ಹಾಲಿವುಡ್ ಚಿತ್ರ “ಓಪೆನ್ ಹೈಮರ್” ವಿರುದ್ಧ ಆಕ್ರೋಶ 
ಸಿನಿಮಾ ಸುದ್ದಿ

ಲೈಂಗಿಕ ದೃಶ್ಯದ ವೇಳೆ 'ಭಗವದ್ಗೀತೆ'; ಹಾಲಿವುಡ್ ಚಿತ್ರ “ಓಪೆನ್ ಹೈಮರ್” ವಿರುದ್ಧ ಆಕ್ರೋಶ!

ಖ್ಯಾತ ಹಾಲಿವುಡ್ ನಿರ್ದೇಶಕ ಕ್ರಿಸ್ಟೊಫರ್ ನೋಲನ್ ಅವರ “ಓಪೆನ್ ಹೈಮರ್” ಚಿತ್ರಕ್ಕೆ ಭಾರತದಲ್ಲಿ ವಿರೋಧ ವ್ಯಕ್ತವಾಗುತ್ತಿದ್ದು, ಚಿತ್ರದ ದೃಶ್ಯವೊಂದರಲ್ಲಿ ದೈಹಿಕ ಸಂಪರ್ಕದ ವೇಳೆ 'ಭಗವದ್ಗೀತೆ' ಓದುವ ದೃಶ್ಯಕ್ಕೆ ವಿರೋಧ ವ್ಯಕ್ತವಾಗುತ್ತಿದೆ.

ಮುಂಬೈ: ಖ್ಯಾತ ಹಾಲಿವುಡ್ ನಿರ್ದೇಶಕ ಕ್ರಿಸ್ಟೊಫರ್ ನೋಲನ್ ಅವರ “ಓಪೆನ್ ಹೈಮರ್” ಚಿತ್ರಕ್ಕೆ ಭಾರತದಲ್ಲಿ ವಿರೋಧ ವ್ಯಕ್ತವಾಗುತ್ತಿದ್ದು, ಚಿತ್ರದ ದೃಶ್ಯವೊಂದರಲ್ಲಿ ದೈಹಿಕ ಸಂಪರ್ಕದ ವೇಳೆ 'ಭಗವದ್ಗೀತೆ' ಓದುವ ದೃಶ್ಯಕ್ಕೆ ವಿರೋಧ ವ್ಯಕ್ತವಾಗುತ್ತಿದೆ.

ಅಣುಬಾಂಬ್‌ ಸಂಶೋಧಿಸಿರುವ ಪರಮಾಣು ವಿಜ್ಞಾನಿ “ಓಪೆನ್ ಹೈಮರ್”ಅವರ ಕಥೆಯನ್ನು ಒಳಗೊಂಡಿರುವ ಸಿನಿಮಾ ಭಾರತದಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದ್ದು, ಈ ನಡುವೆ ಭಾರತದಲ್ಲಿ ಸಿನಿಮಾದಲ್ಲಿರುವ ಒಂದು ದೃಶ್ಯಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ.

‘ಸೇವ್ ಕಲ್ಚರ್ ಸೇವ್ ಇಂಡಿಯಾ ಫೌಂಡೇಶನ್’ ಸ್ಥಾಪಕ, ಭಾರತ ಸರ್ಕಾರದ ಮಾಹಿತಿ ಅಧಿಕಾರಿ ಉದಯ್ ಮಹೂರ್ಕರ್ ಅವರು ಚಿತ್ರದ ದೃಶ್ಯವೊಂದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವಿಟರ್ ನಲ್ಲಿ ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿ ಚಿತ್ರತಂಡ ಹಾಗೂ ಸೆಂಟ್ರಲ್ ಬೋರ್ಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜುಲೈ 21 ರಂದು ತೆರೆಕಂಡ “ಓಪೆನ್ ಹೈಮರ್” ಸಿನಿಮಾದಲ್ಲಿ ಹಿಂದೂ ಧರ್ಮಕ್ಕೆ ಹಾನಿಯಾಗುವ ದೃಶ್ಯಗಳಿವೆ ಎಂಬುದು ʼಸೇವ್ ಕಲ್ಚರ್ ಸೇವ್ ಇಂಡಿಯಾ ಫೌಂಡೇಶನ್ʼ ಗಮನಕ್ಕೆ ಬಂದಿದೆ. ಸಿನಿಮಾದಲ್ಲಿ ಮಹಿಳೆಯೊಬ್ಬಳು ದೈಹಿಕ ಸಂಪರ್ಕ ನಡೆಸುವ ವೇಳೆ ( ಸಿನಿಮಾದ ನಾಯಕ ನಟನೊಂದಿಗೆ) ವ್ಯಕ್ತಿಯ ಬಳಿ ಭಗವದ್ಗೀತೆಯನ್ನು ಗಟ್ಟಿಯಾಗಿ ಓದುವಂತೆ ಹೇಳುವ ಒಂದು ದೃಶ್ಯವಿದೆ. ಈ ದೃಶ್ಯವನ್ನು ಸಿನಿಮಾದಲ್ಲಿ ಕಟ್‌ ಮಾಡದೆ ಹಾಕಲು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (CBFC) ಹೇಗೆ ಅನುಮೋದನೆ ಕೊಟ್ಟಿತು ಎಂದು ಪ್ರತಿಕಾ ಪ್ರಕಟಣೆಯಲ್ಲಿ ಅವರು ಪ್ರಶ್ನಿಸಿದ್ದಾರೆ.

ಈ ಕುರಿತು ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ತುರ್ತು ತನಿಖೆ ನಡೆಸಬೇಕು ಮತ್ತು ಸಂಬಂಧಪಟ್ಟವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ‘ಸೇವ್ ಕಲ್ಚರ್ ಸೇವ್ ಇಂಡಿಯಾ ಫೌಂಡೇಶನ್’ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಕ್ರಿಸ್ಟೊಫರ್ ನೋಲನ್ ಅವರ “ಓಪೆನ್ ಹೈಮರ್” ಚಿತ್ರ ವರ್ಲ್ಡ್‌ ವೈಡ್‌ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಭಾರತದಲ್ಲೂ ಸಿನಿಮಾಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಎಲ್ಲೆಡೆ ಹೌಸ್‌ ಫುಲ್‌ ಪ್ರದರ್ಶನ ಕಾಣುತ್ತಿದೆ. ಬಾಕ್ಸ್‌ ಆಪೀಸ್‌ ನಲ್ಲಿ ಮೊದಲ ದಿನವೇ “ಓಪೆನ್ ಹೈಮರ್” 14 ಕೋಟಿ ರೂ.ಗೂ ಅಧಿಕ ಕಲೆಕ್ಷನ್‌ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT