ಧನುಷ್ 
ಸಿನಿಮಾ ಸುದ್ದಿ

ನನಗೆ 40 ವರ್ಷ ಆಯ್ತು... ಇನ್ಮುಂದೆ ರೊಮ್ಯಾಂಟಿಕ್ ಸಿನಿಮಾ ಮಾಡಲ್ಲ: ಧನುಷ್

ನಟ ಧನುಷ್‌ ಅವರು ಹಿಂದಿ, ತಮಿಳು, ಹಾಲಿವುಡ್‌ ಸಿನಿಮಾಗಳಲ್ಲಿ ನಟಿಸಿದ್ದಾರೆ. ವಿಭಿನ್ನ ರೀತಿಯ ಪಾತ್ರ ಮಾಡಿರುವ ಧನುಷ್, ಇನ್ನೂ ಮುಂದೆ ರೊಮ್ಯಾಂಟಿಕ್‌ ಚಿತ್ರಗಳಲ್ಲಿ ನಟಿಸುವುದಿಲ್ಲ ಎನ್ನುವ ಮೂಲಕ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದಾರೆ.

ನಟ ಧನುಷ್‌ ಅವರು ಹಿಂದಿ, ತಮಿಳು, ಹಾಲಿವುಡ್‌ ಸಿನಿಮಾಗಳಲ್ಲಿ ನಟಿಸಿದ್ದಾರೆ. ವಿಭಿನ್ನ ರೀತಿಯ ಪಾತ್ರ ಮಾಡಿರುವ ಧನುಷ್, ಇನ್ನೂ ಮುಂದೆ ರೊಮ್ಯಾಂಟಿಕ್‌ ಚಿತ್ರಗಳಲ್ಲಿ ನಟಿಸುವುದಿಲ್ಲ ಎನ್ನುವ ಮೂಲಕ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದಾರೆ.

ಕಾಲಿವುಡ್  ಹೀರೋ ಧನುಷ್ ಅವರು ಈಗ ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಸದ್ದು ಮಾಡ್ತಿದ್ದಾರೆ. ಸಿನಿಮಾ-ವೈಯಕ್ತಿಕ ಎರಡು ವಿಚಾರವಾಗಿಯೂ ಸುದ್ದಿಯಲ್ಲಿದ್ದಾರೆ. ಇದರ ನಡುವೆ ಮುಂದಿನ ಸಿನಿಮಾ ಬಗ್ಗೆ ಲುಕ್ ರಿವೀಲ್ ಮಾಡಲಾಗಿದೆ.

ʼD 50′ ಸಿನಿಮಾ ಲುಕ್ ರಿವೀಲ್ ಆಗಿದೆ. ಜೊತೆಗೆ ರೊಮ್ಯಾಂಟಿಕ್ ಸಿನಿಮಾಗಳಲ್ಲಿ ನಟಿಸುವ ಬಗ್ಗೆ ಧನುಷ್ ಪ್ರತಿಕ್ರಿಯೆ ನೀಡಿದ್ದಾರೆ. ಪಾತ್ರ ಯಾವುದೇ ಇರಲಿ, ಆ ಪಾತ್ರವೇ ತಾವಾಗಿ ನಟಿಸುತ್ತಾರೆ. ಅವರ ಸಹಜ ಅಭಿನಯಕ್ಕೆ ಸೋಲದೇ ಇರೋರು ಯಾರು ಇಲ್ಲ.

ಧನುಷ್- ಎ.ಆರ್ ರೆಹಮಾನ್ ಅವರು ಇತ್ತೀಚಿಗೆ ಇನ್ಸ್ಟಾಗ್ರಾಂ ಲೈವ್ ಬಂದಿದ್ದರು. 2013ರಲ್ಲಿ ರಿಲೀಸ್ ಆದ ‘ಮರಿಯಾನ್’ (Maryan) ಚಿತ್ರಕ್ಕೆ 10 ವರ್ಷಗಳ ಸಂಭ್ರಮವಾಗಿದ್ದು, ಈ ಖುಷಿಯನ್ನು ಲೈವ್ ಮೂಲಕ ಧನುಷ್- ರೆಹಮಾನ್ ಆಚರಿಸಿಕೊಂಡಿದ್ದರು.

ಧನುಷ್ ಅವರು ಮುಖ್ಯಭೂಮಿಕೆ ನಿರ್ವಹಿಸಿದ್ದ ಈ ಚಿತ್ರಕ್ಕೆ ರೆಹಮಾನ್ ಅವರು ಸಂಗೀತ ಸಂಯೋಜನೆ ಮಾಡಿದ್ದರು. ಇಬ್ಬರೂ ಲೈವ್ ಬಂದು ಮರಿಯಾನ್ ಸಿನಿಮಾದ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಈ ವೇಳೆ ಧನುಷ್ ಅವರ ಲುಕ್ ಎಲ್ಲರ ಗಮನ ಸೆಳೆದಿದೆ.

ಇಷ್ಟೇ ಅಲ್ಲ, ‘ಮರಿಯಾನ್’ ಸೇರಿದಂತೆ ಸಾಕಷ್ಟು ರೊಮ್ಯಾಂಟಿಕ್ ಸಿನಿಮಾದಲ್ಲಿ ನಟಿಸಿರೋ ಧನುಷ್‌ಗೆ ರೊಮ್ಯಾಂಟಿಕ್ ಸಿನಿಮಾದಲ್ಲಿ ನಟಿಸುವಂತೆ ಕೇಳಲಾಗಿದೆ. ಅದಕ್ಕೆ ಅವರು ನಗುತ್ತಲೇ ಉತ್ತರಿಸಿದ್ದಾರೆ. ನನಗೆ ಈಗ 40 ವರ್ಷವಾಗಿದೆ. ಮುಂದೆ ರೊಮ್ಯಾಂಟಿಕ್ ಕಥೆಗಳಲ್ಲಿ ನಟಿಸುವುದಿಲ್ಲ. ಮುಂದಿನ ಪೀಳಿಗೆಯ ನಟರು ಇಂತಹ ಸಿನಿಮಾಗಳನ್ನ ಮಾಡಲಿ ಎಂದು ಜಾಣ್ಮೆಯ ಉತ್ತರ ನೀಡಿದ್ದಾರೆ. ಈ ಮೂಲಕ ರೊಮ್ಯಾಂಟಿಕ್ ಚಿತ್ರಗಳಿಗೆ ನಟ ಗುಡ್ ಬೈ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT