ಕಲೈಕುಮಾರ್ ಜೊತೆ ಪ್ರಜ್ವಲ್ ದೇವರಾಜ್ 
ಸಿನಿಮಾ ಸುದ್ದಿ

ಪ್ರಜ್ವಲ್ ದೇವರಾಜ್ ಮುಂದಿನ ಚಿತ್ರಕ್ಕೆ ನೃತ್ಯ ನಿರ್ದೇಶಕ ರಾಜಾ ಕಲೈ ಕುಮಾರ್ ಆ್ಯಕ್ಷನ್ ಕಟ್!

ಖ್ಯಾತ ನೃತ್ಯ ನಿರ್ದೇಶಕ ರಾಜಾ ಕಲೈ ಕುಮಾರ್ ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕರಾಗಿ ಬದಲಾಗಿರುವ ತಂತ್ರಜ್ಞರ ಸಾಲಿಗೆ ಸೇರಿದ್ದಾರೆ. ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅವರ ಮುಂದಿನ ಚಿತ್ರಕ್ಕೆ ಡ್ಯಾನ್ಸ್ ಮಾಸ್ಟರ್ ಆ್ಯಕ್ಷನ್ ಕಟ್ ಹೇಳಲು ಸಿದ್ಧರಾಗಿದ್ದಾರೆ.

ಖ್ಯಾತ ನೃತ್ಯ ನಿರ್ದೇಶಕ ರಾಜಾ ಕಲೈ ಕುಮಾರ್ ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕರಾಗಿ ಬದಲಾಗಿರುವ ತಂತ್ರಜ್ಞರ ಸಾಲಿಗೆ ಸೇರಿದ್ದಾರೆ. ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅವರ ಮುಂದಿನ ಚಿತ್ರಕ್ಕೆ ಡ್ಯಾನ್ಸ್ ಮಾಸ್ಟರ್ ಆ್ಯಕ್ಷನ್ ಕಟ್ ಹೇಳಲು ಸಿದ್ಧರಾಗಿದ್ದಾರೆ.

ಜೂನಿಯರ್ ಡ್ಯಾನ್ಸರ್ ಮತ್ತು ಸಹಾಯಕರಾಗಿ ತಮ್ಮ ಚಲನಚಿತ್ರ ವೃತ್ತಿಜೀವನವನ್ನು ಪ್ರಾರಂಭಿಸಿದ ಕಲೈ ಮಾಸ್ಟರ್, ತಮ್ಮ 23 ವರ್ಷಗಳ ವೃತ್ತಿ ಜೀವನದಲ್ಲಿ ಸುಮಾರು 13 ವರ್ಷಗಳ ಕಾಲ ನೃತ್ಯ ಸಂಯೋಜನೆ ಮಾಡುವ ಮೂಲಕ ಚಿತ್ರರಂಗಕ್ಕೆ ಕೊಡುಗೆ ನೀಡಿದ್ದಾರೆ.

ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಅವರು ನಿರ್ದೇಶನದ ಚಿಂತನೆ ಪ್ರಾರಂಭಿಸಿದರು, ಉತ್ತಮ ಕಥಾಹಂದರದೊಂದಿಗೆ ಬಂದರು. ಈ ಯೋಜನೆಗಾಗಿ ಕೆಲವು ಬರಹಗಾರರೊಂದಿಗೆ ಚರ್ಚೆ ನಡೆಸಿದರು. ಈ ಹಿಂದೆ 1975 ಮತ್ತು ಇನ್ನೂ ಹೆಸರಿಡದ ಮತ್ತೊಂದು ಚಲನಚಿತ್ರವನ್ನು ನಿರ್ಮಿಸಿರುವ ನಿರ್ಮಾಪಕಿ ಪ್ರತಿಭಾ, ರಾಜಲಕ್ಷ್ಮಿ ಎಂಟರ್‌ಟೈನ್‌ಮೆಂಟ್ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗಲಿದೆ. ಮುಂಬರುವ ಈ ಚಿತ್ರವು ಕಮರ್ಷಿಯಲ್ ಎಂಟರ್‌ಟೈನರ್ ಆಗಲಿದೆ ಎಂದು ನಿ ಹೇಳಲಾಗಿದೆ.

ಅಕ್ಟೋಬರ್‌ನಲ್ಲಿ ಚಿತ್ರೀಕರಣವನ್ನು ಪ್ರಾರಂಭಿಸಲು ನಿರ್ದೇಶಕರು ಯೋಜಿಸುತ್ತಿದ್ದಾರೆ. ಸಂಪೂರ್ಣ ಶೂಟಿಂಗ್ ನಡೆಯುವ ಬೃಹತ್ ಸೆಟ್ ರಚಿಸಲು ಎರಡು ತಿಂಗಳ ಮುಂಚಿತವಾಗಿ ಸಿದ್ಧತೆಗಳನ್ನು ಪ್ರಾರಂಭಿಸುತ್ತಾರೆ. ಶೀರ್ಷಿಕೆ, ಉಳಿದ ತಾರಾಗಣ ಮತ್ತು ತಂತ್ರಜ್ಞರು ಸೇರಿದಂತೆ ಹೆಚ್ಚಿನ ವಿವರಗಳನ್ನು ಶೀಘ್ರದಲ್ಲೇ ಬಹಿರಂಗಪಡಿಸಲಾಗುವುದು.

ಪ್ರಜ್ವಲ್ ಅಭಿನಯಿಸಿರುವ ಗಣ ಮತ್ತು ಮಾಫಿಯಾ ಸೇರಿದಂತೆ ಹಲವು ಚಿತ್ರಗಳು ಬಿಡುಗಡೆಗೆ ಕಾಯುತ್ತಿವೆ, ಇದರ ಜೊತೆಗೆ  ಎಚ್ ಲೋಹಿತ್ ನಿರ್ದೇಶನದ ಮತ್ತೊಂದು ಸಿನಿಮಾದಲ್ಲಿಯೂ ಪ್ರಜ್ವಲ್ ನಟಿಸದ್ದಾರೆ. ಜಾಥಾರೆ ಎಂಬ ಪ್ಯಾನ್ ಇಂಡಿಯಾ ಯೋಜನೆಗಾಗಿ ಉದಯ್ ನಂದನವನಂ ಅವರೊಂದಿಗೆ ಕೈಜೋಡಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT