ರಿಷಬ್ ಶೆಟ್ಟಿ ಕಾಂತಾರ 
ಸಿನಿಮಾ ಸುದ್ದಿ

ಕಾಂತಾರ ಪ್ರೀಕ್ವೆಲ್‌: ರಿಷಬ್ ಶೆಟ್ಟಿ ಮುಂದಿವೆ ಹೊಸ ಸವಾಲು; ಪಾತ್ರಕ್ಕಾಗಿ ಹಲವು ರೀತಿಯಲ್ಲಿ ಸಿದ್ಧತೆ!

ರಿಷಬ್ ಶೆಟ್ಟಿ ಎಂದಿನಂತೆ ತಮ್ಮ ಕೆಲಸ ಮುಂದುವರೆಸಿದ್ದಾರೆ. ಯಾವುದೇ ರೀತಿಯ ಬೇರೆ ವಿಷಯಗಳನ್ನ ತಲೆಗೆ ಹಚ್ಚಿಕೊಳ್ಳದೇ ಧ್ಯಾನಸ್ಥ ಸ್ಥಿತಿಯಲ್ಲಿ ಕಾಂತಾರ ಪ್ರಿಕ್ವೆಲ್ ಸಿದ್ಧತೆಗೊಳಿಸುತ್ತಿದ್ದಾರೆ.

ಬೆಂಗಳೂರು: ರಿಷಬ್ ಶೆಟ್ಟಿ ಎಂದಿನಂತೆ ತಮ್ಮ ಕೆಲಸ ಮುಂದುವರೆಸಿದ್ದಾರೆ. ಯಾವುದೇ ರೀತಿಯ ಬೇರೆ ವಿಷಯಗಳನ್ನ ತಲೆಗೆ ಹಚ್ಚಿಕೊಳ್ಳದೇ ಧ್ಯಾನಸ್ಥ ಸ್ಥಿತಿಯಲ್ಲಿ ಕಾಂತಾರ ಪ್ರಿಕ್ವೆಲ್ ಸಿದ್ಧತೆಗೊಳಿಸುತ್ತಿದ್ದಾರೆ.

ಆದರೆ ರಿಷಬ್ ಶೆಟ್ರಿಗೆ ಇನ್ನೂ ಒಂದು ಒತ್ತಡ ಇದ್ದೇ ಇದೆ. ಅದು ಗೆಲುವು, ಜನರ ನಿರೀಕ್ಷೆಯನ್ನ ಹುಸಿಗೊಳಿಸದೇ ಇರೋವಂತೆ ಕಥೆ ಮಾಡಬೇಕು ಅನ್ನುವ ಒತ್ತಡವಿದೆ, ಹೀಗಾಗಿ ಚಿತ್ರದ ಪೂರ್ವಭಾವಿ ಕೆಲಸದಲ್ಲಿ, ಯೋಜನೆಯಲ್ಲಿ ಉತ್ಸಾಹದಿಂದ ತೊಡಗಿಕೊಂಡಿದ್ದಾರೆ.

ಹೊಂಬಾಳೆ ಫಿಲ್ಮ್ಸ್ ಪ್ರೊಡಕ್ಷನ್ ಹೌಸ್  ಕಾಂತಾರ ಪ್ರೀಕ್ವೆಲ್‌ ಆಗಸ್ಟ್ 27 ರಂದು ರಿಲೀಸ್ ಆಗಲಿದೆ ಎಂದು ತಿಳಿಸಿದೆ. ಆದರೆ ಬಿಡುಗಡೆಗೆ ಇನ್ನೂ ದಿನಾಂಕ ಅಂತಿಮಗೊಂಡಿಲ್ಲ ಈ ಸಂಬಂಧ ಚರ್ಚೆಗಳು ನಡೆಯುತ್ತಿವೆ ಎಂದು ಮೂಲಗಳು ತಿಳಿಸಿವೆ.

ಕಾಂತಾರ 2 2022 ರ ಚಲನಚಿತ್ರಕ್ಕೆ ಮುನ್ನುಡಿಯಾಗಿ ಕಾರ್ಯನಿರ್ವಹಿಸುತ್ತದೆ, ಚಿತ್ರದಲ್ಲಿ ತೋರಿಸಲಾದ ಹಳ್ಳಿಗೆ ಅಪಾರ ಪ್ರಾಮುಖ್ಯತೆ ಹೊಂದಿರುವ 'ದೇವರ ಹಿನ್ನಲೆ'ಯ ಕಥೆ ಬಗ್ಗೆ ಹೊಸ ನಿರೂಪಣೆ ತರಲಾಗುತ್ತಿದೆ. ಇದಕ್ಕಾಗಿ ಕಥೆಯು ದೊಡ್ಡ ಪ್ರಮಾಣದಲ್ಲಿ ರೂಪುಗೊಳ್ಳುತ್ತಿದೆ ಎಂದು  ಮೂಲವು ತಿಳಿಸಿದೆ, ಆದರೆ ರಿಷಬ್ ತನ್ನ ಪ್ರಯತ್ನದಲ್ಲಿ ಯಾವುದೇ ಅವಕಾಶವನ್ನು ಬಿಡುತ್ತಿಲ್ಲ.  ಚಿತ್ರ ಸೆಟ್ಟೇರಿರುವ ತನ್ನ ತವರು ಊರಿನಿಂದಲೇ ಕೆಲಸ ಮಾಡುತ್ತಿದ್ದಾರೆ.

ರಿಷಬ್ ಕಠಿಣ ತರಬೇತಿಗಾಗಿ ಸಮಯ ಮೀಸಲಿರಿಸಿದ್ದಾರೆ. ಕುದುರೆ ಸವಾರಿ ಕೌಶಲ್ಯ ಮತ್ತು ಜನಪ್ರಿಯ ಕಲೆಯಾದ ಕಳರಿ ಪಯಟ್ಟುಗಳನ್ನು ಕಲಿಯುತ್ತಿದ್ದಾರೆ ಎಂದು ವರದಿಯಾಗಿದೆ. ಕಾಂತಾರದಲ್ಲಿ ಸಪ್ತಮಿ ಗೌಡ, ಮತ್ತು ಅಚ್ಯುತ್ ಕುಮಾರ್ ಸೇರಿದಂತೆ ಹಲವಾರು ನಟರು ನಟಿಸಿದ್ದಾರೆ.

ಆದರೆ ಕಾಂತಾರ ಪ್ರಿಕ್ವೇಲ್ ನಲ್ಲಿ ರಿಷಬ್  ಹೊರತುಪಡಿಸಿ  ಬೇರೆ ಪಾತ್ರವರ್ಗದ ಬಗ್ಗೆ ಯಾವುದೇ ವಿವರಗಳಿಲ್ಲ.  ಕಾಂತಾರ ಸಂಗೀತ ಸಂಯೋಜಕ ಅಜನೀಶ್ ಲೋಕನಾಥ್ ಮತ್ತು ಛಾಯಾಗ್ರಾಹಕ ಅರವಿಂದ್ ಕಶ್ಯಪ್ ಅವರೊಂದಿಗೆ ಪ್ರಿಕ್ವೆಲ್ ನಲ್ಲಿ ಮತ್ತೆ ಒಂದಾಗುತ್ತಿದ್ದಾರೆ. ಎಲ್ಲವೂ ಸರಿಯಾಗಿ ನಡೆದರೆ, ನಿರ್ಮಾಪಕರು ಸೆಪ್ಟೆಂಬರ್‌ನಲ್ಲಿ ಚಿತ್ರೀಕರಣವನ್ನು ಪ್ರಾರಂಭಿಸಲು ಯೋಜಿಸಿದ್ದಾರೆ, ಆದರೂ ಇದು ಇನ್ನೂ ಅಂತಿಮಗೊಂಡಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT