ಪ್ರಜ್ವಲ್ 
ಸಿನಿಮಾ ಸುದ್ದಿ

ಬೆಂಗಳೂರು: ಕುಡಿದು ಬಾರ್​​ನಲ್ಲಿ ಕಿರಿಕ್​; ಕಿರುತೆರೆ ನಟನ ವಿರುದ್ಧ ಎಫ್​​ಐಆರ್​ ದಾಖಲು

ಕಿರುತೆರೆ ನಟನೊಬ್ಬ ಬಾರ್​​ನಲ್ಲಿ ಕಂಠಪೂರ್ತಿ ಕುಡಿದು ಅಮಲೇರಿಸಿಕೊಂಡು ಕಿರಿಕ್​ ಮಾಡಿದ್ದಾರೆ. ಇವರ ವಿರುದ್ಧ ಈಗ ಬೆಂಗಳೂರಿನ ಆರ್​ಆರ್​ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಕಿರುತೆರೆ ನಟನೊಬ್ಬ ಬಾರ್​​ನಲ್ಲಿ ಕಂಠಪೂರ್ತಿ ಕುಡಿದು ಅಮಲೇರಿಸಿಕೊಂಡು ಕಿರಿಕ್​ ಮಾಡಿದ್ದಾರೆ. ಇವರ ವಿರುದ್ಧ ಈಗ ಬೆಂಗಳೂರಿನ ಆರ್​ಆರ್​ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜ್ವಲ್ ಎಂಬ ನಟನ ವಿರುದ್ಧ ದೂರು ದಾಖಲಾಗಿದೆ. ಈ ಹಿಂದೆ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಅಮೃತ ವರ್ಷಿಣಿಯಲ್ಲಿ ಅಭಿನಯಿಸಿದ್ದರು. ಉದಯ ಟಿವಿಯಲ್ಲಿ ಪ್ರಸಾರವಾಗುತ್ತಿರುವ ಅಣ್ಣ-ತಂಗಿ ಧಾರಾವಾಹಿಯಲ್ಲಿ ಇವರು ಇಂದ್ರನ ಪಾತ್ರ ನಿರ್ವಹಿಸುತ್ತಿದ್ದಾರೆ.

ಆರ್​ಆರ್ ನಗರದ ‘ಅಮೃತ ಬಾರ್ ಆ್ಯಂಡ್ ರೆಸ್ಟೋರೆಂಟ್’ನಲ್ಲಿ ಈ ಗಲಾಟೆ ನಡೆದಿದೆ. ಪ್ರಜ್ವಲ್ ತಮ್ಮ ಸ್ನೇಹಿತರ ಜೊತೆ ಅಮೃತ ಬಾರ್​ಗೆ ಹೋಗಿದ್ದರು. ಇದೇ ಬಾರ್​ಗೆ ಚೇತನ್ ಕೂಡ ತನ್ನ ಸ್ನೇಹಿತರ ಜೊತೆ ಬಂದಿದ್ದರು. ಈ ವೇಳೆ ಪ್ರಜ್ವಲ್​ನ ಸ್ನೇಹಿತ ಮನು ಎಂಬುವವರನ್ನು ಚೇತನ್ ಕರೆದಿದ್ದಾರೆ. ಇದರಿಂದ ಅಲ್ಲಿಯೇ ಇದ್ದ ಪ್ರಜ್ವಲ್ ಅವರು ಚೇತನ್ ಮೇಲೆ ಹಲ್ಲೆ ಮಾಡಿದ್ದಾರೆ. ಚೇತನ್  ನೀಡಿದ ದೂರನ್ನು ಆಧರಿಸಿ, ಪ್ರಜ್ವಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಮರದ ಪೀಸ್​​​ನಿಂದ ಚೇತನ್ ಹಾಗೂ ಸ್ನೇಹಿತರ ಮೇಲೆ ಹಲ್ಲೆ ಮಾಡಿ, ಅವಾಚ್ಯ ಶಬ್ದಗಳಿಂದ ಬೈದ ಆರೋಪವನ್ನು ಚೇತನ್ ಮಾಡಿದ್ದಾರೆ. ಬಾರ್​ನಲ್ಲಿ ಅಷ್ಟೇ ಅಲ್ಲದೆ ರಸ್ತೆಯಲ್ಲಿ ಈ ಗುಂಪು ಮತ್ತೆ ಗಲಾಟೆ ಮಾಡಿಕೊಂಡಿದೆ. ಅಮೃತ ಬಾರ್​​ನಲ್ಲಿ ಗಲಾಟೆ ಆದ ಬಳಿಕ ಚೇತನ್ ಸ್ನೇಹಿತರ ಮೇಲೆ ಪ್ರಜ್ವಲ್ ಮತ್ತೆ ಹಲ್ಲೆ ಮಾಡಿದ್ದಾಗಿ ಆರೋಪಿಸಿ ದೂರು ದಾಖಲಾಗಿದೆ.

ಸದ್ಯ ಚೇತನ್ ಕೊಟ್ಟು ದೂರಿನನ್ವಯ ಎಫ್​ಐಆರ್​ ದಾಖಲು ಮಾಡಿಕೊಂಡು ಪೊಲೀಸರು‌‌ ನೊಟೀಸ್ ನೀಡಿದ್ದಾರೆ. ಇದರ ಜೊತೆಗೆ ಬಾರ್​​ನ ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಸಹ ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT