ಆದಿಪುರುಷ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

ಪ್ರಭಾಸ್ ನಟನೆಯ 'ಆದಿಪುರುಷ' ಸಿನಿಮಾ ತೆರೆಗೆ: ನೆಟಿಜೆನ್ ಗಳ ಪ್ರಶಂಸೆಯ ಮಹಾಪೂರ, ಥಿಯೇಟರ್ ಗಳ ಮುಂದೆ ಅಭಿಮಾನಿಗಳ ಹಬ್ಬ

ತೆಲುಗಿನ ಬಾಹುಬಲಿ ಖ್ಯಾತಿಯ ಪ್ರಭಾಸ್ ಅಭಿಮಾನಿಗಳು ಹಾಗೂ ಸಿನಿಪ್ರೇಮಿಗಳ ಬಹು ನಿರೀಕ್ಷಿತ ಸಿನಿಮಾ ಆದಿಪುರುಷ. ಕಳೆದ ನಾಲ್ಕೈದು ವರ್ಷಗಳಲ್ಲಿ ಸತತ ಸೋಲಿನ ನಂತರ ತೆರೆ ಕಾಣುತ್ತಿರುವ ಪ್ರಭಾಸ್ ಸಿನಿಮಾ.

ತೆಲುಗಿನ ಬಾಹುಬಲಿ ಖ್ಯಾತಿಯ ಪ್ರಭಾಸ್ ಅಭಿಮಾನಿಗಳು ಹಾಗೂ ಸಿನಿಪ್ರೇಮಿಗಳ ಬಹು ನಿರೀಕ್ಷಿತ ಸಿನಿಮಾ ಆದಿಪುರುಷ. ಕಳೆದ ನಾಲ್ಕೈದು ವರ್ಷಗಳಲ್ಲಿ ಸತತ ಸೋಲಿನ ನಂತರ ತೆರೆ ಕಾಣುತ್ತಿರುವ ಪ್ರಭಾಸ್ ಸಿನಿಮಾ. ಓಂ ರಾವುತ್ ನಿರ್ದೇಶನದ ಈ ಸಿನಿಮಾದಲ್ಲಿ ಜಾನಕಿ ದೇವಿಯಾಗಿ ಬಾಲಿವುಡ್ ಬೆಡಗಿ ಕೃತಿ ಸನನ್ ನಟಿಸಿದ್ದಾರೆ. ಭೂಷಣ್ ಕುಮಾರ್ ಅವರು ಟಿ ಸಿರೀಸ್ ಬ್ಯಾನರ್ ಅಡಿಯಲ್ಲಿ 'ಆದಿಪುರುಷ' ನಿರ್ಮಿಸಿದ್ದಾರೆ.

ಪೌರಾಣಿಕ ಆ್ಯಕ್ಷನ್ ಸಿನಿಮಾ ಪ್ರೇಕ್ಷಕರ ಮುಂದೆ ಬಂದಿದೆ. 'ಆದಿಪುರುಷ' ನ್ನು 3ಡಿ ಮೋಷನ್ ಕ್ಯಾಪ್ಚರ್ ತಂತ್ರಜ್ಞಾನದೊಂದಿಗೆ ವಿನ್ಯಾಸಗೊಳಿಸಲಾಗಿದೆ. ರಾಘವ್ ಪಾತ್ರದಲ್ಲಿ ಪ್ರಭಾಸ್ ನಟಿಸಿದ್ದು ಲಂಕೇಶ್ವರನಾಗಿ ಸೈಫ್ ಆಲಿಖಾನ್ ಕಾಣಿಸಿಕೊಂಡಿದ್ದಾರೆ. 

ಆದಿಪುರುಷ ಸಿನಿಮಾದ ಕಥೆ ಏನಿರಲಿದೆ ಎಂಬುದು ಬಹುತೇಕರಿಗೆ ತಿಳಿದ ವಿಚಾರ. ಶ್ರೀರಾಮನ ಪತ್ನಿ ಸೀತೆಯನ್ನು ದುಷ್ಟ ರಾವಣ ಅಪಹರಿಸುತ್ತಾನೆ. ಶ್ರೀರಾಮನು ವಾನರ ಸೇನೆಯ ಸಹಾಯ ಪಡೆದು ರಾವಣನನ್ನು ಕೊಂದು ಸೀತೆಯನ್ನು ತನ್ನೊಂದಿಗೆ ಅಯೋಧ್ಯೆಗೆ ಕರೆತರುತ್ತಾನೆ. ಈ ಕಥೆಯನ್ನು ಅದ್ಬುತ ಎನಿಸುವ ದೃಶ್ಯವೈಭವದ ಮೂಲಕ ಆದಿಪುರುಷ್‌ ಚಿತ್ರದಲ್ಲಿ ಕಟ್ಟಿಕೊಡಲಾಗಿದೆ.

ಟ್ರೇಲರ್‌ ರಿಲೀಸ್‌ ಆದ ಬಳಿಕ ಕೇಳಿ ಬಂದಿದ್ದ ನೆಗೆಟಿವ್‌ ಕಮೆಂಟ್‌ಗಳು ಇದೀಗ ಸಿನಿಮಾ ಬಿಡುಗಡೆ ಆದ ಬಳಿಕ ದೂರವಾಗಿವೆ. ಸಿನಿಮಾ ನೋಡಿದ ಬಹುತೇಕರು ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಸೋಷಿಯಲ್‌ ಮೀಡಿಯಾಗಳಲ್ಲಿ ಒಳ್ಳೊಳ್ಳೆ ರೇಟಿಂಗ್‌ ಸಹ ನೀಡುತ್ತಿದ್ದಾರೆ. ಇನ್ನು ಕೆಲವರು ಸಿನಿಮಾವನ್ನು ಹಾಡಿ ಹೊಗಳುತ್ತಿದ್ದಾರೆ.

ಬರೋಬ್ಬರಿ 500 ಕೋಟಿ ಬಜೆಟ್‌ನಲ್ಲಿ ಈ ಸಿನಿಮಾ ತಯಾರಾಗಿದೆ. ಮುಂಗಡ ಬುಕಿಂಗ್‌ ಶುರುವಾದ ಬಳಿಕವೇ 12 ಕೋಟಿ ಬಿಜಿನೆಸ್‌ ಮಾಡಿದ್ದ ಈ ಸಿನಿಮಾ, ಮೊದಲ ದಿನ ಎಷ್ಟು ಕೋಟಿ ಗಳಿಕೆ ಮಾಡಬಹುದು ಎಂಬ ಲೆಕ್ಕಾಚಾರವೂ ಸದ್ದು ಮಾಡುತ್ತಿದೆ. ಸಿನಿಮಾಕ್ಕೆ ಒಳ್ಳೆಯ ವಿಮರ್ಶೆ ಸಿಕ್ಕ ಹಿನ್ನೆಲೆಯಲ್ಲಿ ಮೊದಲ ದಿನದ ಗಳಿಕೆ ವಿಚಾರದಲ್ಲಿ ಹಲವು ದಾಖಲೆ ಬರೆಯುವುದು ನಿಶ್ಚಿತ ಎಂದೇ ಹೇಳಲಾಗುತ್ತಿದೆ.

ಓಂ ರಾವುತ್ ನಿರ್ದೇಶನದಲ್ಲಿ ಮೂಡಿಬಂದಿರುವ ಆದಿಪುರುಷ್‌ ಚಿತ್ರದಲ್ಲಿ ಪ್ರಭಾಸ್ ರಾಮನಾಗಿ, ಕೃತಿ ಸನೋನ್ ಸೀತೆಯಾಗಿ, ಸನ್ನಿ ಸಿಂಗ್ ಲಕ್ಷ್ಮಣನಾಗಿ ಮತ್ತು ಸೈಫ್ ಅಲಿ ಖಾನ್ ರಾವಣನಾಗಿ ಕಾಣಿಸಿಕೊಂಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT