'ದಿ ಭವಾನಿ ಫೈಲ್ಸ್' ಎಂಬ ಶೀರ್ಷಿಕೆಯ ಫಸ್ಟ್ ಲುಕ್ ಪೋಸ್ಟರ್ ಮತ್ತು ಟೈಟಲ್ ಅನ್ನು ಅಶ್ವಿನಿ ಪುನೀತ್ ರಾಜ್ ಕುಮಾರ್ ಬುಧವಾರ ಬಿಡುಗಡೆ ಮಾಡಿದರು. 
ಸಿನಿಮಾ ಸುದ್ದಿ

ಮಲಯಾಳಂ ಸಿನಿಮಾ ಚಿತ್ರೀಕರಣ ಪೂರ್ಣ; ಕನ್ನಡದಲ್ಲಿ ಮುಂದಿನ ಚಿತ್ರ ಘೋಷಿಸಿದ ಆರ್ಯನ್

ಬಿಗ್ ಬಾಸ್ ಸ್ಪರ್ಧಿ ಮತ್ತು ನಟ ಆರ್ಯನ್, ಕೊನೆಯ ಚಿತ್ರ 'ಡಿಯರ್ ಸತ್ಯ'ದಲ್ಲಿನ ಅವರ ಪಾತ್ರಕ್ಕೆ ಹೆಸರುವಾಸಿಯಾಗಿದ್ದಾರೆ. ಅವರು ತಮ್ಮ ಚೊಚ್ಚಲ ಮಲಯಾಳಂ (ದಿಲೀಪ್-ಅರುಣ್ ಗೋಪಿ ಅವರ ಚಿತ್ರ) ಸಿನಿಮಾದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ ಮತ್ತು ಇದೀಗ ಕನ್ನಡದಲ್ಲಿ ತಮ್ಮ ಮುಂದಿನ ಯೋಜನೆಯನ್ನು ಘೋಷಿಸಿದ್ದಾರೆ.

ಬಿಗ್ ಬಾಸ್ ಸ್ಪರ್ಧಿ ಮತ್ತು ನಟ ಆರ್ಯನ್, ಕೊನೆಯ ಚಿತ್ರ 'ಡಿಯರ್ ಸತ್ಯ'ದಲ್ಲಿನ ಅವರ ಪಾತ್ರಕ್ಕೆ ಹೆಸರುವಾಸಿಯಾಗಿದ್ದಾರೆ. ಅವರು ತಮ್ಮ ಚೊಚ್ಚಲ ಮಲಯಾಳಂ (ದಿಲೀಪ್-ಅರುಣ್ ಗೋಪಿ ಅವರ ಚಿತ್ರ) ಸಿನಿಮಾದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ ಮತ್ತು ಇದೀಗ ಕನ್ನಡದಲ್ಲಿ ತಮ್ಮ ಮುಂದಿನ ಯೋಜನೆಯನ್ನು ಘೋಷಿಸಿದ್ದಾರೆ.

'ದಿ ಭವಾನಿ ಫೈಲ್ಸ್' ಎಂಬ ಶೀರ್ಷಿಕೆಯ ಫಸ್ಟ್ ಲುಕ್ ಪೋಸ್ಟರ್ ಮತ್ತು ಟೈಟಲ್ ಅನ್ನು ಅಶ್ವಿನಿ ಪುನೀತ್ ರಾಜ್ ಕುಮಾರ್ ಬುಧವಾರ ಬಿಡುಗಡೆ ಮಾಡಿದರು. ಸದ್ಯ 'ದಿ ಭವಾನಿ ಫೈಲ್ಸ್‌'ಗಾಗಿ ತಯಾರಿ ನಡೆಸುತ್ತಿರುವ ಆರ್ಯನ್, ಬಹು ಜವಾಬ್ದಾರಿಗಳನ್ನು ನಿರ್ವಹಿಸಲು ಮುಂದಾಗಿದ್ದಾರೆ. ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುವುದು ಮಾತ್ರವಲ್ಲದೆ ಕ್ರಿಯೇಟಿವ್ ಡೈರೆಕ್ಟರ್ ಆಗಿಯೂ ಕಾರ್ಯನಿರ್ವಹಿಸಲಿದ್ದಾರೆ.

ಪ್ರಾಜೆಕ್ಟ್ ಕುರಿತು ಮಾತನಾಡುತ್ತಾ ಆರ್ಯನ್, 'ಈ ಚಿತ್ರವು 14ನೇ ಶತಮಾನದ 'ಥಗ್ಸ್' ಎಂದು ಕರೆಯಲ್ಪಡುವ ಆರಾಧನೆಯಿಂದ ಪ್ರೇರಿತವಾಗಿದೆ. ತಾನು ಮತ್ತು ಸ್ನೇಹಿತರ ಗುಂಪಿನೊಂದಿಗೆ ಇದನ್ನು ಬರೆಯುವ, ನಿರ್ದೇಶಿಸುವ ಮತ್ತು ನಿರ್ಮಾಣದ ಜವಾಬ್ದಾರಿಯನ್ನು ತೆಗೆದುಕೊಂಡಿದ್ದೇನೆ. ಚಿತ್ರಕಥೆಯನ್ನು ಮೋಹನ್ ಮೆನನ್, ಜೇಕಬ್ ವರ್ಗೀಸ್ ಮತ್ತು ಆರ್ಯನ್ ಬರೆದಿದ್ದಾರೆ. ಚೇತನ್ ಡಿಸೋಜಾ ಸಾಹಸ ಸಂಯೋಜನೆ ಮಾಡಲಾಗಿದ್ದರೆ, ಜೋ ಕೋಸ್ಟಾ ಸಂಗೀತ ನಿರ್ದೇಶಕರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದರು.

ವಿಂಟರ್ ಬ್ರಿಡ್ಜ್ ಸ್ಟುಡಿಯೋಸ್ ಸಹಯೋಗದಲ್ಲಿ ವೈಟ್ ಹಾರ್ಸ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಮಾಣವಾಗಲಿದೆ. ಸೆಪ್ಟೆಂಬರ್‌ನಲ್ಲಿ ಚಿತ್ರೀಕರಣವನ್ನು ಪ್ರಾರಂಭಿಸಲು ಯೋಜಿಸುತ್ತಿರುವುದರಿಂದ, ಉಳಿದ ತಾರಾಗಣ ಮತ್ತು ತಾಂತ್ರಿಕ ತಂಡದ ಕುರಿತು ಹೆಚ್ಚಿನ ವಿವರಗಳನ್ನು ನಿರ್ಮಾಣ ಕಂಪನಿಯು ಶೀಘ್ರದಲ್ಲೇ ಬಹಿರಂಗಪಡಿಸಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT