ಗಣೇಶ್ - ಮಾಳವಿಕಾ ನಾಯರ್ 
ಸಿನಿಮಾ ಸುದ್ದಿ

ಗಣೇಶ್-ಶ್ರೀನಿವಾಸ್ ರಾಜು ಮುಂಬರುವ ಚಿತ್ರದ ಮೂಲಕ ಮಾಳವಿಕಾ ನಾಯರ್ ಕನ್ನಡಕ್ಕೆ ಪದಾರ್ಪಣೆ!

ಈಗಾಗಲೇ ತೆಲುಗು, ಮಲಯಾಳಂ, ತಮಿಳಿನಲ್ಲಿ ಛಾಪು ಮೂಡಿಸಿರುವ ನಟಿ ಮಾಳವಿಕಾ ನಾಯರ್ ಕನ್ನಡಕ್ಕೆ ಪದಾರ್ಪಣೆ ಮಾಡಲಿದ್ದಾರೆ. ಬಹುಭಾಷಾ ನಟಿ, ಉಸ್ತಾದ್ ಹೋಟೆಲ್‌ನಲ್ಲಿ ಸಣ್ಣ ಪಾತ್ರದಲ್ಲಿ ಕಾಣಿಸಿಕೊಂಡರು. 

ಈಗಾಗಲೇ ತೆಲುಗು, ಮಲಯಾಳಂ, ತಮಿಳಿನಲ್ಲಿ ಛಾಪು ಮೂಡಿಸಿರುವ ನಟಿ ಮಾಳವಿಕಾ ನಾಯರ್ ಕನ್ನಡಕ್ಕೆ ಪದಾರ್ಪಣೆ ಮಾಡಲಿದ್ದಾರೆ. ಬಹುಭಾಷಾ ನಟಿ, ಉಸ್ತಾದ್ ಹೋಟೆಲ್‌ನಲ್ಲಿ ಸಣ್ಣ ಪಾತ್ರದಲ್ಲಿ ಕಾಣಿಸಿಕೊಂಡರು. ಬಳಿಕ ಕುಕ್ಕೂ, ಯೆವಡೇ ಸುಬ್ರಹ್ಮಣ್ಯಂ ಮತ್ತು ಟ್ಯಾಕ್ಸಿವಾಲಾ ಮುಂತಾದ ಗಮನಾರ್ಹ ಚಿತ್ರಗಳಲ್ಲಿ ನಟಿಸಿದ್ದಾರೆ. ಇದೀಗ ಶ್ರೀನಿವಾಸ್ ರಾಜು ಅವರ ನಿರ್ದೇಶನದ ಮುಂಬರುವ ಚಿತ್ರದಲ್ಲಿ ನಾಯಕಿಯಾಗಿ ನಟಿಸಲಿದ್ದಾರೆ ಮತ್ತು ಗೋಲ್ಡನ್ ಸ್ಟಾರ್ ಗಣೇಶ್‌ಗೆ ಜೋಡಿಯಾಗಿದ್ದಾರೆ.

ಯೋಜನೆಯ ಹೆಚ್ಚಿನ ವಿವರಗಳನ್ನು ನಿರ್ಮಾಪಕರು ಮುಚ್ಚಿಟ್ಟಿದ್ದರೂ, ಹಲವು ವಿಚಾರಗಳು ಸದ್ಯ ಊಹೆಯಲ್ಲಿವೆ. ಸದ್ಯ ಚಿತ್ರೀಕರಣ ನಡೆಯುತ್ತಿದ್ದು, ಸಾಧು ಕೋಕಿಲ ಮತ್ತು ಗಿರಿ ಶಿವಣ್ಣ ಅವರೊಂದಿಗೆ ಗಣೇಶ್ ಸೆಟ್‌ನಲ್ಲಿ ಇದ್ದಾರೆ. ಈ ಚಿತ್ರದಲ್ಲಿ ಇಬ್ಬರು ನಾಯಕಿಯರು ಇರಲಿದ್ದು, ಮಾಳವಿಕಾ ನಾಯರ್ ಮೊದಲನೇ ನಾಯಕಿಯಾಗಿದ್ದಾರೆ ಮತ್ತು ಅವರು ಶೀಘ್ರದಲ್ಲೇ ಸೆಟ್‌ಗೆ ಸೇರುವ ನಿರೀಕ್ಷೆಯಿದೆ. ಈಮಧ್ಯೆ, ಚಿತ್ರತಂಡ ಇನ್ನೊಬ್ಬ ನಾಯಕಿಯ ಹುಡುಕಾಟದಲ್ಲಿದೆ.

ಕಾಮಿಡಿ ಫ್ಯಾಮಿಲಿ ಎಂಟರ್‌ಟೈನರ್‌ಗಳು ಮತ್ತು ರೋಮ್ಯಾಂಟಿಕ್ ಚಿತ್ರಗಳಿಗೆ ಹೆಸರುವಾಸಿಯಾದ ಗಣೇಶ್, ದಂಡುಪಾಳ್ಯ ನಿರ್ದೇಶಕ ಶ್ರೀನಿವಾಸ್ ರಾಜು ಅವರೊಂದಿಗೆ ಮೊದಲ ಬಾರಿಗೆ ಕೆಲಸ ಮಾಡುತ್ತಿದ್ದಾರೆ. ಇದು ಈ ಯೋಜನೆಯ ಸುತ್ತ ಹಲವು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಪ್ರಾಜೆಕ್ಟ್‌ನ ಅಧಿಕೃತ ಘೋಷಣೆ ಮತ್ತು ತಾರಾಗಣ ಮತ್ತು ಸಿಬ್ಬಂದಿಯ ವಿವರಗಳು ಶೀಘ್ರದಲ್ಲೇ ಹೊರಬರುವ ನಿರೀಕ್ಷೆಯಿದೆ. 

ಈಮಧ್ಯೆ ಗಣೇಶ್ ಅವರ ಮುಂದಿನ, 'ಬಾನದಾರಿಯಲ್ಲಿ' ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ ಮತ್ತು ಬಿಡುಗಡೆಯ ದಿನಾಂಕವನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT