ನಂಜುಂಡೇಶ್ವರ ಸನ್ನಿಧಿಯಲ್ಲಿ ಯಶ್-ರಾಧಿಕಾ ಪಂಡಿತ್ ಮಕ್ಕಳೊಂದಿಗೆ 
ಸಿನಿಮಾ ಸುದ್ದಿ

ಮುಂದಿನ ಸಿನಿಮಾ ತಯಾರಿ ಕೆಲಸ ನಡೆಯುತ್ತಿದೆ, ಆದಷ್ಟು ಬೇಗ ಘೋಷಣೆ: ನಂಜನಗೂಡಿನಲ್ಲಿ ನಟ ಯಶ್

ಕೆಜಿಎಫ್ 1 ಮತ್ತು ಕೆಜಿಎಫ್ 2 ಸಿನಿಮಾಗಳಿಂದ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬೆಳೆದಿರುವ ರಾಕಿಂಗ್ ಸ್ಟಾರ್ ಯಶ್(Rocking star Yash) ಇಂದು ಬುಧವಾರ ಪತ್ನಿ ರಾಧಿಕಾ ಪಂಡಿತ್‌(Radhika Pandit) ಮತ್ತು ಮಕ್ಕಳ ಜೊತೆ ದಕ್ಷಿಣದ ಕಾಶಿ ಎಂದು ಖ್ಯಾತಿ ಪಡೆದಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಭೇಟಿ ನೀಡಿದರು. 

ಕೆಜಿಎಫ್ 1 ಮತ್ತು ಕೆಜಿಎಫ್ 2 ಸಿನಿಮಾಗಳಿಂದ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬೆಳೆದಿರುವ ರಾಕಿಂಗ್ ಸ್ಟಾರ್ ಯಶ್(Rocking star Yash) ಇಂದು ಬುಧವಾರ ಪತ್ನಿ ರಾಧಿಕಾ ಪಂಡಿತ್‌(Radhika Pandit) ಮತ್ತು ಮಕ್ಕಳ ಜೊತೆ ದಕ್ಷಿಣದ ಕಾಶಿ ಎಂದು ಖ್ಯಾತಿ ಪಡೆದಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಭೇಟಿ ನೀಡಿದರು. 

ದೇವರಿಗೆ ಪೂಜೆ ಸಲ್ಲಿಸಿ ಹೊರಗೆ ಬಂದು ಮಾಧ್ಯಮ ಪ್ರತಿನಿಧಿಗಳು ಸಿಕ್ಕಿದಾಗ ಮಾತನಾಡಿದ ಯಶ್, ನಮ್ಮ ಮನೆ ದೇವರು ನಂಜುಂಡೇಶ್ವರ, ಹೀಗಾಗಿ ಪೂಜೆ ಸಲ್ಲಿಸಲು ಬಂದಿದ್ದೆವು ಎಂದರು.

ನಂತರ ಮುಂದಿನ ಸಿನಿಮಾ ಬಗ್ಗೆ ಮಾಧ್ಯಮದವರು ಪ್ರಶ್ನೆ ಕೇಳಿದರು. ಅದಕ್ಕೆ ಯಶ್, ಜನರು ಹಣ ಕೊಟ್ಟು ಥಿಯೇಟರ್ ಗೆ ಬಂದು ನಮ್ಮ ಸಿನಿಮಾಗಳನ್ನು ನೋಡುತ್ತಾರೆ. ಅವರ ಹಣಕ್ಕೆ ಬೆಲೆ ಇದೆ, ಜನರಿಂದಾಗಿ ನಾವು ಕಲಾವಿದರು ಬೆಳೆಯುತ್ತೇವೆ. ಅವರ ನಿರೀಕ್ಷೆಗಳನ್ನು ಹುಸಿ ಮಾಡಬಾರದು. ಉತ್ತಮ ಚಿತ್ರ ಮಾಡಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ. ಸದ್ಯದಲ್ಲಿಯೇ ಘೋಷಿಸುತ್ತೇನೆ ಎಂದರು.

ಸಿನಿಮಾ ಕೆಲಸಗಳ ಮಧ್ಯೆ ಬಿಡುವು ಮಾಡಿಕೊಂಡು ಪತ್ನಿ, ಮಕ್ಕಳು ಮತ್ತು ರಾಧಿಕಾ ಪಂಡಿತ್ ಅವರ ತಂದೆ-ತಾಯಿ ಜೊತೆ ಕಳೆದ ಮೂರು ದಿನಗಳಿಂದ ಮೈಸೂರು ಭಾಗದಲ್ಲಿ ಪ್ರವಾಸದಲ್ಲಿದ್ದರು. ನಾಗರ ಹೊಳೆ, ಬಂಡೀಪುರ ಅರಣ್ಯದಲ್ಲಿ ಸಫಾರಿ ನಡುವೆ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಇಂದು ಬಂದಿದ್ದರು.

ಎಲ್ಲೂ ಹೋಗಲ್ಲ: ಬಾಲಿವುಡ್ ನಿಂದ ಇತ್ತೀಚೆಗೆ ರಣಬೀರ್ ಕಪೂರ್ ರಾಮನ ಪಾತ್ರದ ಎದುರು ರಾವಣ ವಿಲನ್ ಪಾತ್ರಕ್ಕಾಗಿ ಯಶ್ ಗೆ ಆಹ್ವಾನ ಬಂದಿತ್ತು, ಅದನ್ನು ಅವರು ತಿರಸ್ಕರಿಸಿದ್ದಾರೆ ಎಂದು ಸುದ್ದಿಯಾಗಿತ್ತು. ಯಶ್ ಕನ್ನಡ ಬಿಟ್ಟು ಬಾಲಿವುಡ್ ಗೆ ಹೋಗುತ್ತಾರೆಯೇ ಎಂದು ಸುದ್ದಿಯಾಗಿತ್ತು. ಈ ಬಗ್ಗೆ ಕೇಳಿದಾಗ ನಾನು ಇರುವ ಕಡೆ ಎಲ್ಲರನ್ನೂ ಕರೆಸಿಕೊಂಡಿದ್ದೇನೆ. ನಾನು ಎಲ್ಲೂ ಹೋಗುವುದಿಲ್ಲ. ಡೋಂಟ್ ವರಿ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ