ನಟಿ ರಚನಾ ಇಂದರ್ 
ಸಿನಿಮಾ ಸುದ್ದಿ

'ನಾನು ಮತ್ತು ಗುಂಡ' ಸೀಕ್ವೆಲ್‌ನ ಲೀಡ್ ರೋಲ್‌ನಲ್ಲಿ ಮಿಂಚಲಿದ್ದಾರೆ ನಟಿ ರಚನಾ ಇಂದರ್!

ನಿರ್ದೇಶಕ ರಘು ಹಾಸನ್ ಸದ್ಯ 'ನಾನು ಮತ್ತು ಗುಂಡ ಚಿತ್ರದ ಸೀಕ್ವೆಲ್‌ನಲ್ಲಿ ಬ್ಯುಸಿಯಾಗಿದ್ದು, ಈಗಾಗಲೇ ಮೈಸೂರಿನಲ್ಲಿ ಶೂಟಿಂಗ್ ಆರಂಭಿಸಿದ್ದಾರೆ. ಚಿತ್ರದಲ್ಲಿ ಶ್ವಾನವೇ ಕೇಂದ್ರಬಿಂದುವಾಗಿದೆ. ಜೊತೆಗೆ ಆಸಕ್ತಿದಾಯಕ ಪಾತ್ರವರ್ಗವಿದೆ. ರಚನಾ ಇಂದರ್ ನಾಯಕಿಯಾಗಿ ನಟಿಸುತ್ತಿದ್ದಾರೆ ಎನ್ನುವುದು ತಿಳಿದುಬಂದಿದೆ.

'ಲವ್ ಮಾಕ್‌ಟೇಲ್‌' ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ನಟಿ ರಚನಾ ಇಂದರ್, ನಂತರ ರಿಷಬ್ ಶೆಟ್ಟಿಯವರ ಹರಿಕಥೆ ಅಲ್ಲ ಗಿರಿಕಥೆ, ಶಶಾಂಕ್ ನಿರ್ದೇಶನದ ಲವ್ 360 ಮತ್ತು ಗಣೇಶ್ ಅಭಿನಯದ ತ್ರಿಬಲ್ ರೈಡಿಂಗ್ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದರು. ಇದೀಗ ಹೊಸ ಸಿನಿಮಾವೊಂದರಲ್ಲಿ ನಾಯಕಿಯಾಗಿ ನಟಿಸಲು ರೆಡಿಯಾಗಿದ್ದಾರೆ.  

ನಿರ್ದೇಶಕ ರಘು ಹಾಸನ್ ಸದ್ಯ 'ನಾನು ಮತ್ತು ಗುಂಡ' ಚಿತ್ರದ ಸೀಕ್ವೆಲ್‌ನಲ್ಲಿ ಬ್ಯುಸಿಯಾಗಿದ್ದು, ಈಗಾಗಲೇ ಮೈಸೂರಿನಲ್ಲಿ ಶೂಟಿಂಗ್ ಆರಂಭಿಸಿದ್ದಾರೆ. ಚಿತ್ರದಲ್ಲಿ ಶ್ವಾನವೇ ಕೇಂದ್ರಬಿಂದುವಾಗಿದೆ. ಜೊತೆಗೆ ಆಸಕ್ತಿದಾಯಕ ಪಾತ್ರವರ್ಗವಿದೆ. ನಿರ್ದೇಶಕರು ಪಾತ್ರದ ಹೆಚ್ಚಿನ ವಿವರಗಳನ್ನು ನೀಡಿಲ್ಲದಿದ್ದರೂ, ರಚನಾ ಇಂದರ್ ನಾಯಕಿಯಾಗಿ ನಟಿಸುತ್ತಿದ್ದಾರೆ ಎನ್ನುವುದು ತಿಳಿದುಬಂದಿದೆ.

ಈ ಚಿತ್ರವು ತನ್ನ ಮಾಲೀಕನನ್ನು ಕಳೆದುಕೊಂಡ ನಂತರ ವಿವಿಧೆಡೆ ಸಂಚರಿಸುವ ನಾಯಿಯ ಕಥೆಯನ್ನು ಹೇಳುತ್ತದೆ ಮತ್ತು ರಚನಾ ಈ ಪ್ರಯಾಣದಲ್ಲಿ ನಾಯಿಯನ್ನು ಸೇರಿಕೊಳ್ಳುತ್ತಾರೆ ಎನ್ನಲಾಗಿದೆ. ನಾನು ಮತ್ತು ಗುಂಡ 2 ಸಿನಿಮಾ ಕನ್ನಡ, ತೆಲುಗು ಮತ್ತು ಹಿಂದಿಯಲ್ಲಿ ಬಿಡುಗಡೆಗೆ ಯೋಜನೆ ರೂಪಿಸಲಾಗಿದ್ದು, ಈ ಮೂಲಕ ರಚನಾ ಅವರ ಮೊದಲ ಬಹುಭಾಷಾ ಸಿನಿಮಾ ಇದಾಗಿದೆ. 

ಪೊಯೆಮ್ ಪಿಕ್ಚರ್ಸ್ ನಿರ್ಮಿಸಿರುವ ಸೀಕ್ವೆಲ್‌ನಲ್ಲಿ ಆರ್‌ಪಿ ಪಟ್ನಾಯಕ್ ಅವರ ಹಾಡುಗಳು ಮತ್ತು ರಿತ್ವಿಕ್ ಮುರಳೀಧರ್ ಅವರ ಹಿನ್ನೆಲೆ ಸಂಗೀತವಿದೆ. ಚಿತ್ರದ ಸಂಭಾಷಣೆಯನ್ನು ರೋಹಿತ್, ರಾಮನ್ ಬರೆದಿದ್ದು, ತನ್ವಿಕ್ ಜಿ, ವಿ ನಾಗೇಂದ್ರ ಪ್ರಸಾದ್ ಚಿತ್ರಕ್ಕೆ ಸಾಹಿತ್ಯವನ್ನು ಬರೆಯಲಿದ್ದಾರೆ.

ಚಿತ್ರತಂಡ ಸೇರಿಕೊಂಡಿರುವ ರಚನಾ ಇಂದರ್ ಈಗಾಗಲೇ ಒಂದೆರಡು ದಿನಗಳ ಶೂಟಿಂಗ್ ಮುಗಿಸಿದ್ದಾರೆ. ನಾಯಕನನೊಂದಿಗೆ ಚಿತ್ರದಲ್ಲಿನ ಇತರ ಪ್ರಮುಖ ಪಾತ್ರಗಳ ಅಧಿಕೃತ ಪ್ರಕಟಣೆಯನ್ನು ಚಿತ್ರತಂಡ ಶೀಘ್ರದಲ್ಲೇ ಮಾಡಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT