ಡೇರ್ ಡೆವಿಲ್ ಮುಸ್ತಾಫಾ 
ಸಿನಿಮಾ ಸುದ್ದಿ

''ಡೇರ್ ಡೆವಿಲ್ ಮುಸ್ತಾಫಾ" ಸಿನಿಮಾಗೆ ತೆರಿಗೆ ವಿನಾಯ್ತಿ ನೀಡುವಂತೆ ಒತ್ತಾಯ

ಇತ್ತೀಚಿಗೆ ಬಿಡುಗಡೆಯಾಗಿರುವ ಕನ್ನಡದ ''ಡೇರ್ ಡೆವಿಲ್ ಮುಸ್ತಾಫಾ"ಸಿನಿಮಾಗೆ ತೆರಿಗೆ ವಿನಾಯ್ತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಲಾಗಿದೆ.

ಬೆಂಗಳೂರು: ಇತ್ತೀಚಿಗೆ ಬಿಡುಗಡೆಯಾಗಿರುವ ಕನ್ನಡದ ''ಡೇರ್ ಡೆವಿಲ್ ಮುಸ್ತಾಫಾ"ಸಿನಿಮಾಗೆ ತೆರಿಗೆ ವಿನಾಯ್ತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಲಾಗಿದೆ.

ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿಯವರ ಬರಹಾಧಾರಿತ ಶಶಾಂಕ್ ನಿರ್ದೇಶನದ "ಡೇರ್ ಡೆವಿಲ್ ಮುಸ್ತಾಫಾ"ಸಿನಿಮಾಗೆ ತೆರಿಗೆ ವಿನಾಯ್ತಿ ನೀಡುವಂತೆ ಚಿಂತಕ ಪ್ರೊಫೆಸರ್ ನಟರಾಜ್ ಹುಳಿಯಾರ್ ನೇತೃತ್ವದ ತಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ. ನಿರ್ದೇಶಕ ಶಶಾಂಕ್, ಚಿತ್ರಕಥೆ ಲೇಖಕ ಅನಂತ್ ಮತ್ತಿತರರು ಈ ತಂಡದಲ್ಲಿದ್ದರು.

‘ಡೇರ್‌ ಡೆವಿಲ್‌ ಮುಸ್ತಾಫಾʼ ಸಿನಿಮಾ ಬಿಡುಗಡೆಯಾಗಿ ಮೂರು ವಾರ ಕಳೆದರೂ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರನ್ನು ಸೆಳೆಯಲು ಟಿಕೆಟ್ ದರ ಕಡಿತಗೊಳಿಸುವ ಬಗ್ಗೆ ಚಿತ್ರತಂಡ ನಿರ್ಧಾರ ಕೈಗೊಂಡಿತ್ತು. ಸಿಂಗಲ್ ಸ್ಕ್ರೀನ್​ಗಳಲ್ಲಿ ಕೇವಲ 50 ಹಾಗೂ 75 ರುಪಾಯಿ ಟಿಕೆಟ್ ದರ ನಿಗದಿಪಡಿಸಿದ್ದರೆ. ಮಲ್ಟಿಪ್ಲೆಕ್ಸ್​ಗಳಲ್ಲಿ ಕೇವಲ 99 ರೂಪಾಯಿಗಳಲ್ಲಿ ಸಿನಿಮಾ ಟಿಕೆಟ್ ಲಭ್ಯವಾಗುತ್ತಿದೆ.

ಈ ಸಿನಿಮಾದಲ್ಲಿ ಹಿರಿಯ ನಟ ಮಂಡ್ಯ ರಮೇಶ್‌, ನಾಗಭೂಷನ್‌ ಪೂರ್ಣಚಂದ್ರ ಮೈಸೂರು, ಸುಂದರ್‌ ವೀಣಾ, ಯುವ ಪ್ರತಿಭೆ ಶಿಶಿರ್‌ ಬೈಕಾಡಿ ಮತ್ತಿತರರ ತಾರಾಬಳಗವಿದೆ.  ನವನೀತ್‌ ಶ್ಯಾಮ್‌ ಸಂಗೀತ ಸಂಯೋಜಿಸಿರುವ ಚಿತ್ರವನ್ನು ಡಾಲಿ ಫಿಕ್ಚರ್ಸ್‌ ಬ್ಯಾನರ್‌ನಡಿಯಲ್ಲಿ ಪ್ರಸ್ತುತಪಡಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT