ಅರ್ಜುನ್ ಸರ್ಜಾ ಮತ್ತು ಐಶ್ವರ್ಯಾ ಸರ್ಜಾ 
ಸಿನಿಮಾ ಸುದ್ದಿ

ನಟ ಅರ್ಜುನ್ ಸರ್ಜಾ ಪುತ್ರಿ ವಿವಾಹ ಫಿಕ್ಸ್? ಹಾಸ್ಯ ನಟನ ಪುತ್ರನ ಜತೆ ಐಶ್ವರ್ಯಾ ಸಪ್ತಪದಿ!

ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯ ಸರ್ಜಾ ಖ್ಯಾತ ಹಾಸ್ಯನಟ ತಂಬಿ ರಾಮಯ್ಯ ಪುತ್ರ ಉಮಾಪತಿ ರಾಮಯ್ಯ ಜತೆ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ ಎನ್ನಲಾಗುತ್ತಿದ್ದು, ಈ ಸುದ್ದಿ ಕಾಲಿವುಡ್‌ನಲ್ಲಿ ಸಂಚಲನ ಮೂಡಿಸಿದೆ.

ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯ ಸರ್ಜಾ ಖ್ಯಾತ ಹಾಸ್ಯನಟ ತಂಬಿ ರಾಮಯ್ಯ ಪುತ್ರ ಉಮಾಪತಿ ರಾಮಯ್ಯ ಜತೆ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ ಎನ್ನಲಾಗುತ್ತಿದ್ದು, ಈ ಸುದ್ದಿ ಕಾಲಿವುಡ್‌ನಲ್ಲಿ ಸಂಚಲನ ಮೂಡಿಸಿದೆ.

ಅರ್ಜುನ್ ಸರ್ಜಾ ಮೊದಲ ಪುತ್ರಿ ಐಶ್ವರ್ಯಾ ಮದುವೆ ಮ್ಯಾಟರ್ ಜೋರಾಗಿಯೇ ಹರಿದಾಡುತ್ತಿದೆ. ಐಶ್ವರ್ಯಾ ಅರ್ಜುನ್ ಹಾಗೂ ಉಮಾಪತಿ ರಾಮಯ್ಯ ಇಬ್ಬರೂ ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದರು ಎಂದು ತಮಿಳು ಮಾಧ್ಯಮಗಳು ವರದಿ ಮಾಡಿವೆ. ಈಗ ಇಬ್ಬರೂ ವೈವಾಹಿಕ ಜೀವನಕ್ಕೆ ಕಾಲಿಡಲು ನಿರ್ಧರಿಸಿದ್ದು, ಮದುವೆ ಮಾತುಕತೆ ನಡೆಯುತ್ತಿದೆ ಎನ್ನಲಾಗಿದೆ. ಈ ಜೋಡಿ ಸಾಕಷ್ಟು ಸಮಯದಿಂದ ಡೇಟಿಂಗ್ ನಡೆಸುತ್ತಿತ್ತು. ಇಬ್ಬರ ಮನೆಯಲ್ಲಿ ಮದುವೆ ಮಾತುಕತೆ ನಡೆದಿದೆ ಎಂದು ಕನಕರಾಜ್ ಟ್ವೀಟ್‌ನಲ್ಲಿ ಹಂಚಿಕೊಂಡಿದ್ದಾರೆ.

ಐಶ್ವರ್ಯ ಸರ್ಜಾ

ಅರ್ಜುನ್ ಸರ್ಜಾ ಹಾಗೂ ಹಿರಿಯ ಹಾಸ್ಯ ನಟ ತಂಬಿ ರಾಮಯ್ಯ ಇಬ್ಬರೂ ಮಕ್ಕಳ ಮದುವೆಗೆ ಅಸ್ತು ಎಂದಿದ್ದಾರೆ. ಯಾವುದೇ ಸಂದರ್ಭದಲ್ಲಾದರೂ ಈ ಖುಷಿ ವಿಷಯವನ್ನು ತಮ್ಮ ಅಭಿಮಾನಿಗಳಿಗೆ ತಿಳಿಸಬಹುದು ಎಂದು ಮಾಧ್ಯಮಗಳು ವರದಿ ಮಾಡಿವೆ. ಆದರೆ, ಎರಡೂ ಕುಟುಂಬಗಳು ಅಧಿಕೃತವಾಗಿ ಈ ಬಗ್ಗೆ ಮಾಹಿತಿ ನೀಡಿಲ್ಲ.

80-90ರ ದಶಕದ ಪ್ರಮುಖ ನಾಯಕರಲ್ಲಿ ಒಬ್ಬರಾದ ಅರ್ಜುನ್ ಸರ್ಜಾ ಬಹುಭಾಷಾ ನಟ. 1998ರಲ್ಲಿ ಆಶಾ ರಾಣಿ ಅವರನ್ನು ವಿವಾಹವಾದರು. ಇವರಿಗೆ ಐಶ್ವರ್ಯ ಮತ್ತು ಅಂಜನಾ ಇಬ್ಬರು ಪುತ್ರಿಯರು. ʼಪ್ರೇಮ ಬರಹʼ ಸಿನಿಮಾ ಮೂಲಕ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಐಶ್ವರ್ಯ ಸರ್ಜಾ ಪದಾರ್ಪಣೆ ಮಾಡಿದರು.

ಉಮಾಪತಿ ರಾಮಯ್ಯ

ರಿಯಲ್‌ ಸ್ಟಾರ್‌ ಉಪೇಂದ್ರ ಅವರ ಸಹೋದರನ ಪುತ್ರ ನಿರಂಜನ್ ಸುಧೀಂದ್ರ ಜತೆಗೆ ಐಶ್ವರ್ಯ ತೆರೆ ಹಂಚಿಕೊಳ್ಳಲಿದ್ದಾರೆ. ಇದು ತೆಲುಗು ಸಿನಿಮಾವಾಗಿದೆ. ಅರ್ಜುನ್ ಸರ್ಜಾ ನಿರ್ಮಾಣ ಹಾಗೂ ನಿರ್ದೇಶನವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT