ಹೆಜ್ಜಾರು ಸಿನಿಮಾ ತಂಡ 
ಸಿನಿಮಾ ಸುದ್ದಿ

ಭಗತ್ ಆಳ್ವ-ಲಿಯೋನಿಲ್ಲಾ ಶ್ವೇತಾ ಡಿಸೋಜಾ ನಟನೆಯ ಹೆಜ್ಜಾರು ಸಿನಿಮಾ ಚಿತ್ರೀಕರಣ ಪೂರ್ಣ

13 ಜನಪ್ರಿಯ ಧಾರಾವಾಹಿಗಳ ಮೂಲಕ ಕರ್ನಾಟಕ ಕಿರುತೆರೆ ಉದ್ಯಮದಲ್ಲಿ ಹೆಸರು ಮಾಡಿರುವ ರಾಮ್‌ಜಿಯವರ ಗಗನಾ ಎಂಟರ್‌ಪ್ರೈಸಸ್ ಈಗ 'ಹೆಜ್ಜಾರು' ಚಿತ್ರದ ಮೂಲಕ ಬೆಳ್ಳಿತೆರೆಗೆ ಕಾಲಿಡುತ್ತಿದ್ದು, ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ.

13 ಜನಪ್ರಿಯ ಧಾರಾವಾಹಿಗಳ ಮೂಲಕ ಕರ್ನಾಟಕ ಕಿರುತೆರೆ ಉದ್ಯಮದಲ್ಲಿ ಹೆಸರು ಮಾಡಿರುವ ರಾಮ್‌ಜಿಯವರ ಗಗನಾ ಎಂಟರ್‌ಪ್ರೈಸಸ್ ಈಗ 'ಹೆಜ್ಜಾರು' ಚಿತ್ರದ ಮೂಲಕ ಬೆಳ್ಳಿತೆರೆಗೆ ಕಾಲಿಡುತ್ತಿದ್ದು, ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ.

ಹೆಸರಾಂತ ಧಾರಾವಾಹಿ ಬರಹಗಾರ ಹಾಗೂ ಟಾಪ್ ಮನರಂಜನಾ ಚಾನೆಲ್ ಒಂದರ ಮಾಜಿ ಫಿಕ್ಷನ್ ಮುಖ್ಯಸ್ಥ ಹರ್ಷಪ್ರಿಯ ಅವರು 'ಹೆಜ್ಜಾರು' ಚಿತ್ರವನ್ನು ನಿರ್ದೇಶಿಸಿದ್ದಾರೆ. ಅಮರ್ ಎಲ್ ಮತ್ತು ಪೂರ್ಣಚಂದ್ರ ತೇಜಸ್ವಿ ಕ್ರಮವಾಗಿ ಛಾಯಾಗ್ರಹಣ ಮತ್ತು ಸಂಗೀತದ ಜವಾಬ್ದಾರಿಯನ್ನು ಹೊತ್ತಿದ್ದಾರೆ. ನರಸಿಂಹ ಚಿತ್ರದ ಆಕ್ಷನ್ ಸೀಕ್ವೆನ್ಸ್‌ಗಳಿಗೆ ನಿರ್ದೇಶನ ಮಾಡಿದ್ದರೆ, ಮೋಹನ್ ನೃತ್ಯ ಸಂಯೋಜನೆ ಮಾಡಿದ್ದಾರೆ. ಕಾರ್ತಿಕ್ ಭಟ್ ಚಿತ್ರದ ಸಂಭಾಷಣೆ ಬರೆದಿದ್ದಾರೆ.

ಭಗತ್ ಆಳ್ವ, ಲಿಯೋನಿಲ್ಲಾ ಶ್ವೇತಾ ಡಿಸೋಜಾ

ಹೆಜ್ಜಾರು ಹೊಸಬರು ಮತ್ತು ಅನುಭವಿ ಕಲಾವಿದರ ಜೊತೆಗೆ ರಂಗಭೂಮಿ ಹಿನ್ನೆಲೆಯ ನಟರನ್ನು ಒಳಗೊಂಡಿದೆ. ಭಗತ್ ಆಳ್ವ ನಟನಾಗಿ ದೊಡ್ಡ ಪರದೆಗೆ ಪದಾರ್ಪಣೆ ಮಾಡುತ್ತಿದ್ದಾರೆ. ಹಿಂದಿ ಚಿತ್ರ ವೈ ಮತ್ತು ಕನ್ನಡ ಚಿತ್ರ ಖಾಸಗಿ ಪುಟಗಳು ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಲಿಯೋನಿಲ್ಲಾ ಶ್ವೇತಾ ಡಿಸೋಜಾ, ಖಾಸಗಿ ಪುಟಗಳಲ್ಲಿನ ಪಾತ್ರದ ಮೂಲಕ ಜನಮನ್ನಣೆ ಗಳಿಸಿದ್ದಾರೆ.

ತಾರಾಗಣದಲ್ಲಿ ಗೋಪಾಲ್ ದೇಶಪಾಂಡೆ, ನವೀನ್ ಕೃಷ್ಣ, ಮುನಿ ಮತ್ತು ಅರುಣ್ ಬಾಲರಾಜ್ ಅವರಂತಹ ಪ್ರಸಿದ್ಧ ನಟರೂ ಇದ್ದಾರೆ. ಚಿತ್ರ ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದ್ದು, ಶೀಘ್ರದಲ್ಲೇ ಚಿತ್ರತಂಡ ತಮ್ಮ ಪ್ರಚಾರ ಚಟುವಟಿಕೆಗಳನ್ನು ಪ್ರಾರಂಭಿಸಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

60 ದಿನಗಳ ಕದನ ವಿರಾಮ ವಿಸ್ತರಣೆಗೆ ಅಮೆರಿಕ, ಇರಾನ್ ಸಂಧಾನಕಾರರು ಒಪ್ಪಿಗೆ; ಟ್ರಂಪ್ ಅನುಮೋದನೆ ಬಾಕಿ

ಕರ್ನಾಟಕ ನಾಯಕತ್ವ ಬದಲಾವಣೆಯ ನಡುವೆ CM ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮತ್ತೆ ದೆಹಲಿಗೆ

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಶನಿವಾರ; ತದನಂತರ ನೂತನ ಸಿಎಂ ಪದಗ್ರಹಣ ಸಾಧ್ಯತೆ!

ಕ್ರೇಜಿಸ್ಟಾರ್ ರವಿಚಂದ್ರನ್ ವಿರುದ್ಧವೇ ಅತ್ಯಾಚಾರ ಯತ್ನ ಆರೋಪ, ಮಾನನಷ್ಟ ಮೊಕದ್ದಮೆ: ಕಣ್ಣೀರಿಟ್ಟು ಕ್ಷಮೆ ಕೇಳಿದ 'ಹಳ್ಳಿಮೇಷ್ಟ್ರು' ನಟಿ Bindiya!

Karnataka CM News LIVE Updates | ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣ; ಸಿಎಲ್‌ಪಿ ಸಭೆ ಶನಿವಾರ ಸಾಧ್ಯತೆ!

SCROLL FOR NEXT