ಚಿಕ್ಕಣ್ಣ, ಅನೀಶ್ ಮತ್ತು ಗುರುನಂದನ್ 
ಸಿನಿಮಾ ಸುದ್ದಿ

ಚಂದ್ರ ಮೋಹನ್ ನಿರ್ದೇಶನದ ಕಾಮಿಡಿ ಥ್ರಿಲ್ಲರ್‌‌ನಲ್ಲಿ ನಟ ಅನೀಶ್, ಗುರುನಂದನ್, ಚಿಕ್ಕಣ್ಣ ನಟನೆ

ಸುಮನ್ ರಂಗನಾಥ್, ಚಿಕ್ಕಣ್ಣ ನಟಿಸಿದ್ದ ಡಬಲ್ ಎಂಜಿನ್ ಮತ್ತು ಸತೀಶ್ ನೀನಾಸಂ ನಟನೆಯ 'ಬ್ರಹ್ಮಚಾರಿ'ಯಂತಹ ಹಾಸ್ಯಮಯ ಚಿತ್ರಗಳಿಗೆ ಹೆಸರುವಾಸಿಯಾದ ನಿರ್ದೇಶಕ ಚಂದ್ರ ಮೋಹನ್ ಅವರು ತಮ್ಮ ಮೂರನೇ ಸಿನಿಮಾ ನಿರ್ದೇಶನಕ್ಕೆ ಇಳಿದಿದ್ದಾರೆ.

ಸುಮನ್ ರಂಗನಾಥ್, ಚಿಕ್ಕಣ್ಣ ನಟಿಸಿದ್ದ ಡಬಲ್ ಎಂಜಿನ್ ಮತ್ತು ಸತೀಶ್ ನೀನಾಸಂ ನಟನೆಯ 'ಬ್ರಹ್ಮಚಾರಿ'ಯಂತಹ ಹಾಸ್ಯಮಯ ಚಿತ್ರಗಳಿಗೆ ಹೆಸರುವಾಸಿಯಾದ ನಿರ್ದೇಶಕ ಚಂದ್ರ ಮೋಹನ್ ಅವರು ತಮ್ಮ ಮೂರನೇ ಸಿನಿಮಾ ನಿರ್ದೇಶನಕ್ಕೆ ಇಳಿದಿದ್ದಾರೆ. ಈ ಬಾರಿ, ನಿರ್ದೇಶಕರು ಮಲ್ಟಿಸ್ಟಾರರ್‌ ಸಿನಿಮಾ ನಿರ್ದೇಶಿಸುತ್ತಿದ್ದು, ಚಿತ್ರದಲ್ಲಿ ನಟ ಅನೀಶ್, ಗುರುನಂದನ್, ಚಿಕ್ಕಣ್ಣ ಮತ್ತು ರಂಗಾಯಣ ರಘು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಕಾಮಿಡಿ ಎಂಟರ್ಟೈನಿಂಗ್ ಥ್ರಿಲ್ಲರ್ ಆಗಿರುವ ಈ ಚಿತ್ರವು ಈಗಾಗಲೇ ತನ್ನ ಮೊದಲ ಹಂತದ ಚಿತ್ರೀಕರಣವನ್ನು ಇತ್ತೀಚೆಗೆ ಮಡಿಕೇರಿಯ ಸುಂದರವಾದ ಸ್ಥಳದಲ್ಲಿ ಪ್ರಾರಂಭಿಸಿದೆ.

ಎನ್‌ಎಂಕೆ ಸಿನಿಮಾಸ್‌ನ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ, ಎನ್‌ಎಂ ಕಾಂತರಾಜ್ ಅವರ ಬೆಂಬಲದೊಂದಿಗೆ ಈ ಚಿತ್ರದಲ್ಲಿ ಅರ್ಚನಾ ಕೊಟ್ಟಿಗೆ ನಾಯಕಿಯಾಗಿ ನಟಿಸಿದ್ದಾರೆ. ಇದಲ್ಲದೆ, ನಿರ್ದೇಶಕರು ಇನ್ನೂ ಒಂದೆರಡು ನಾಯಕಿಯರ ಆಯ್ಕೆ ಮಾಡುವ ಅಂತಿಮ ಹಂತದಲ್ಲಿದ್ದಾರೆ. ಚಿತ್ರಕ್ಕೆ ರವಿಕುಮಾರ್ ಛಾಯಾಗ್ರಾಹಕರಾಗಿ ಸೇವೆ ಸಲ್ಲಿಸುತ್ತಿದ್ದು, ನಿರ್ಮಾಪಕರು ಸಂಗೀತ ನಿರ್ದೇಶಕರನ್ನು ಖಚಿತಪಡಿಸುವ ಅಂಚಿನಲ್ಲಿದ್ದಾರೆ.

ಇತ್ತೀಚೆಗಷ್ಟೇ 'ಆರಾಮ್ ಅರವಿಂದ್ ಸ್ವಾಮಿ' ಚಿತ್ರದ ಶೂಟಿಂಗ್ ಮುಗಿಸಿರುವ ಅನೀಶ್, ಚಿತ್ರದ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಈಮಧ್ಯೆ, ಗುರುನಂದನ್ ತಮ್ಮ ಮುಂದಿನ 'ರಾಜು ಜೇಮ್ಸ್ ಬಾಂಡ್‌' ಸಿನಿಮಾ ಬಿಡುಗಡೆಗೆ ಕಾಯುತ್ತಿದ್ದಾರೆ. ಮತ್ತೊಂದೆಡೆ, ಅನಿಲ್ ಕುಮಾರ್ ನಿರ್ದೇಶನದ ಚಿಕ್ಕಣ್ಣ ಅವರು ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ ಚಿತ್ರ 'ಉಪಾಧ್ಯಕ್ಷ' ಚಿತ್ರೀಕರಣವನ್ನು ಪೂರ್ಣಗೊಳಿಸಿದೆ ಮತ್ತು ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!