ಗೂಫಿ ಪೈಂಟಲ್ 
ಸಿನಿಮಾ ಸುದ್ದಿ

ಮಹಾಭಾರತದ 'ಶಕುನಿ' ಪಾತ್ರಧಾರಿ ಗೂಫಿ ಪೈಂಟಲ್ ನಿಧನ

ಟಿವಿ ಸೀರಿಯಲ್ ‘ಮಹಾಭಾರತ’ದಲ್ಲಿ ಶಕುನಿ ಪಾತ್ರ ಮಾಡಿ ಎಲ್ಲರ ಗಮನ ಸೆಳೆದಿದ್ದ ನಟ ಗೂಫಿ ಪೈಂತಲ್ ಅವರು  ನಿಧನ ಹೊಂದಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ಗೂಫಿ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು.

ಟಿವಿ ಸೀರಿಯಲ್ ‘ಮಹಾಭಾರತ’ದಲ್ಲಿ ಶಕುನಿ ಪಾತ್ರ ಮಾಡಿ ಎಲ್ಲರ ಗಮನ ಸೆಳೆದಿದ್ದ ನಟ ಗೂಫಿ ಪೈಂತಲ್ ಅವರು  ನಿಧನ ಹೊಂದಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ಗೂಫಿ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು.

ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದರಿಂದ ಗೂಫಿ ಅವರನ್ನು ವಾರಗಳ ಹಿಂದೆ ಆಸ್ಪತ್ರೆಗೆ ಕರೆತರಲಾಯಿತು. ಆದರೆ, ಚಿಕಿತ್ಸೆ ಫಲಕಾರಿ ಆಗದೆ ಅವರು ಮೃತಪಟ್ಟಿದ್ದಾರೆ. ಅವರ ಸೋದರ ಸಂಬಂಧಿ ಹಿತೇನ್ ಪೈಂತಲ್ ಅವರು ಈ ನೋವಿನ ಸಂಗತಿ ಹಂಚಿಕೊಂಡಿದ್ದಾರೆ.

‘ದುರದೃಷ್ಟವಶಾತ್ ಗೂಫಿ ಇನ್ನಿಲ್ಲ. ಅವರು ಬೆಳಿಗ್ಗೆ 9 ಗಂಟೆಯ ಸುಮಾರಿಗೆ ಆಸ್ಪತ್ರೆಯಲ್ಲಿ ನಿಧನರಾದರು. ಯಾವುದೇ ನೋವಿಲ್ಲದೆ ಅವರು ಮೃತಪಟ್ಟರು’ ಎಂದು ಹಿತೇನ್ ಮಾಹಿತಿ ನೀಡಿದ್ದಾರೆ. ಕೆಲ ದಿನಗಳ ಹಿಂದೆ ಗೂಫಿಗೆ ಅನಾರೋಗ್ಯ ಕೈ ಕೊಟ್ಟ ಬಗ್ಗೆ ವರದಿ ಆಗಿತ್ತು. ಅವರು ಆಸ್ಪತ್ರೆಯಿಂದ ಮರಳಿ ಬರಬಹುದು ಎನ್ನುವ ನಿರೀಕ್ಷೆ ಇತ್ತು. ಆದರೆ ಸುಳ್ಳಾಗಿದೆ.

ಗೂಫಿ ರಕ್ತದೊತ್ತಡ ಹಾಗೂ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾರೆ. ಅವರಿಗೆ ಸಾಕಷ್ಟು ಸಮಯದಿಂದ ಆರೋಗ್ಯ ಸರಿ ಇಲ್ಲ. ಈಗ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದೆ. ಕಳೆದ ಏಳೆಂಟು ದಿನಗಳಿಂದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈಗ ಅವರ ಆರೋಗ್ಯ ಸ್ಥಿರ ಸ್ಥಿತಿಗೆ ಬಂದಿದೆ’ ಎಂದಿದ್ದರು. ಇದಾದ ಕೆಲವೇ ದಿನಗಳಲ್ಲಿ ಅವರು ಮೃತಪಟ್ಟಿದ್ದಾರೆ.

1988 ರಿಂದ 1990ವರೆಗೆ ಸುಮಾರು 2 ವರ್ಷಗಳ ಕಾಲ ಮಹಾಭಾರತ ಧಾರಾವಾಹಿ ಡಿಡಿ-1 ರಲ್ಲಿ ಪ್ರಸಾರವಾಗಿತ್ತು. ಜನರ ಮೆಚ್ಚುಗೆ ಗಳಿಸಿದವರಲ್ಲಿ ಶಕುನಿ ಮಾಮ ಪಾತ್ರ ಕೂಡಾ ಒಂದು. ಗುಫಿ ಪೈಂಟಲ್‌ ಶಕುನಿ ಪಾತ್ರವನ್ನು ಅದ್ಭುತವಾಗಿ ನಿಭಾಯಿಸಿದ್ದರು. ಆರ್‌ ಛೋಪ್ರಾ ಹಾಗೂ ರವಿ ಛೋಪ್ರಾ ಈ ಧಾರಾವಾಹಿಯನ್ನು ನಿರ್ದೇಶಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಪಶ್ಚಿಮ ಬಂಗಾಳದಲ್ಲಿ ವಿವಾದಿತ SIR ಕುರಿತು ಮಾತುಕತೆಗೆ ಟಿಎಂಸಿಗೆ ಚುನಾವಣಾ ಆಯೋಗ ಆಹ್ವಾನ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

SCROLL FOR NEXT