ಆದಿತ್ಯ - ರಂಜನಿ ರಾಘವನ್ 
ಸಿನಿಮಾ ಸುದ್ದಿ

ಡೆಡ್ಲಿ ಸೋಮ ಖ್ಯಾತಿಯ ನಟ ಆದಿತ್ಯ ಸಿನಿಮಾಗೆ ಕಿರುತೆರೆಯ ಖ್ಯಾತ ನಟಿ ರಂಜನಿ ರಾಘವನ್ ನಾಯಕಿ!

ಡೆಡ್ಲಿ ಸೋಮ ಸಿನಿಮಾ ಖ್ಯಾತಿಯ ಆದಿತ್ಯ ಅವರು ತಮ್ಮ ಮುಂದಿನ ಯೋಜನೆ ಸಸ್ಪೆನ್ಸ್ ಥ್ರಿಲ್ಲರ್‌ಗೆ ಸಹಿ ಹಾಕಿದ್ದಾರೆ. ಇನ್ನೂ ಹೆಸರಿಡದ ಚಿತ್ರದ ಚಿತ್ರೀಕರಣವನ್ನು ನಟ ಸದ್ದಿಲ್ಲದೆ ಪ್ರಾರಂಭಿಸಿದ್ದಾರೆ. ಈ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಕಿಶೋರ್ ಮೇಗಳಮನೆ ನಿರ್ದೇಶಕರಾಗಿ ಪದಾರ್ಪಣೆ ಮಾಡುತ್ತಿದ್ದಾರೆ. 

ಡೆಡ್ಲಿ ಸೋಮ ಸಿನಿಮಾ ಖ್ಯಾತಿಯ ಆದಿತ್ಯ ಅವರು ತಮ್ಮ ಮುಂದಿನ ಯೋಜನೆ ಸಸ್ಪೆನ್ಸ್ ಥ್ರಿಲ್ಲರ್‌ಗೆ ಸಹಿ ಹಾಕಿದ್ದಾರೆ. ಇನ್ನೂ ಹೆಸರಿಡದ ಚಿತ್ರದ ಚಿತ್ರೀಕರಣವನ್ನು ನಟ ಸದ್ದಿಲ್ಲದೆ ಪ್ರಾರಂಭಿಸಿದ್ದಾರೆ. ಈ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಕಿಶೋರ್ ಮೇಗಳಮನೆ ನಿರ್ದೇಶಕರಾಗಿ ಪದಾರ್ಪಣೆ ಮಾಡುತ್ತಿದ್ದಾರೆ. ಅಲ್ಲದೆ, ಅವರೇ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯನ್ನು ಸಹ ಬರೆದಿದ್ದಾರೆ.

ಈ ಯೋಜನೆಗೆ ಹಣ ಹೂಡಲು ಹೂಡಿಕೆದಾರರ ಗುಂಪು ಒಟ್ಟಾಗಿ ಬರುತ್ತಿದ್ದು, ಕೇವಲ ಹದಿನೇಳು ದಿನಗಳಲ್ಲಿ ಚಿಕ್ಕಮಗಳೂರು ಮತ್ತು ಬೆಂಗಳೂರಿನಲ್ಲಿ ಕೆಲವು ಪ್ರಮುಖ ದೃಶ್ಯಗಳ ಚಿತ್ರೀಕರಣವನ್ನು ಈಗಾಗಲೇ ತಂಡವು ಪೂರ್ಣಗೊಳಿಸಿದೆ.

ಪುಟ್ಟಗೌರಿ ಮದುವೆ, ಕನ್ನಡತಿ ಮುಂತಾದ ಧಾರಾವಾಹಿಗಳಲ್ಲಿ ನಟಿಸಿ ಜನಪ್ರಿಯರಾಗಿರುವ ರಂಜನಿ ರಾಘವನ್ ಅವರು ಇದೇ ಮೊದಲ ಬಾರಿಗೆ ಆದಿತ್ಯ ಅವರೊಂದಿಗೆ ನಾಯಕಿಯಾಗಿ ತೆರೆಹಂಚಿಕೊಳ್ಳುತ್ತಿದ್ದಾರೆ. 

ಚಿತ್ರಕ್ಕೆ ಶಶಾಂಕ್ ಶೇಷಗಿರಿ ಸಂಗೀತ ನೀಡಲಿದ್ದು, ಉದಯ ಲೀಲಾ ಅವರ ಛಾಯಾಗ್ರಹಣವಿದೆ. ಅರ್ಜುನ್ ಕಿಟ್ಟು ಸಂಕಲನದ ಹೊಣೆ ಹೊತ್ತಿದ್ದಾರೆ. ತಾರಾಗಣದಲ್ಲಿ ಶಿವಮಣಿ, ಅಶ್ವಿನ್ ಹಾಸನ್, ಕರಿಸುಬ್ಬು ಮತ್ತು ಇತರರು ಇದ್ದಾರೆ. ಚಿತ್ರವು ಚಿತ್ರೀಕರಣದ ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲೇ ಚಿತ್ರದ ಶೀರ್ಷಿಕೆ ಮತ್ತು ಇತರ ವಿವರಗಳನ್ನು ಚಿತ್ರತಂಡ ಬಹಿರಂಗಪಡಿಸಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT