ಗಣೇಶ್ - ನಿರ್ದೇಶಕ ಶ್ರೀನಿವಾಸ ರಾಜು 
ಸಿನಿಮಾ ಸುದ್ದಿ

ನಟ ಗಣೇಶ್ ಮುಂದಿನ ಸಿನಿಮಾಗೆ ದಂಡುಪಾಳ್ಯ ಖ್ಯಾತಿಯ ನಿರ್ದೇಶಕ ಶ್ರೀನಿವಾಸ ರಾಜು ಆ್ಯಕ್ಷನ್ ಕಟ್?

ಗೋಲ್ಡನ್ ಸ್ಟಾರ್ ಗಣೇಶ್, ಸದ್ಯ ಪ್ರೀತಂ ಗುಬ್ಬಿ ಅವರ ಬಹು ನಿರೀಕ್ಷಿತ ಚಿತ್ರ 'ಬಾನದಾರಿಯಲ್ಲಿ' ಸಿನಿಮಾ ಬಿಡುಗಡೆಗೆ ಕಾಯುತ್ತಿದ್ದಾರೆ. ಈ ಮಧ್ಯೆ, ನಟ ಹಲವಾರು ನಿರ್ದೇಶಕರೊಂದಿಗೆ ಚರ್ಚೆಯಲ್ಲಿ ತೊಡಗಿರುವ ಬಗ್ಗೆ ವದಂತಿಗಳಿವೆ. ಮುಂಬರುವ ಚಿತ್ರಕ್ಕಾಗಿ ಗಣೇಶ್ ಅವರು ನಿರ್ದೇಶಕ ಶ್ರೀನಿವಾಸ್ ರಾಜು ಅವರೊಂದಿಗೆ ಕೆಲಸ ಮಾಡಲು ಸಿದ್ಧರಾಗಿದ್ದಾರೆ ಎನ್ನಲಾಗಿದೆ.

ಸ್ಯಾಂಡಲ್‌ವುಡ್‌ನ ಗೋಲ್ಡನ್ ಸ್ಟಾರ್ ಗಣೇಶ್, ಸದ್ಯ ಪ್ರೀತಂ ಗುಬ್ಬಿ ಅವರ ಬಹು ನಿರೀಕ್ಷಿತ ಚಿತ್ರ 'ಬಾನದಾರಿಯಲ್ಲಿ' ಸಿನಿಮಾ ಬಿಡುಗಡೆಗೆ ಕಾಯುತ್ತಿದ್ದಾರೆ ಮತ್ತು ನಟನ ಅಭಿಮಾನಿಗಳು ಚಿತ್ರ ಬಿಡುಗಡೆಯ ದಿನಾಂಕ ಘೋಷಣೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಈ ಮಧ್ಯೆ, ನಟ ಹಲವಾರು ನಿರ್ದೇಶಕರೊಂದಿಗೆ ಚರ್ಚೆಯಲ್ಲಿ ತೊಡಗಿರುವ ಬಗ್ಗೆ ವದಂತಿಗಳಿವೆ. ಮುಂಬರುವ ಚಿತ್ರಕ್ಕಾಗಿ ಗಣೇಶ್ ಅವರು ನಿರ್ದೇಶಕ ಶ್ರೀನಿವಾಸ್ ರಾಜು ಅವರೊಂದಿಗೆ ಕೆಲಸ ಮಾಡಲು ಸಿದ್ಧರಾಗಿದ್ದಾರೆ ಎನ್ನಲಾಗಿದೆ.

ಶ್ರೀನಿವಾಸ್ ರಾಜು ಅವರ ರೋಮಾಂಚಕಕಾರಿ ಕಥಾಹಂದರದಲ್ಲಿ ನಟ ಗಣೇಶ್ ಆಸಕ್ತಿ ಹೊಂದಿದ್ದಾರೆ ಮತ್ತು ಯೋಜನೆಗೆ ಹಸಿರು ನಿಶಾನೆ ತೋರಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗಮನಾರ್ಹವಾಗಿ, ಅವರು ಇತರ ಸಿನಿಮಾಗಳನ್ನು ಬದಿಗಿಟ್ಟು ಈ ಚಿತ್ರಕ್ಕೆ ಆದ್ಯತೆ ನೀಡಿದ್ದಾರೆ ಮತ್ತು ಶೀಘ್ರದಲ್ಲೇ ಚಿತ್ರೀಕರಣವನ್ನು ಪ್ರಾರಂಭಿಸಲು ಯೋಜಿಸಿದ್ದಾರೆ. ಈ ನಟ-ನಿರ್ದೇಶಕರ ಸಹಯೋಗದ ಕುರಿತು ಹೆಚ್ಚಿನ ವಿವರಗಳನ್ನು ಶೀಘ್ರದಲ್ಲೇ ಅಧಿಕೃತವಾಗಿ ಬಹಿರಂಗಪಡಿಸಲಾಗುವುದು ಎಂದು ತಿಳಿದುಬಂದಿದೆ.

ಗಣೇಶ್-ಶ್ರೀನಿವಾಸ್ ರಾಜು ಅವರ ಸಹಯೋಗವು ವಿಶಿಷ್ಟವಾದ ಸಂಯೋಜನೆಯನ್ನು ಮಾಡುತ್ತದೆ. ಗಣೇಶ್ ಅವರು ಮುಂಗಾರು ಮಳೆ ಪ್ರಕಾರದ ರೊಮ್ಯಾಂಟಿಕ್ ಚಿತ್ರಗಳು ಮತ್ತು ಕಮರ್ಷಿಯಲ್ ಎಂಟರ್ಟೈನರ್‌ಗಳಿಗೆ ಹೆಚ್ಚು ಹೆಸರುವಾಸಿಯಾಗಿದ್ದಾರೆ.

ಮತ್ತೊಂದೆಡೆ, ಶ್ರೀನಿವಾಸ್ ರಾಜು ತಮ್ಮ ದಂಡುಪಾಳ್ಯ ಸರಣಿಗಾಗಿ ಜನಮನ್ನಣೆ ಗಳಿಸಿದ್ದಾರೆ. ಗೋಲ್ಡನ್ ಸ್ಟಾರ್‌ಗಾಗಿ ನಿರ್ದೇಶಕರು ಯಾವ ರೀತಿಯ ಕಥೆಯನ್ನು ಸಿದ್ದಪಡಿಸಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ. 

ಇದೇ ವೇಳೆ ನಿರ್ದೇಶಕ ಚೇತನ್ ಕುಮಾರ್ ಜೊತೆ ಗಣೇಶ್ ಕೈ ಜೋಡಿಸಲಿದ್ದಾರೆ ಎಂಬ ಊಹಾಪೋಹ ಕೂಡ ಇದೆ. ಅವರು ಸಿಂಪಲ್ ಸುನಿ ಅವರೊಂದಿಗೆ 'The Story of ರಾಯಗಢ' ಎಂಬ ಚಿತ್ರವನ್ನೂ ಹೊಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT