗೆ ಬಂದಂತೆ ಮಾತನಾಡಬಾರದು ಎಂದ ಕಿಚ್ಚ ಸುದೀಪ್

ನಟ ಕಿಚ್ಚ ಸುದೀಪ್ ಅವರು ತಮ್ಮ ವಿರುದ್ಧ ವಂಚನೆ ಆರೋಪ ಮಾಡಿರುವ ನಿರ್ಮಾಪಕರಾದ ಎನ್​ಎಂ ಕುಮಾರ್ ಹಾಗೂ ಸುರೇಶ್ ವಿರುದ್ಧ ಜೆಎಂಎಫ್​ಸಿ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. 

ಬೆಂಗಳೂರು: ನಟ ಕಿಚ್ಚ ಸುದೀಪ್ ಅವರು ತಮ್ಮ ವಿರುದ್ಧ ವಂಚನೆ ಆರೋಪ ಮಾಡಿರುವ ನಿರ್ಮಾಪಕರಾದ ಎನ್​ಎಂ ಕುಮಾರ್ ಹಾಗೂ ಸುರೇಶ್ ವಿರುದ್ಧ ಜೆಎಂಎಫ್​ಸಿ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. 

ಜೆಎಂಎಫ್​ಸಿ ಕೋರ್ಟ್ ಗೆ ಇಂದು ಖುದ್ದಾಗಿ ಆಗಮಿಸಿ ಕಿಚ್ಚ ಸುದೀಪ್ ಅರ್ಜಿ ಹಾಕಿದ್ದು, ಅರ್ಜಿಯನ್ನು ಸ್ವೀಕರಿಸಿದ ನ್ಯಾಯಾಲಯವು ಆಗಸ್ಟ್ 17ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸುದೀಪ್, ಚಲನಚಿತ್ರ ವಾಣಿಜ್ಯ ಮಂಡಳಿ, ನಿರ್ಮಾಪಕರ ಸಂಘಗಳ ಮೇಲೆ ನನಗೆ ಗೌರವವಿದೆ. ಇನ್ನು ವೈಯಕ್ತಿಕ ಹಿತಾಸಕ್ತಿಗೆ ಅವುಗಳನ್ನು ಬಳಸಲಾರೆ. ಹೀಗಾಗಿ ನಾನು ನೇರವಾಗಿ ನ್ಯಾಯಾಲಯಕ್ಕೆ ಬಂದಿದ್ದೇನೆ. ನನ್ನ ವಿರುದ್ಧ ಯಾರೇ ಏನೇ ಆರೋಪ ಮಾಡಿದ್ದರು ನ್ಯಾಯಾಲಯದಿಂದ ಸರಿ ಉತ್ತರ ಸಿಗುತ್ತದೆ ಎಂದರು.

ಆರೋಪಗಳು ಯಾವುದು ಸತ್ಯ? ಯಾವುದು ಸುಳ್ಳು? ಎಂಬುದು ಬಹಿರಂಗವಾಗಬೇಕು. ಯಾರು ಸರಿ ಯಾರು ತಪ್ಪು ಎಂದು ತಿಳಿಯಲು ನ್ಯಾಯಾಲಯಕ್ಕಿಂತ ಸರಿಯಾದ ಸ್ಥಳವಿಲ್ಲ. ಯಾವುದು ಎಲ್ಲಿ ಇತ್ಯರ್ಥ ಆಗಬೇಕೋ ಅಲ್ಲೇ ಇತ್ಯರ್ಥ ಆಗಲಿ ಎಂದರು. 

ಸ್ಯಾಂಡಲ್‌ವುಡ್‌ನಲ್ಲಿ ಸದ್ಯ ನಟ ಸುದೀಪ್‌ ವಿರುದ್ಧ ಸಾಲು ಸಾಲು ಆರೋಪಗಳು ಕೇಳಿಬರುತ್ತಿವೆ. ಮೊದಲು ನಿರ್ಮಾಪಕ ಎನ್‌.ಕುಮಾರ್‌ ಅಡ್ವಾನ್ಸ್‌ ತಗೊಂಡು ಸಿನಿಮಾ ಮಾಡಲಿಲ್ಲ. ನನ್ನ ಹಣ ವಾಪಸ್‌ ಕೊಡಿಸಿ ಎಂದು ಮನವಿ ಮಾಡಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

SCROLL FOR NEXT