ವಿಜಯ್ ರಾಘವೇಂದ್ರ - ಹರ್ಷಿಕಾ ಪೂಣಚ್ಚ 
ಸಿನಿಮಾ ಸುದ್ದಿ

ವಿಜಯ ರಾಘವೇಂದ್ರ, ಹರ್ಷಿಕಾ ಪೂಣಚ್ಚ ನಟನೆಯ ‘ಕಾಸಿನಸರ‌‘ ಸಿನಿಮಾ ಮಾರ್ಚ್‌ 3ಕ್ಕೆ ಬಿಡುಗಡೆ

ನಿರ್ದೇಶಕ ಎನ್.ಆರ್. ನಂಜುಂಡೇಗೌಡ ಅವರ ಹೊಸ ಸಿನಿಮಾ ‘ಕಾಸಿನಸರ’ ಬಿಡುಗಡೆಗೆ ದಿನಾಂಕ ನಿಗದಿಯಾಗಿದ್ದು, ಮಾರ್ಚ್‌ 3ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿದೆ.

ಬೆಂಗಳೂರು: ನಿರ್ದೇಶಕ ಎನ್.ಆರ್. ನಂಜುಂಡೇಗೌಡ ಅವರ ಹೊಸ ಸಿನಿಮಾ ‘ಕಾಸಿನಸರ’ ಬಿಡುಗಡೆಗೆ ದಿನಾಂಕ ನಿಗದಿಯಾಗಿದ್ದು, ಮಾರ್ಚ್‌ 3ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿದೆ.

ಸಿನಿಮಾದಲ್ಲಿ ನಟ ವಿಜಯ ರಾಘವೇಂದ್ರ ಅವರು ಪ್ರಗತಿಪರ ರೈತನಾಗಿ ಕಾಣಿಸಿಕೊಂಡಿದ್ದಾರೆ. ನಾಯಕಿಯಾಗಿ ನಟಿ ಹರ್ಷಿಕಾ ಪೂಣಚ್ಚ ‘ಸಂಪಿಗೆ’ ಎಂಬ ಪಾತ್ರದಲ್ಲಿ ನಟಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ನಡೆಯುವ ಕೌಟುಂಬಿಕ ಸಂಬಂಧಗಳ ಸುತ್ತ ಹೆಣೆಯಲಾದ ಕಥಾಹಂದರ ಹೊಂದಿದೆ.

‘ನಾವೆಷ್ಟೇ ಆಧುನಿಕತೆಗೆ ತೆರೆದುಕೊಂಡರೂ, ಕೃತಕ ಬುದ್ಧಿಮತ್ತೆ ಎಷ್ಟೇ ಅಭಿವೃದ್ಧಿಯಾದರೂ, ಬೇರು ಹುಡುಕುತ್ತ ಹಳ್ಳಿಗೇ ಬರಬೇಕು. ಅಲ್ಲಿ ಬದುಕುವ ರೈತರ ಬದುಕನ್ನು ಕಾಣಬೇಕು. ಕಲಾವಿದನಾಗಿ ನಾನು ಹಲವು ಪಾತ್ರಗಳಲ್ಲಿ ನಟಿಸಿದ್ದೇನೆ. ಆದರೆ, ಈ ಪಾತ್ರ ಬಹಳ ಗಂಭೀರವಾದದ್ದು. ಇದೇ ಮೊದಲ ಬಾರಿಗೆ ನಾನು ರೈತನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ’ ಎನ್ನುತ್ತಾರೆ ನಟ ವಿಜಯ ರಾಘವೇಂದ್ರ.

'ಇಲ್ಲಿ ಕಾಸಿನಸರ ಎನ್ನುವುದು ಬರೀ ಒಡವೆಯಲ್ಲ. ಅದಕ್ಕೊಂದು ಒಳಾರ್ಥವಿದೆ. ಶ್ರೀಧರ್ ಸಂಭ್ರಮ್ ಅವರು ಭರಣಿಯ ಮಳೆ ಹೊಯ್ದು ಹಾಡನ್ನು ಅದ್ಭುತವಾಗಿ ಮಾಡಿದ್ದಾರೆ. ವೇಣು ಚಿತ್ರವನ್ನು ಅಷ್ಟೇ ಅದ್ಭುತವಾಗಿ ಸೆರೆಹಿಡಿದಿದ್ದಾರೆ. ಚಿತ್ರದಲ್ಲಿ ಸುಂದರೇಶ ಎಂಬ ವ್ಯವಸಾಯದ ಮೇಲೆ ಭರವಸೆ ಇಟ್ಟಿರುವ ರೈತ ಹೋರಾಟಗಾರನಾಗಿ ನಟಿಸಿದ್ದೇನೆ ಎಂದರು.

ಕಾಸಿನಸರ ಚಿತ್ರದ ದೃಶ್ಯ

ಗ್ರಾಮೀಣ ಭಾಗದಿಂದಲೇ ಬಂದ ದೊಡ್ಡನಾಗಯ್ಯ ಅವರು ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ಅಶ್ವತ್ಥ್ ನೀನಾಸಂ, ಉಮಾಶ್ರೀ, ಸಂಗೀತಾ, ಸುಧಾ ಬೆಳವಾಡಿ, ಹನುಮಂತೇಗೌಡ ಮುಂತಾದವರು ನಟಿಸಿದ್ದು, ವೇಣು ಅವರ ಛಾಯಾಗ್ರಹಣ ಮತ್ತು ಶ್ರೀಧರ್ ಸಂಭ್ರಮ್ ಅವರ ಸಂಗೀತ ಚಿತ್ರಕ್ಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT