ಹೆಜ್ಜಾರು ಸಿನಿಮಾ ತಂಡ 
ಸಿನಿಮಾ ಸುದ್ದಿ

ಭಗತ್ ಆಳ್ವ-ಲಿಯೋನಿಲ್ಲಾ ಶ್ವೇತಾ ಡಿಸೋಜಾ ನಟನೆಯ ಹೆಜ್ಜಾರು ಸಿನಿಮಾ ಚಿತ್ರೀಕರಣ ಪೂರ್ಣ

13 ಜನಪ್ರಿಯ ಧಾರಾವಾಹಿಗಳ ಮೂಲಕ ಕರ್ನಾಟಕ ಕಿರುತೆರೆ ಉದ್ಯಮದಲ್ಲಿ ಹೆಸರು ಮಾಡಿರುವ ರಾಮ್‌ಜಿಯವರ ಗಗನಾ ಎಂಟರ್‌ಪ್ರೈಸಸ್ ಈಗ 'ಹೆಜ್ಜಾರು' ಚಿತ್ರದ ಮೂಲಕ ಬೆಳ್ಳಿತೆರೆಗೆ ಕಾಲಿಡುತ್ತಿದ್ದು, ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ.

13 ಜನಪ್ರಿಯ ಧಾರಾವಾಹಿಗಳ ಮೂಲಕ ಕರ್ನಾಟಕ ಕಿರುತೆರೆ ಉದ್ಯಮದಲ್ಲಿ ಹೆಸರು ಮಾಡಿರುವ ರಾಮ್‌ಜಿಯವರ ಗಗನಾ ಎಂಟರ್‌ಪ್ರೈಸಸ್ ಈಗ 'ಹೆಜ್ಜಾರು' ಚಿತ್ರದ ಮೂಲಕ ಬೆಳ್ಳಿತೆರೆಗೆ ಕಾಲಿಡುತ್ತಿದ್ದು, ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ.

ಹೆಸರಾಂತ ಧಾರಾವಾಹಿ ಬರಹಗಾರ ಹಾಗೂ ಟಾಪ್ ಮನರಂಜನಾ ಚಾನೆಲ್ ಒಂದರ ಮಾಜಿ ಫಿಕ್ಷನ್ ಮುಖ್ಯಸ್ಥ ಹರ್ಷಪ್ರಿಯ ಅವರು 'ಹೆಜ್ಜಾರು' ಚಿತ್ರವನ್ನು ನಿರ್ದೇಶಿಸಿದ್ದಾರೆ. ಅಮರ್ ಎಲ್ ಮತ್ತು ಪೂರ್ಣಚಂದ್ರ ತೇಜಸ್ವಿ ಕ್ರಮವಾಗಿ ಛಾಯಾಗ್ರಹಣ ಮತ್ತು ಸಂಗೀತದ ಜವಾಬ್ದಾರಿಯನ್ನು ಹೊತ್ತಿದ್ದಾರೆ. ನರಸಿಂಹ ಚಿತ್ರದ ಆಕ್ಷನ್ ಸೀಕ್ವೆನ್ಸ್‌ಗಳಿಗೆ ನಿರ್ದೇಶನ ಮಾಡಿದ್ದರೆ, ಮೋಹನ್ ನೃತ್ಯ ಸಂಯೋಜನೆ ಮಾಡಿದ್ದಾರೆ. ಕಾರ್ತಿಕ್ ಭಟ್ ಚಿತ್ರದ ಸಂಭಾಷಣೆ ಬರೆದಿದ್ದಾರೆ.

ಭಗತ್ ಆಳ್ವ, ಲಿಯೋನಿಲ್ಲಾ ಶ್ವೇತಾ ಡಿಸೋಜಾ

ಹೆಜ್ಜಾರು ಹೊಸಬರು ಮತ್ತು ಅನುಭವಿ ಕಲಾವಿದರ ಜೊತೆಗೆ ರಂಗಭೂಮಿ ಹಿನ್ನೆಲೆಯ ನಟರನ್ನು ಒಳಗೊಂಡಿದೆ. ಭಗತ್ ಆಳ್ವ ನಟನಾಗಿ ದೊಡ್ಡ ಪರದೆಗೆ ಪದಾರ್ಪಣೆ ಮಾಡುತ್ತಿದ್ದಾರೆ. ಹಿಂದಿ ಚಿತ್ರ ವೈ ಮತ್ತು ಕನ್ನಡ ಚಿತ್ರ ಖಾಸಗಿ ಪುಟಗಳು ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಲಿಯೋನಿಲ್ಲಾ ಶ್ವೇತಾ ಡಿಸೋಜಾ, ಖಾಸಗಿ ಪುಟಗಳಲ್ಲಿನ ಪಾತ್ರದ ಮೂಲಕ ಜನಮನ್ನಣೆ ಗಳಿಸಿದ್ದಾರೆ.

ತಾರಾಗಣದಲ್ಲಿ ಗೋಪಾಲ್ ದೇಶಪಾಂಡೆ, ನವೀನ್ ಕೃಷ್ಣ, ಮುನಿ ಮತ್ತು ಅರುಣ್ ಬಾಲರಾಜ್ ಅವರಂತಹ ಪ್ರಸಿದ್ಧ ನಟರೂ ಇದ್ದಾರೆ. ಚಿತ್ರ ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದ್ದು, ಶೀಘ್ರದಲ್ಲೇ ಚಿತ್ರತಂಡ ತಮ್ಮ ಪ್ರಚಾರ ಚಟುವಟಿಕೆಗಳನ್ನು ಪ್ರಾರಂಭಿಸಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

SCROLL FOR NEXT