ರಾಮ್ ಚರಣ್ - ಉಪಾಸನಾ ಕಾಮಿನೇನಿ 
ಸಿನಿಮಾ ಸುದ್ದಿ

ಹೆಣ್ಣು ಮಗುವಿಗೆ ಜನ್ಮ ನೀಡಿದ ಉಪಾಸನಾ; ರಾಮ್ ಚರಣ್ ಕುಟುಂಬದಲ್ಲಿ ಸಂತಸ!

ಸೆಲೆಬ್ರಿಟಿ ದಂಪತಿಗಳಾದ ರಾಮ್ ಚರಣ್ ಮತ್ತು ಉಪಾಸನಾ ಕಾಮಿನೇನಿ ಮಂಗಳವಾರ ತಮ್ಮ ಮೊದಲ ಮಗುವನ್ನು ಸ್ವಾಗತಿಸಿದ್ದಾರೆ. ಉಪಾಸನಾ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಕುಟುಂಬದಲ್ಲಿ ಸಂತಸ ಮನೆಮಾಡಿದೆ.

ಹೈದರಾಬಾದ್: ಸೆಲೆಬ್ರಿಟಿ ದಂಪತಿಗಳಾದ ರಾಮ್ ಚರಣ್ ಮತ್ತು ಉಪಾಸನಾ ಕಾಮಿನೇನಿ ಮಂಗಳವಾರ ತಮ್ಮ ಮೊದಲ ಮಗುವನ್ನು ಸ್ವಾಗತಿಸಿದ್ದಾರೆ. ಉಪಾಸನಾ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಕುಟುಂಬದಲ್ಲಿ ಸಂತಸ ಮನೆಮಾಡಿದೆ.

ಈ ಸುದ್ದಿಯನ್ನು ದೃಢೀಕರಿಸಿದ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಯ ಸಿಬ್ಬಂದಿಯೊಬ್ಬರು ಎಎನ್‌ಐಗೆ ಮಾಹಿತಿ ನೀಡಿ, ಜೂನ್ 20ರ ನಸುಕಿನ ವೇಳೆಯಲ್ಲಿ ದಂಪತಿಗೆ ಹೆಣ್ಣು ಮಗು ಜನಿಸಿದೆ ಎಂದಿದ್ದಾರೆ.

ಅಪೊಲೊ ಆಸ್ಪತ್ರೆ ಬಿಡುಗಡೆ ಮಾಡಿರುವ ಮೆಡಿಕಲ್ ಬುಲೆಟಿನ್ ಕೂಡ ವೈರಲ್ ಆಗಿದ್ದು, ಮಗುವಿನ ಆಗಮನವನ್ನು ಖಚಿತಪಡಿಸಿದೆ.

'ಉಪಾಸನಾ ಕಾಮಿನೇನಿ ಕೊನಿಡೇಲಾ ಮತ್ತು ರಾಮ್ ಚರಣ್ ಕೊನಿಡೇಲಾ ಅವರು 20 ಜೂನ್ 2023 ರಂದು ಹೈದರಾಬಾದ್‌ನ ಅಪೋಲೋ ಆಸ್ಪತ್ರೆ ಜುಬಿಲಿ ಹಿಲ್ಸ್‌ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮಗು ಮತ್ತು ತಾಯಿ ಇಬ್ಬರೂ ಆರೋಗ್ಯವಾಗಿದ್ದಾರೆ' ಎಂದು ಬುಲೆಟಿನ್ ತಿಳಿಸಿದೆ.

ಈ ಅಪ್‌ಡೇಟ್ ಅಭಿಮಾನಿಗಳು ಮತ್ತು ಚಿತ್ರರಂಗದ ಸದಸ್ಯರನ್ನು ಹರ್ಷಗೊಳಿಸಿದೆ. ಇಬ್ಬರಿಗೂ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.

ಇನ್‌ಸ್ಟಾಗ್ರಾಮ್‌ನಲ್ಲಿ ನಟಿ ರಾಕುಲ್ ಪ್ರೀತ್ ಈ ಸುದ್ದಿಗೆ ಪ್ರತಿಕ್ರಿಯಿಸಿದ್ದಾರೆ. 'Wohooooo ಅಭಿನಂದನೆಗಳು ರಾಮ್‌ ಚರಣ್ ಮತ್ತು ಉಪಾಸನಾ! ಮಗುವಿಗೆ ಎಲ್ಲಾ ಪ್ರೀತಿ ಮತ್ತು ಸಂತೋಷದಿಂದ ಆಶೀರ್ವದಿಸಲಿ' ಎಂದು ಬರೆದಿದ್ದಾರೆ.

ರಾಮ್ ಮತ್ತು ಉಪಾಸನಾ 2012ರ ಜೂನ್ 14ರಂದು ವಿವಾಹವಾದರು. ಇಬ್ಬರೂ ಡಿಸೆಂಬರ್ 2022ರಲ್ಲಿ ತಾವು ತಂದೆ-ತಾಯಿ ಆಗುತ್ತಿರುವುದಾಗಿ ಘೋಷಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

SCROLL FOR NEXT