ಅಪೂರ್ವಾ ಭಾರದ್ವಾಜ್ 
ಸಿನಿಮಾ ಸುದ್ದಿ

ಪಿ.ಸಿ.ಶೇಖರ್​ ನಿರ್ದೇಶನದ 'ಬ್ಯಾಡ್' ಚಿತ್ರಕ್ಕೆ ಅಪೂರ್ವಾ ಭಾರದ್ವಾಜ್ ಎಂಟ್ರಿ

ಕಿರುತೆರೆಯಲ್ಲಿ ನಟಿಸಿ ಜನರ ಮನಗೆದ್ದಿರುವ ನಟಿ ಅಪೂರ್ವ ಭಾರದ್ವಾಜ್ ಅವರು, ಪಿ.ಸಿ.ಶೇಖರ್​ ನಿರ್ದೇಶನದ 'ಬ್ಯಾಡ್' ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಕಿರುತೆರೆಯಲ್ಲಿ ನಟಿಸಿ ಜನರ ಮನಗೆದ್ದಿರುವ ನಟಿ ಅಪೂರ್ವ ಭಾರದ್ವಾಜ್ ಅವರು, ಪಿ.ಸಿ.ಶೇಖರ್​ ನಿರ್ದೇಶನದ 'ಬ್ಯಾಡ್' ಚಿತ್ರದಲ್ಲಿ ನಟಿಸುತ್ತಿದ್ದಾರೆ.

'ಬ್ಯಾಡ್' ಚಿತ್ರದಲ್ಲಿ ಕಾಮ, ಕ್ರೋಧ ಮೊದಲಾದ ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ ಆರು ಪಾತ್ರಗಳಿದ್ದು, ಆ ಪೈಕಿ ಕಾಮ ಎಂಬ‌ ವರ್ಗವನ್ನು ಅನು ಎಂಬ ಪಾತ್ರದ ಮೂಲಕ ತೋರಿಸಲಾಗುತ್ತಿದೆ. ಈ ಪಾತ್ರದಲ್ಲಿ ಅಪೂರ್ವ ಭಾರದ್ವಾಜ್ ಕಾಣಿಸಿಕೊಳ್ಳುತ್ತಿದ್ದಾರೆ. ನಮ್ಮ ಚಿತ್ರದಲ್ಲಿ ಕಾಮವನ್ನು ಪ್ರೀತಿಗೆ ಬದಲಾಯಿಸಿ ತೋರಿಸಲಾಗುತ್ತಿದೆ ಎಂದು ನಿರ್ದೇಶಕ ಪಿಸಿ ಶೇಖರ್ ಅವರು ಹೇಳಿದ್ದಾರೆ.

ಚಿಕ್ಕವಯಸ್ಸಿನಲ್ಲೇ ತಾಯಿಯನ್ನು ಕಳೆದುಕೊಂಡು, ತಂದೆಯ ಆಸರೆಯಲ್ಲಿ ಬೆಳೆದ ಹುಡುಗಿ ಅನು. ತಾಯಿ ಪ್ರೀತಿ ಕಾಣದ ಈ ಹುಡುಗಿಗೆ ಯಾರ ಬಳಿ ಹೇಗೆ ಪ್ರೀತಿ ವ್ಯಕ್ತಪಡಿಸಬೇಕೆಂದು ತಿಳಿದಿರುವುದಿಲ್ಲ. ಈ ಪಾತ್ರಕ್ಕೆ ಮಾತು ಕಡಿಮೆ. ಕಣ್ಣಿನಲ್ಲೇ ಭಾವನೆಗಳನ್ನು ಹೇಳುವ ಹಾಗೂ ಗುಂಗುರು ಕೂದಲುಳ್ಳ ಸಹಜ ಸುಂದರಿಯಂತೆ ಕಾಣುವ ಪಾತ್ರವಿದು.‌

ಹಾಗಾಗಿ ಅಪೂರ್ವ ಅವರ ಹಿಂದಿನ ಧಾರಾವಾಹಿ ಹಾಗೂ ಚಿತ್ರಗಳನ್ನು ನೋಡಿ, ಈ ಪಾತ್ರಕ್ಕೆ ಇವರೆ ಸರಿ ಹೊಂದುತ್ತಾರೆ ಎಂದು ಅಪೂರ್ವ ಅವರನ್ನು ಆಯ್ಕೆ ಮಾಡಿಕೊಂಡಿರುವುದಾಗಿ ತಿಳಿಸಿದರು.

ಅಪೂರ್ವ ಅವರು ಬಹಳ ಅದ್ಭುತವಾಗಿ ಅಭಿನಯಿಸಿದ್ದಾರೆ ಹಾಗೂ ಚಿತ್ರದಲ್ಲಿ ಅವರ ಪಾತ್ರ ಬರುವ ಕಡೆಯೆಲ್ಲಾ ಪಿಂಕ್ (ಗುಲಾಬಿ ಬಣ್ಣ) ಶೇಡ್‌ನಲ್ಲಿ ಚಿತ್ರಿಸಲಾಗಿದೆ ಎಂದು ಅನು ಪಾತ್ರದ ಕುರಿತು ಮಾಹಿತಿ ಹಂಚಿಕೊಂಡರು.

ಎಸ್ ಆರ್ ವೆಂಕಟೇಶ್ ಗೌಡ ನಿರ್ಮಾಣದ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಪಿ.ಸಿ.ಶೇಖರ್ ಸಂಕಲನ ಹಾಗೂ ಶಕ್ತಿ ಶೇಖರ್ ಛಾಯಾಗ್ರಹಣವಿದೆ. ಚಿತ್ರಕ್ಕೆ ಸಚಿನ್ ಬಿ ಹೊಳಗುಂಡಿ ಸಂಭಾಷಣೆ ಬರೆದಿದ್ದರೆ, ಜಿ.ರಾಜಶೇಖರ್ ಅವರ ಕಲಾ ನಿರ್ದೇಶನ ಚಿತ್ರಕ್ಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT