ಕಲೈಕುಮಾರ್ ಜೊತೆ ಪ್ರಜ್ವಲ್ ದೇವರಾಜ್ 
ಸಿನಿಮಾ ಸುದ್ದಿ

ಪ್ರಜ್ವಲ್ ದೇವರಾಜ್ ಮುಂದಿನ ಚಿತ್ರಕ್ಕೆ ನೃತ್ಯ ನಿರ್ದೇಶಕ ರಾಜಾ ಕಲೈ ಕುಮಾರ್ ಆ್ಯಕ್ಷನ್ ಕಟ್!

ಖ್ಯಾತ ನೃತ್ಯ ನಿರ್ದೇಶಕ ರಾಜಾ ಕಲೈ ಕುಮಾರ್ ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕರಾಗಿ ಬದಲಾಗಿರುವ ತಂತ್ರಜ್ಞರ ಸಾಲಿಗೆ ಸೇರಿದ್ದಾರೆ. ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅವರ ಮುಂದಿನ ಚಿತ್ರಕ್ಕೆ ಡ್ಯಾನ್ಸ್ ಮಾಸ್ಟರ್ ಆ್ಯಕ್ಷನ್ ಕಟ್ ಹೇಳಲು ಸಿದ್ಧರಾಗಿದ್ದಾರೆ.

ಖ್ಯಾತ ನೃತ್ಯ ನಿರ್ದೇಶಕ ರಾಜಾ ಕಲೈ ಕುಮಾರ್ ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕರಾಗಿ ಬದಲಾಗಿರುವ ತಂತ್ರಜ್ಞರ ಸಾಲಿಗೆ ಸೇರಿದ್ದಾರೆ. ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅವರ ಮುಂದಿನ ಚಿತ್ರಕ್ಕೆ ಡ್ಯಾನ್ಸ್ ಮಾಸ್ಟರ್ ಆ್ಯಕ್ಷನ್ ಕಟ್ ಹೇಳಲು ಸಿದ್ಧರಾಗಿದ್ದಾರೆ.

ಜೂನಿಯರ್ ಡ್ಯಾನ್ಸರ್ ಮತ್ತು ಸಹಾಯಕರಾಗಿ ತಮ್ಮ ಚಲನಚಿತ್ರ ವೃತ್ತಿಜೀವನವನ್ನು ಪ್ರಾರಂಭಿಸಿದ ಕಲೈ ಮಾಸ್ಟರ್, ತಮ್ಮ 23 ವರ್ಷಗಳ ವೃತ್ತಿ ಜೀವನದಲ್ಲಿ ಸುಮಾರು 13 ವರ್ಷಗಳ ಕಾಲ ನೃತ್ಯ ಸಂಯೋಜನೆ ಮಾಡುವ ಮೂಲಕ ಚಿತ್ರರಂಗಕ್ಕೆ ಕೊಡುಗೆ ನೀಡಿದ್ದಾರೆ.

ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಅವರು ನಿರ್ದೇಶನದ ಚಿಂತನೆ ಪ್ರಾರಂಭಿಸಿದರು, ಉತ್ತಮ ಕಥಾಹಂದರದೊಂದಿಗೆ ಬಂದರು. ಈ ಯೋಜನೆಗಾಗಿ ಕೆಲವು ಬರಹಗಾರರೊಂದಿಗೆ ಚರ್ಚೆ ನಡೆಸಿದರು. ಈ ಹಿಂದೆ 1975 ಮತ್ತು ಇನ್ನೂ ಹೆಸರಿಡದ ಮತ್ತೊಂದು ಚಲನಚಿತ್ರವನ್ನು ನಿರ್ಮಿಸಿರುವ ನಿರ್ಮಾಪಕಿ ಪ್ರತಿಭಾ, ರಾಜಲಕ್ಷ್ಮಿ ಎಂಟರ್‌ಟೈನ್‌ಮೆಂಟ್ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗಲಿದೆ. ಮುಂಬರುವ ಈ ಚಿತ್ರವು ಕಮರ್ಷಿಯಲ್ ಎಂಟರ್‌ಟೈನರ್ ಆಗಲಿದೆ ಎಂದು ನಿ ಹೇಳಲಾಗಿದೆ.

ಅಕ್ಟೋಬರ್‌ನಲ್ಲಿ ಚಿತ್ರೀಕರಣವನ್ನು ಪ್ರಾರಂಭಿಸಲು ನಿರ್ದೇಶಕರು ಯೋಜಿಸುತ್ತಿದ್ದಾರೆ. ಸಂಪೂರ್ಣ ಶೂಟಿಂಗ್ ನಡೆಯುವ ಬೃಹತ್ ಸೆಟ್ ರಚಿಸಲು ಎರಡು ತಿಂಗಳ ಮುಂಚಿತವಾಗಿ ಸಿದ್ಧತೆಗಳನ್ನು ಪ್ರಾರಂಭಿಸುತ್ತಾರೆ. ಶೀರ್ಷಿಕೆ, ಉಳಿದ ತಾರಾಗಣ ಮತ್ತು ತಂತ್ರಜ್ಞರು ಸೇರಿದಂತೆ ಹೆಚ್ಚಿನ ವಿವರಗಳನ್ನು ಶೀಘ್ರದಲ್ಲೇ ಬಹಿರಂಗಪಡಿಸಲಾಗುವುದು.

ಪ್ರಜ್ವಲ್ ಅಭಿನಯಿಸಿರುವ ಗಣ ಮತ್ತು ಮಾಫಿಯಾ ಸೇರಿದಂತೆ ಹಲವು ಚಿತ್ರಗಳು ಬಿಡುಗಡೆಗೆ ಕಾಯುತ್ತಿವೆ, ಇದರ ಜೊತೆಗೆ  ಎಚ್ ಲೋಹಿತ್ ನಿರ್ದೇಶನದ ಮತ್ತೊಂದು ಸಿನಿಮಾದಲ್ಲಿಯೂ ಪ್ರಜ್ವಲ್ ನಟಿಸದ್ದಾರೆ. ಜಾಥಾರೆ ಎಂಬ ಪ್ಯಾನ್ ಇಂಡಿಯಾ ಯೋಜನೆಗಾಗಿ ಉದಯ್ ನಂದನವನಂ ಅವರೊಂದಿಗೆ ಕೈಜೋಡಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT