ಪ್ರಜ್ವಲ್ 
ಸಿನಿಮಾ ಸುದ್ದಿ

ಬೆಂಗಳೂರು: ಕುಡಿದು ಬಾರ್​​ನಲ್ಲಿ ಕಿರಿಕ್​; ಕಿರುತೆರೆ ನಟನ ವಿರುದ್ಧ ಎಫ್​​ಐಆರ್​ ದಾಖಲು

ಕಿರುತೆರೆ ನಟನೊಬ್ಬ ಬಾರ್​​ನಲ್ಲಿ ಕಂಠಪೂರ್ತಿ ಕುಡಿದು ಅಮಲೇರಿಸಿಕೊಂಡು ಕಿರಿಕ್​ ಮಾಡಿದ್ದಾರೆ. ಇವರ ವಿರುದ್ಧ ಈಗ ಬೆಂಗಳೂರಿನ ಆರ್​ಆರ್​ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಕಿರುತೆರೆ ನಟನೊಬ್ಬ ಬಾರ್​​ನಲ್ಲಿ ಕಂಠಪೂರ್ತಿ ಕುಡಿದು ಅಮಲೇರಿಸಿಕೊಂಡು ಕಿರಿಕ್​ ಮಾಡಿದ್ದಾರೆ. ಇವರ ವಿರುದ್ಧ ಈಗ ಬೆಂಗಳೂರಿನ ಆರ್​ಆರ್​ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜ್ವಲ್ ಎಂಬ ನಟನ ವಿರುದ್ಧ ದೂರು ದಾಖಲಾಗಿದೆ. ಈ ಹಿಂದೆ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಅಮೃತ ವರ್ಷಿಣಿಯಲ್ಲಿ ಅಭಿನಯಿಸಿದ್ದರು. ಉದಯ ಟಿವಿಯಲ್ಲಿ ಪ್ರಸಾರವಾಗುತ್ತಿರುವ ಅಣ್ಣ-ತಂಗಿ ಧಾರಾವಾಹಿಯಲ್ಲಿ ಇವರು ಇಂದ್ರನ ಪಾತ್ರ ನಿರ್ವಹಿಸುತ್ತಿದ್ದಾರೆ.

ಆರ್​ಆರ್ ನಗರದ ‘ಅಮೃತ ಬಾರ್ ಆ್ಯಂಡ್ ರೆಸ್ಟೋರೆಂಟ್’ನಲ್ಲಿ ಈ ಗಲಾಟೆ ನಡೆದಿದೆ. ಪ್ರಜ್ವಲ್ ತಮ್ಮ ಸ್ನೇಹಿತರ ಜೊತೆ ಅಮೃತ ಬಾರ್​ಗೆ ಹೋಗಿದ್ದರು. ಇದೇ ಬಾರ್​ಗೆ ಚೇತನ್ ಕೂಡ ತನ್ನ ಸ್ನೇಹಿತರ ಜೊತೆ ಬಂದಿದ್ದರು. ಈ ವೇಳೆ ಪ್ರಜ್ವಲ್​ನ ಸ್ನೇಹಿತ ಮನು ಎಂಬುವವರನ್ನು ಚೇತನ್ ಕರೆದಿದ್ದಾರೆ. ಇದರಿಂದ ಅಲ್ಲಿಯೇ ಇದ್ದ ಪ್ರಜ್ವಲ್ ಅವರು ಚೇತನ್ ಮೇಲೆ ಹಲ್ಲೆ ಮಾಡಿದ್ದಾರೆ. ಚೇತನ್  ನೀಡಿದ ದೂರನ್ನು ಆಧರಿಸಿ, ಪ್ರಜ್ವಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಮರದ ಪೀಸ್​​​ನಿಂದ ಚೇತನ್ ಹಾಗೂ ಸ್ನೇಹಿತರ ಮೇಲೆ ಹಲ್ಲೆ ಮಾಡಿ, ಅವಾಚ್ಯ ಶಬ್ದಗಳಿಂದ ಬೈದ ಆರೋಪವನ್ನು ಚೇತನ್ ಮಾಡಿದ್ದಾರೆ. ಬಾರ್​ನಲ್ಲಿ ಅಷ್ಟೇ ಅಲ್ಲದೆ ರಸ್ತೆಯಲ್ಲಿ ಈ ಗುಂಪು ಮತ್ತೆ ಗಲಾಟೆ ಮಾಡಿಕೊಂಡಿದೆ. ಅಮೃತ ಬಾರ್​​ನಲ್ಲಿ ಗಲಾಟೆ ಆದ ಬಳಿಕ ಚೇತನ್ ಸ್ನೇಹಿತರ ಮೇಲೆ ಪ್ರಜ್ವಲ್ ಮತ್ತೆ ಹಲ್ಲೆ ಮಾಡಿದ್ದಾಗಿ ಆರೋಪಿಸಿ ದೂರು ದಾಖಲಾಗಿದೆ.

ಸದ್ಯ ಚೇತನ್ ಕೊಟ್ಟು ದೂರಿನನ್ವಯ ಎಫ್​ಐಆರ್​ ದಾಖಲು ಮಾಡಿಕೊಂಡು ಪೊಲೀಸರು‌‌ ನೊಟೀಸ್ ನೀಡಿದ್ದಾರೆ. ಇದರ ಜೊತೆಗೆ ಬಾರ್​​ನ ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಸಹ ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!