ರಾಮಾಯಣ ಮರು ಪ್ರಸಾರ 
ಸಿನಿಮಾ ಸುದ್ದಿ

ಆದಿಪುರುಷ್ ವಿವಾದದ ನಡುವೆಯೇ ಮತ್ತೆ ಟಿವಿಯಲ್ಲಿ ರಮಾನಂದ್ ಸಾಗರ್ ಅವರ 'ರಾಮಾಯಣ' ಮರು ಪ್ರಸಾರ

ಪ್ರಭಾಸ್ ನಟನೆಯ ನಿರ್ದೇಶಕ ಓಂ ರಾವತ್ ನಿರ್ದೇಶನ ಆದಿಪುರುಷ್ ಚಿತ್ರ ವಿವಾದಕ್ಕೀಡಾಗಿರುವಂತೆಯೇ ಇತ್ತ ಟಿವಿಯಲ್ಲಿ ರಮಾನಂದ್ ಸಾಗರ್ ಅವರ 'ರಾಮಾಯಣ' ಮರು ಪ್ರಸಾರವಾಗಲಿದೆ.

ಮುಂಬೈ: ಪ್ರಭಾಸ್ ನಟನೆಯ ನಿರ್ದೇಶಕ ಓಂ ರಾವತ್ ನಿರ್ದೇಶನ ಆದಿಪುರುಷ್ ಚಿತ್ರ ವಿವಾದಕ್ಕೀಡಾಗಿರುವಂತೆಯೇ ಇತ್ತ ಟಿವಿಯಲ್ಲಿ ರಮಾನಂದ್ ಸಾಗರ್ ಅವರ 'ರಾಮಾಯಣ' ಮರು ಪ್ರಸಾರವಾಗಲಿದೆ.

ಹೌದು.. ಮೂಲ ರಾಮಾಯಣವನ್ನು ತಿರುಚಲಾಗಿದೆ ಎಂಬ ಆರೋಪದಡಿ ಇತ್ತೀಚೆಗೆ ತೆರೆಕಂಡ ಆದಿಪುರುಷ ಚಿತ್ರದ ವಿರುದ್ಧ ದೇಶ, ವಿದೇಶಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿರುವ ಹೊತ್ತಿನಲ್ಲೇ 80ರ ದಶಕದಲ್ಲಿ ದೂರದರ್ಶನದಲ್ಲಿ ಪ್ರದರ್ಶನಗೊಂಡಿದ್ದ ಖ್ಯಾತ ನಿರ್ದೇಶಕ ರಮಾನಂದ ಸಾಗರ್ ಅವರ ‘ರಾಮಾಯಣ’ ಧಾರಾವಾಹಿ ಒಟಿಟಿ ಹಾಗೂ ಚಾನೆಲ್ ಮೂಲಕ ಪ್ರಸಾರ ಮಾಡಲು ಶೆಮಾರೂ ಸಂಸ್ಥೆ ಸಿದ್ಧತೆ ನಡೆಸಿದೆ.

ಮೂಲಗಳ ಪ್ರಕಾರ ಇದೇ ಜುಲೈ 3ರಿಂದ ರಾಮಾಯಣ ಧಾರಾವಾಹಿ ಪ್ರಸಾರವಾಗಲಿದೆ ಎಂದು ಹೇಳಲಾಗಿದೆ. ರಾಮನಾಗಿ ಅರುಣ್ ಗೋವಿಲ್, ಸೀತೆಯಾಗಿ ದೀಪಿಕಾ ಚಿಖಲಿಯಾ ಹಾಗೂ ಲಕ್ಷ್ಮಣನಾಗಿ ಸುನೀಲ್ ಲಹ್ರಿ ಅವರು ಅಭಿನಯಿಸಿದ ರಾಮಾಯಣದ ಮರು ಪ್ರಸಾರ ಜುಲೈ 3ರಿಂದ ಆರಂಭವಾಗಲಿದೆ. ನಿತ್ಯ ಸಂಜೆ 7.30ಕ್ಕೆ ಇದು ಪ್ರಸಾರವಾಗಲಿದೆ ಎಂದು ಶೆಮಾರೂ ಹೇಳಿದೆ.

ದೂರದರ್ಶನದಲ್ಲಿ ಪ್ರಥಮ ಬಾರಿಗೆ ಧಾರಾವಾಹಿ ರೂಪದಲ್ಲಿ ಪ್ರಸಾರವಾದ ರಾಮಾಯಣವನ್ನು ಮರು ಪ್ರಸಾರ ಮಾಡುತ್ತಿರುವ ವಿಷಯವನ್ನು ಶೆಮಾರೂ ತನ್ನ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದರ್ಶನ್‌ಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್: 59ನೇ ಸಿಹೆಚ್ ಹೆಚ್ ಕೋರ್ಟ್ ಆದೇಶ ರದ್ದು!

ಯುಕ್ರೇನ್ ವಿರುದ್ಧದ ಯುದ್ಧ: ಭಾರತದ ಶಾಂತಿ ಪ್ರಯತ್ನಗಳನ್ನು ಸ್ವಾಗತಿಸುತ್ತೇವೆ- ರಷ್ಯಾ; ಆ.11 ರಂದು ಮೋದಿ-ಪುಟಿನ್ ದ್ವಿಪಕ್ಷೀಯ ಮಾತುಕತೆ

ಬಡ ವಿದ್ಯಾರ್ಥಿಗಳ ನೆರವಿಗೆ ಧಾವಿಸಿದ ಸಂಜು ಸ್ಯಾಮ್ಸನ್; 1 ಸಾವಿರ UPSC ಆಕಾಂಕ್ಷಿಗಳಿಗೆ ಸ್ಕಾಲರ್‌ಶಿಪ್!

ಕಾಂಗ್ರೆಸ್ 10 ವರ್ಷದಲ್ಲಿ 50 ಸಾವಿರ ಶೌಚಾಲಯ ಕಟ್ಟಲಿಲ್ಲ, ನಾವು 50 ಸಾವಿರ ರೈಲು ಕೋಚ್ ನಿರ್ಮಿಸಿದೆವು: ಪ್ರಧಾನಿ ಮೋದಿ

'ತಂದೆಯ ಮುಖವನ್ನೇ ನೋಡಿಲ್ಲ': ʻಬಿಗ್‌ ಬಾಸ್‌ʼ ವೇದಿಕೆಯಲ್ಲಿ ಅಪ್ಪ-ಅಮ್ಮನ ಡಿವೋರ್ಸ್‌ ನೋವು ಹಂಚಿಕೊಂಡ ʻಪ್ರೇಮಕಾವ್ಯʼ ನಟಿ ವೈಷ್ಣವಿ!