ಸಿದ್ದಾರ್ಥ್ ಮಹೇಶ್ 
ಸಿನಿಮಾ ಸುದ್ದಿ

'ಗರುಡ' ಹೀರೋ ಸಿದ್ದಾರ್ಥ್ ಮಹೇಶ್ ನಟನೆ ಜೊತೆ ನಿರ್ದೇಶನಕ್ಕೂ ಮುಂದು!

‘ನನ್ನ ಸಿಪಾಯಿ’ ಮತ್ತು ‘ಗರುಡ’ ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ನಾಯಕ ನಟ ಸಿದ್ದಾರ್ಥ್ ಮಹೇಶ್  ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಈ ಸಂತಸದ ದಿನದಿಂದಲೇ ಸಿದ್ದಾರ್ಥ್ ಹೊಸ ಸಿನಿಮಾ ಘೋಷಣೆಯಾಗಿದೆ.

‘ನನ್ನ ಸಿಪಾಯಿ’ ಮತ್ತು ‘ಗರುಡ’ ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ನಾಯಕ ನಟ ಸಿದ್ದಾರ್ಥ್ ಮಹೇಶ್  ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಈ ಸಂತಸದ ದಿನದಿಂದಲೇ ಸಿದ್ದಾರ್ಥ್ ಹೊಸ ಸಿನಿಮಾ ಘೋಷಣೆಯಾಗಿದೆ. ಹೊಸ ಚಿತ್ರದಲ್ಲಿ ನಾಯಕನಾಗಿ ಬಣ್ಣ ಹಚ್ಚುತ್ತಿರುವ ಸಿದ್ದಾರ್ಥ್ ಮಹೇಶ್ ನಿರ್ದೇಶಕರಾಗಿಯೂ ಹೊಸ ಹೆಜ್ಜೆ ಇಡುತ್ತಿದ್ದಾರೆ.

ಬಹಳ ವರ್ಷದಿಂದಲೂ ಸಿದ್ದಾರ್ಥ್ ಅವರಿಗೆ ಡೈರೆಕ್ಟರ್  ಕ್ಯಾಪ್ ತೊಡಬೇಕೆಂಬ ಕನಸು ಇತ್ತು. ಆದರೆ ಅದಕ್ಕೆ ಘಳಿಗೆ ಕೂಡಿ ಬಂದಿರಲಿಲ್ಲ. ಈಗ ಆ್ಯಕ್ಷನ್ ಕಟ್ ಹೇಳಲು ಸಜ್ಜಾಗಿದ್ದಾರೆ. ಈ ಹಿಂದೆ ‘ನನ್ನ ಸಿಪಾಯಿ’ ಸಿನಿಮಾದ ಕಥೆಯಲ್ಲಿ ಸಿದ್ಧಾರ್ಥ್ ಕೂಡ ಕೆಲಸ ಮಾಡಿದ್ದರು. ಅದೇ ಅನುಭವದ ಮೇಲೆ ಗರುಡ ಸಿನಿಮಾದ ಕಥೆಯನ್ನು ಬರೆದಿದ್ದರು. ಈಗ ಅವರ ನಿರ್ದೇಶನದ ಚಿತ್ರಕ್ಕೂ ಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

ಅತಶ್ರೀ ಮೀಡಿಯಾ ಕ್ರಿಯೇಶನ್ಸ್ ಮತ್ತು ಆರೇಂಜ್ ಪಿಕ್ಸೆಲ್ಸ್ ನಡಿ ಸಿದ್ದಾರ್ಥ್ ಮಹೇಶ್ ಸ್ನೇಹಿತರಾಗಿರುವ ಎಸ್.ಚಂದನ್ ಈ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ತಮಿಳು ಸಿನಿಮಾ ನಿರ್ಮಿಸಿದ್ದ ಚಂದನ್ ಅವರಿಗೆ ಇದು ಚೊಚ್ಚಲ ನಿರ್ಮಾಣದ ಕನ್ನಡ ಚಿತ್ರ. ತಾನೇ ನಿರ್ದೇಶನ ಮಾಡಬೇಕೆಂದು ಸಿದ್ದಾರ್ಥ್ ಗೆ ಪ್ರೋತ್ಸಾಹ ಕೊಟ್ಟು  ಬಂಡವಾಳ ಹೂಡುತ್ತಿದ್ದಾರೆ. ಕಥೆ ಕೊನೆ ಹಂತದಲ್ಲಿದ್ದು, ಶೀಘ್ರದಲ್ಲೇ ಮತ್ತಷ್ಟು ಅಪ್ ಡೇಟ್ ನೀಡಲು ಚಿತ್ರತಂಡ ಸಜ್ಜಾಗಿದೆ.

ಸಿದ್ದಾರ್ಥ್ ಮಹೇಶ್ ನಟಿಸಿ ನಿರ್ದೇಶನದ ಸಿನಿಮಾ ಪ್ರೇಮಕಥೆ ಆ್ಯಕ್ಷನ್ ಕಥಾಹಂದರ ಹೊಂದಿದೆ. ಮಲ್ಟಿಮೀಡಿಯಾ ಬಗ್ಗೆ ಶಿಕ್ಷಣ ಜ್ಞಾನ ಹೊಂದಿರುವ ಅವರು ನಿರ್ದೇಶನಕ್ಕೆ ಸಹಾಯಕಾರಿ ಎನ್ನುತ್ತಾರೆ. ಬಹಳ ವರ್ಷಗಳಿಂದ ನಿರ್ದೇಶಕನ ಆಗಬೇಕು ಎಂಬ ಸಿದ್ದಾರ್ಥ್ ಮಹೇಶ್ ಕನಸು ಈಗ ಸಹಕಾರವಾಗುತ್ತಿದೆ. ಶೀಘ್ರವೇ ಸಿನಿಮಾ ಶೂಟಿಂಗ್ ಆರಂಭವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT